ಅರಂತೋಡು-ಅಂಗಡಿ ಮಜಲು ರಸ್ತೆಯ ಡಾಮರು ಮಾಯ!


Team Udayavani, May 17, 2019, 5:50 AM IST

25

ಅರಂತೋಡು: ಅರಂತೋಡು- ಕುಕ್ಕುಂಬಳ-ಅಂಗಡಿಮಜಲು ಮರ್ಕಂಜ ರಸ್ತೆ ತೀರ ಹದಗೆಟ್ಟಿ ವಾಹನ ಸಂಚಾರಕ್ಕೆ ಸಮಸ್ಯೆಯಾಗಿ ಪರಿಣಮಿಸಿದೆ. ಮಾಣಿ-ಮೈಸೂರು ರಸ್ತೆಯ ಅರಂತೋಡು ಪೇಟೆಯಿಂದ ಅರಂತೋಡು- ಕುಕ್ಕುಂಬಳ- ಅಂಗಡಿ ಮಜಲು, ಅಡ್ಕಬಳೆ -ಮರ್ಕಂಜ ರಸ್ತೆ ಕವಲೊಡೆಯುತ್ತದೆ. ಅರಂತೋಡು ಪೇಟೆಯಿಂದ ಸುಮಾರು ಕುಕ್ಕುಂಬಳ ತನಕ ಸುಮಾರು ಒಂದು ಕಿ.ಮೀ. ರಸ್ತೆಯ ಡಾಮರು ಎದ್ದು ಹೋಗಿ ಅಲ್ಲಲ್ಲಿ ಹೊಂಡ-ಗುಂಡಿಯಾಗಿವೆ. ವಾಹನಗಳು ಚಲಿಸುವಾಗ ಜಲ್ಲಿ ಕಲ್ಲುಗಳು ಪಾದಚಾರಿಗಳ ಮೈಮೇಲೆ ಎಸೆಯಲ್ಪಡುತ್ತಿದ್ದು, ಇದರಿಂದ ಅಪಾಯ ಇದೆ. ದ್ವಿಚಕ್ರ ವಾಹನದಲ್ಲಿ ಸಂಚಾರ ಇಲ್ಲಿ ಕಷ್ಟಕರವಾಗಿದೆ. ಈ ರಸ್ತೆಯ ಮೂಲಕ ನೂರಾರು ಪಾದಾಚಾರಿಗಳು, ಶಾಲಾ ಮಕ್ಕಳು ತೆರಳುತ್ತಾರೆ. ರಸ್ತೆಯ ಪಕ್ಕದಲ್ಲಿ ಪ್ರಾಥಮಿಕ ಶಾಲೆ ಇದೆ. ಈ ರಸ್ತೆಯ ಮೂಲಕ ವಿದ್ಯಾರ್ಥಿಗಳು ಶಾಲೆಗೆ ಬರುತ್ತಾರೆ.

ಅಂತರ್‌ ಗ್ರಾಮ ಸಂಪರ್ಕ ರಸ್ತೆ
ಅರಂತೋಡು-ಕುಕ್ಕುಂಬಳ-ಅಂಗಡಿ ಮಜಲು ರಸ್ತೆ-ಮರ್ಕಂಜ ರಸ್ತೆ ನೆರೆಯ ಗ್ರಾಮವಾದ ಮರ್ಕಂಜವನ್ನು ಅತೀ ಹತ್ತಿರದಿಂದ ಸಂಪರ್ಕಿಸುತ್ತದೆ. ಈ ರಸ್ತೆ ಮರ್ಕಂಜ ಗ್ರಾಮದ ಮಿತ್ತಡ್ಕ, ತೇರ್ಥಮಜಲನ್ನು ಮೊದಲಾಗಿ ಸಂಪರ್ಕಿಸುತ್ತದೆ. ಅಲ್ಲಿಂದ ಸುಳ್ಯ-ಸುಬ್ರಹ್ಮಣ್ಯ ರಸ್ತೆಯ ಮೂಲಕ ಸುಬ್ರಹ್ಮಣ್ಯಕ್ಕೆ ಪ್ರಯಾಣ ಮಾಡಬಹುದು.

ಅಭಿವೃದ್ಧಿ ಅಗತ್ಯ
ಅರಂತೋಡು-ಕುಕ್ಕುಂಬಳ,ಅಡ್ಕಬಳೆ- ಮರ್ಕಂಜ ರಸ್ತೆಯ ಅಭಿವೃದ್ದಿ ಅಗತ್ಯವಾಗಿ ನಡೆಯಬೇಕು. ಕೆಲವೆಡೆ ಅರಂತೋಡು ಕುಕ್ಕುಂಬಳ ಸಮೀಪ ಕೆಲವು ಭಾಗ ರಸ್ತೆ ಕಾಂಕ್ರೀಟ್‌ ಆಗಿದೆ. ಆದರೂ ರಸ್ತೆ ತುಂಬಾ ಇಕ್ಕಟಾಗಿದ್ದು, ಕಿರಿದಾಗಿದೆ. ಭವಿಷ್ಯದ ದೃಷ್ಟಿಯಿಂದ ಈ ರಸ್ತೆ ವಿಸ್ತರಣೆಗೊಂಡು ಅಭಿವೃದ್ಧಿ ಕಾಣಬೇಕಾಗಿದೆ.

ಶಾಸಕರ ಗಮನಕ್ಕೆ ತರುತ್ತೇವೆ
ಅರಂತೋಡು ಕುಕ್ಕುಂಬಳ-ಅಡ್ಕಬಳೆ ರಸ್ತೆ ಹದಗೆಟ್ಟಿರುವುದು ನಮ್ಮ ಗಮನಕ್ಕೆ ಬಂದಿದೆ. ಈ ರಸ್ತೆ ಅಭಿವೃದ್ಧಿ ಬಗ್ಗೆ ನಾವು ಶಾಸಕರ ಗಮನಕ್ಕೆ ತರುತ್ತೇವೆ.
– ಜಯಪ್ರಕಾಶ್‌, ಅರಂತೋಡು ಗ್ರಾ.ಪಂ. ಪಿಡಿಒ

- ತೇಜೇಶ್ವರ್‌ ಕುಂದಲ್ಪಾಡಿ

ಟಾಪ್ ನ್ಯೂಸ್

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.