ಮತ್ತೆ ಅತಂತ್ರವಾಗುತ್ತಿದೆ ಕಲಾವಿದರ ಬದುಕು

ಬದಲಿ ಉದ್ಯೋಗವೂ ಇಲ್ಲ-ಕಲೆಯ ಪ್ರದರ್ಶನವೂ ಇಲ್ಲ­! ಸೋಂಕಿನ ಎರಡನೇ ಅಲೆ ಸೃಷ್ಟಿಸಿದ ಸಂಕಟ

Team Udayavani, Apr 26, 2021, 8:24 PM IST

jhgdjdjt

ಶಿರಸಿ: ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ವೀಕೆಂಡ್‌ ಕರ್ಫ್ಯೂ, ಸಾಂಸ್ಕೃತಿಕ ಕಾರ್ಯಕ್ರಮಗಳ ನಿಷೇಧದ ಕಾರಣದಿಂದ ಕಲಾಕ್ಷೇತ್ರ ಅತಂತ್ರವಾಗುತ್ತಿದೆ. ಬದಲಿ ಉದ್ಯೋಗವೂ ಇಲ್ಲದೇ, ಇತ್ತ ಕಲಾ ಪ್ರದರ್ಶನವೂ ಇಲ್ಲದೇ ಬದುಕು ನಡೆಸುವುದು ಹೇಗೆ ಎಂಬ ಚಿಂತೆಯಲ್ಲಿ ದಿನ ದೂಡುವಂತೆ ಆಗಿದೆ ಕಲಾವಿದರ ಬದುಕು.

ಕಳೆದ ವರ್ಷದ ಮಾರ್ಚ್‌ನಲ್ಲಿ ಕೋವಿಡ್‌ ಸೋಂಕು ನಿಯಂತ್ರಣಕ್ಕೆ ಹೇರಲಾದ ಲಾಕ್‌ಡೌನ್‌ ಕಾರಣದಿಂದ ಹಾಗೂ ಮೊದಲ ಅಲೆಯ ಸಂಕಷ್ಟದಿಂದ ಹತ್ತು ತಿಂಗಳ ಬಳಿಕ ನಿಧಾನವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳು ಚೇತರಿಕೆಯಾಗುತ್ತಿದ್ದವು. ಉತ್ತರ ಕನ್ನಡದಂತಹ ಸಾಂಸ್ಕೃತಿಕ ಜಿಲ್ಲೆಯಲ್ಲಿ ಕಲೆಯ ಸಂಭ್ರಮ ಮನೆ ಮಾಡುತ್ತಿತ್ತು. ಅದರ ಬೆನ್ನಿಗೇ ಅಪ್ಪಳಿಸಿದ ಕೊರೊನಾದ ಎರಡನೇ ಅಲೆ ಮತ್ತೆ ಕಲಾವಿದರನ್ನು, ಅದನ್ನೇ ನಂಬಿದ ಎಲ್ಲ ಕ್ಷೇತ್ರಗಳೂ ಸಂಕಷ್ಟಕ್ಕೆ ಬಿದ್ದಿವೆ.

ಯಕ್ಷಗಾನ, ಸಂಗೀತ, ಭರತನಾಟ್ಯ, ನಾಟಕ ಸಹಿತವಾದ ಸಾಂಸ್ಕೃತಿಕ ಕಲಾ ಪ್ರದರ್ಶನಗಳಿಗೆ ಜಿಲ್ಲೆಯಲ್ಲಿ ವ್ಯಾಪಕ ಪ್ರೇಕ್ಷಕರಿದ್ದಾರೆ. ಕಲಾವಿದರೂ ಇದ್ದಾರೆ. ಹಳೆ ತಲೆಮಾರಿನ ಜೊತೆಗೆ ಹೊಸ ತಲೆಮಾರೂ ಇದೆ. ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಿದ ಕಲಾವಿದರು ಸಹ ಇದ್ದಾರೆ. ಆದರೆ, ಈಗ ಕೆಲಸವಿಲ್ಲದ ಸ್ಥಿತಿ ನಿರ್ಮಾಣವಾಗಿದೆ. ಕೆಲವು ಕಲಾವಿದರು ಆನ್‌ ಲೈನ್‌ ತರಗತಿಗಳತ್ತ ಮತ್ತೆ ಮುಖ ಮಾಡಿದ್ದಾರೆ. ಜಿಲ್ಲೆಯಲ್ಲಿ ಪ್ರತಿವರ್ಷ ಸಾವಿರಾರು ವೈವಿಧ್ಯಮಯ ಕಾರ್ಯಕ್ರಮಗಳು ನಡೆಯುತ್ತಿದ್ದವೆ.

ಒಂದು ಸಾವಿರದಷ್ಟು ಯಕ್ಷಗಾನ ಪ್ರದರ್ಶನಗಳು ನಡೆಯುತ್ತಿದ್ದವು. ಭರತನಾಟ್ಯ, ಸಂಗೀತ ಕಾರ್ಯಕ್ರಮಗಳೂ ನಡೆಯುತ್ತಿದ್ದವು. ಸಾವಿರಾರು ಕಲಾವಿದರು ಕಲಾ ಪ್ರದರ್ಶನಗಳಿಂದಲೇ ಬದುಕು ನಡೆಸುತ್ತಿದ್ದರು. ಯಕ್ಷಗಾನ ಕಲಾವಿದರಂತೂ ರಾತ್ರಿ ರಂಗು ರಂಗಿನ ಬೆಳಕಿನ ಪ್ರದರ್ಶನ ನೀಡಿ, ಹಗಲು ವಿಶ್ರಾಂತಿ ಪಡೆಯುತ್ತಿದ್ದರು. ಸಾಧನೆ ಮಾಡಿದ ಸಂಗೀತ ಕಲಾವಿದರು ರಸದೌತಣ ನೀಡುತ್ತಿದ್ದರು. ಕಳೆದ ವರ್ಷ ಪ್ರವೇಶ ಕೊಟ್ಟ ಕೊರೊನಾದ ಬಳಿಕ ಕಳೆದ ಡಿಸಂಬರ್‌ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಒಂದೊಂದೇ ಆರಂಭವಾಗಿದ್ದವು. ಯಕ್ಷಗಾನ ಪ್ರದರ್ಶನಗಳು, ಮೇಳದ ತಿರುಗಾಟಗಳು, ಮನೆಯಂಗಳದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳೂ ಶುರುವಾಗಿದ್ದವು. ಧಾರ್ಮಿಕ ಕಾರ್ಯಕ್ರಮಗಳಲ್ಲೂ ಸಾಂಸ್ಕೃತಿಕ ಆಯಾಮಗಳೂ ಸಿಕ್ಕಿದ್ದವು. ಮೊದಲಿನಷ್ಟು ವೇಗ ಇಲ್ಲದಿದ್ದರೂ ಬದುಕಿಗೆ ಆಸರೆಯಾಗುವ ಹಂತಕ್ಕೆ ಸ್ಥಿತಿ ನಿರ್ಮಾಣ ಆಗಿದ್ದವು.

ಯಕ್ಷಗಾನ, ನಾಟಕ, ಸಂಗೀತ, ನಾಟ್ಯಕಲಾ ಪ್ರದರ್ಶನ ಎಂದರೆ ನೂರಾರು ಮಂದಿ ಪ್ರೇಕ್ಷಕರು ಪಾಲ್ಗೊಳ್ಳುವುದು ಸಹಜವಾಗಿದೆ. ಆದರೆ ಹೀಗೆ ಸೇರುವ ಜನರಲ್ಲಿ ಮಾರಕ ಕಾಯಿಲೆ ಹರಡಬಹುದು ಎಂಬ ಕಾರಣಕ್ಕೆ ಸರಕಾರ ಪ್ರಾರಂಭದಲ್ಲಿ ನಿರ್ಬಂಧಗಳನ್ನು ಮತ್ತು ನಂತರದಲ್ಲಿ ನಿಷೇಧ ಹೇರಿದ್ದು ಸರಿಯಾಗಿದೆ. ಈ ಮಧ್ಯೆ ಕೆಲವರು ನಿಗದಿ ಮಾಡಿದ್ದ ಕಾರ್ಯಕ್ರಮವನ್ನೂ ರದ್ದುಗೊಳಿಸಿದ್ದಾರೆ.

ಕಲಾವಿದರು ಮಾತ್ರವಲ್ಲ, ಪ್ರಸಾದನ ವ್ಯವಸ್ಥೆ ಮಾಡುವವರು, ಲೈಟ್‌, ಮೈಕ್‌, ಶಾಮಿಯಾನ, ಖುರ್ಚಿ ವ್ಯವಸ್ಥೆ ಮಾಡುವವರಿಗೆ ಕೂಡ ಇದರ ಪರಿಣಾಮ ಉಂಟಾಗಿದೆ. ಆದರೆ, ಕಲಾಕ್ಷೇತ್ರವನ್ನೇ ನಂಬಿದವರ ಸ್ಥಿತಿ ಸಂಕಟಕ್ಕೆ ತಂದಿದೆ. ಬೆರಳೆಣಿಕೆಯಷ್ಟು ಕಲಾವಿದರಿಗೆ ಮಾತ್ರ ಅಷ್ಟೊಂದು ಏಟಾಗದೇ ಇದ್ದರೂ ಬಹುಪಾಲು ಸಂಕಷ್ಟಕ್ಕೆ ದೂಡಿದೆ ಎನ್ನುತ್ತಾರೆ ಕಲಾವಿದರು. ಸರಕಾರ ಏನಾದರೂ ಮಾಡಿ ಕಲಾಕ್ಷೇತ್ರಕ್ಕೂ ನೆರವಾಗಬೇಕು ಎಂಬ ಆಗ್ರಹ ಕೂಡ ವ್ಯಕ್ತವಾಗಿದೆ.

ಟಾಪ್ ನ್ಯೂಸ್

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.