ಎನ್ಸಿಸಿ ಕೆಡೆಟ್ಗಳಿಗೆ ಶಸ್ತ್ರಾಸ್ತ್ರ ಮಾಹಿತಿ
Team Udayavani, Jan 24, 2021, 3:30 PM IST
ಕಾರವಾರ: ಉತ್ತರ ಕನ್ನಡ ಜಿಲ್ಲೆಯ 8 ಕರ್ನಾಟಕ ನೇವಲ್ ಯುನಿಟ್ ಎನ್ಸಿಸಿ ವಾರ್ಷಿಕ ತರಬೇತಿ ಶಿಬಿರವನ್ನು ಕಾರವಾರದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಆಯೋಜಿಸಲಾಗಿದ್ದು, ಶಿಬಿರ ಯಶಸ್ವಿಯಾಗಿ ನಡೆಯುತ್ತಿದೆ.
ಕೋವಿಡ್ ಮುಂಜಾಗ್ರತೆಯೊಂದಿಗೆ ಒಟ್ಟು ಐದು ದಿನಗಳ ಕಾಲ ಶಿಬಿರವನ್ನು ಹಮ್ಮಿಕೊಂಡಿದ್ದು, ಕಳೆದ ಮೂರು ದಿನಗಳಿಂದ ಶಿಬಿರಾರ್ಥಿಗಳಿಗೆ ಶಸ್ತ್ರಾಸ್ತ್ರ ತರಬೇತಿ, ಸೀಮನ್ಶಿಪ್, ನೇವಲ್ ಓರಿಯಂಟೇಶನ್, ನ್ಯಾವಿಗೇಷನ್, ಪರೇಡ್, ಯೋಗ ಸೇರಿದಂತೆ ಇನ್ನಿತರ ಚಟುವಟಿಕೆಗಳ ಬಗ್ಗೆ ತರಬೇತಿ ನೀಡಲಾಗುತ್ತಿದೆ.
ಶಿಬಿರದಲ್ಲಿ ಕಾರವಾರ, ಗೋಕರ್ಣ, ಹೊನ್ನಾವರ, ಕುಮಟಾ ಭಾಗದ 67 ಪುರುಷ ಹಾಗೂ 27 ಮಹಿಳಾ ಕೆಡೆಟ್ ಸೇರಿ ಒಟ್ಟು 94 ಕೆಡೆಟ್ಗಳು ಭಾಗವಹಿಸಿದ್ದಾರೆ. ಕೋವಿಡ್ ಆತಂಕದ ಹಿನ್ನೆಲೆಯಲ್ಲಿ 10 ದಿನಗಳ ಕಾಲ ನಡೆಯುವ ವಾರ್ಷಿಕ ತರಬೇತಿ ಶಿಬಿರವನ್ನು ಈ ಬಾರಿ ಕೇವಲ ಐದು ದಿನಗಳವರೆಗೆ ಮಾತ್ರ ನಡೆಸಲಾಗುತ್ತಿದೆ. ಮಕ್ಕಳಲ್ಲಿ ನಾಯಕತ್ವದ ಗುಣ, ಕ್ರೀಡೆ, ದೇಶಾಭಿಮಾನ, ಸ್ವಯಂ ಸೇವೆಯ ಗುಣಗಳನ್ನು ಬೆಳೆಸುವ ನಿಟ್ಟಿನಲ್ಲಿ ಈ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ.
ಇದನ್ನೂ ಓದಿ:ಹೊಲಿಗೆ ಯಂತ್ರ ವಿತರಣೆ ಕಾರ್ಯಕ್ರಮ ನಾಳೆ
ಯಾವುದೇ ಎನ್ ಸಿಸಿ ಕೆಡೆಟ್ ಗಳು ಸರ್ಟಿಫಿಕೇಟ್ ಪಡೆಯಬೇಕಾದರೆ ಒಂದಾದರೂ ತರಬೇತಿ ಶಿಬಿರದಲ್ಲಿ ಪಾಲ್ಗೊಳ್ಳುವುದು ಕಡ್ಡಾಯವಾಗಿದೆ. ಆದರೆ ಈ ಬಾರಿ ಕೋವಿಡ್ ಕಾರಣದಿಂದ ಇದೇ ಮೊದಲ ಬಾರಿಗೆ ಶಿಬಿರ ಆಯೋಜಿಸಿದ್ದು, ಪ್ರಸ್ತುತ ಶಿಬಿರದಲ್ಲಿ ಬಿ ಮತ್ತು ಸಿ ಸರ್ಟಿಫಿಕೇಟ್ ಕೆಡೆಟ್ಗಳು ಭಾಗವಹಿಸಿದ್ದಾರೆ. ಎಲ್ಲರಿಗೂ ಕೊವಿಡ್ ಟೆಸ್ಟ್ ಮಾಡಿ ಪಾಲಕರಿಂದ ಒಪ್ಪಿಗೆ ಪಡೆದ ಬಳಿಕವೇ ಶಿಬಿರದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇನ್ನು ಘಟಕದ ಕಮಾಂಡಿಂಗ್ ಅಧಿ ಕಾರಿ ಕಮಾಂಡರ್ ಸತ್ಯನಾಥ ಭೋಸಲೆ, ಅಧಿಕಾರಿಗಳಾದ ಲೆಫ್ಟಿನೆಂಟ್ ವಿ.ಆರ್. ಶಾನಭಾಗ, ಸಂತೋಷ್ ಗುಡಿಗರ್, ಗೀತಾ ತಲ್ವಾರ್ ಮತ್ತು ಎನ್ಸಿಸಿ ಘಟಕದ ನೌಕಾಪಡೆಯ ಸಿಬ್ಬಂದಿ ಸೊಹನ್ವೀರ್, ಎಸ್.ಕೆ. ಯಾದವ್, ಸಂಜೀವ್, ವೈ.ಎಲ್. ಬಿರಾದಾರ್, ಎಂ.ಕೆ. ಮೌರ್ಯ ಕೆಡೆಟ್ಗಳಿಗೆ ತರಬೇತಿ ನೀಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’
PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?