ನಿಪ್ಲಿ ಜಲಪಾತ ಸಮೀಪ ವಾಹನ ನಿಲುಗಡೆಗೆ ವ್ಯವಸ್ಥೆ
Team Udayavani, Jul 21, 2019, 1:16 PM IST
ಸಿದ್ದಾಪುರ: ಹಲಗೇರಿ ಗ್ರಾಪಂ ವ್ಯಾಪ್ತಿಯ ಗ್ರಾಮಸ್ಥರೊಂದಿಗೆ ತಹಶೀಲ್ದಾರ್ ಗೀತಾ ಸಿ.ಜಿ. ಸಭೆ ನಡೆಸಿದರು.
ಸಿದ್ದಾಪುರ: ಹಲಗೇರಿ ಗ್ರಾಪಂ ವ್ಯಾಪ್ತಿಯ ನಿಪ್ಲಿ ಜಲಪಾತ ಉಸ್ತುವಾರಿ ಸಮಿತಿ ತಹಶೀಲ್ದಾರ್ ಗೀತಾ ಸಿ.ಜಿ. ಗೌರವ ಅಧ್ಯಕ್ಷತೆಯಲ್ಲಿ ಪಂಚಾಯತ ಅಭಿವೃದ್ಧಿ ಅಧಿಕಾರಿ, ಅಧ್ಯಕ್ಷರು, ಸದಸ್ಯರ ಸಮ್ಮುಖದಲ್ಲಿ ಅಲ್ಲಿನ ಸರಕಾರಿ ಪಡ ಜಮೀನಿನಲ್ಲಿ ಮಳೆಗಾಲದಲ್ಲಿ ತಾತ್ಕಾಲಿಕವಾಗಿ ವ್ಯಾಪಾರಕ್ಕೆ, ವಾಹನಗಳ ಪಾರ್ಕಿಂಗ್ ಹಾಗೂ ಸ್ವಚ್ಛತೆ ನಿರ್ವಹಣೆಗೆ ಹರಾಜು ಪ್ರಕ್ರಿಯೆ ನಡೆಸಿತು.
ಜಲಪಾತದ ಸಮೀಪ ವಾಹನಗಳನ್ನು ಅಚ್ಚುಕಟ್ಟಾಗಿ ನಿಲುಗಡೆಗೊಳಿಸಿ ನಿಗದಿತ ಶುಲ್ಕ ವಸೂಲು ಮಾಡಲು ಹಾಗೂ ಅಲ್ಲಿ ಸ್ವಚ್ಛತೆ ಕಾಪಾಡುವ ಕಾರ್ಯವನ್ನು ನಿಬಂಧನೆ ಮೇರೆಗೆ ರಮೇಶ ನಾರಾಯಣ ನಾಯ್ಕ ಹರಾಜಿನಲ್ಲಿ ಪಡೆದುಕೊಂಡರು. ಜಲಪಾತದ ಸಮೀಪ ಮಳಿಗೆಗಳನ್ನು ಹರಾಜು ಮಾಡಲಾಗಿದ್ದು ದನಕರುಗಳು ಮೇಯಲು ಜಾಗ ಬೇಕಾಗಿದ್ದು ಮತ್ತು ಸ್ವಚ್ಛತೆ ಕಾಪಾಡುವ ದೃಷ್ಟಿಯಿಂದ ಮಳಿಗೆಗಳನ್ನು ಇಡುವುದು ಬೇಡವೆನ್ನುವ ಗ್ರಾಮಸ್ಥರ ಬೇಡಿಕೆ ಮೇರೆಗೆ ಜಲಪಾತದ ಬಳಿ ಯಾವುದೇ ವ್ಯಾಪಾರ ಮಳಿಗೆ ಇರಿಸುವುದು ಮತ್ತು ವ್ಯಾಪಾರ ಮಾಡದಂತೆ ನಿರ್ಬಂಧಿಸಿ ನಿರ್ಣಯ ಕೈಗೊಳ್ಳಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ