ಯಲ್ಲಾಪುರ ಜಿಲ್ಲಾ ಕೇಂದ್ರ ಮಾಡಲು ಕಲಾವಿದರ ಒತ್ತಾಯ
Team Udayavani, Oct 19, 2019, 4:25 PM IST
ಯಲ್ಲಾಪುರ: ಯಲ್ಲಾಪುರವನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಬೇಕೆಂದು ಆಗ್ರಹಿಸಿ ಶ್ರೀಗುರು ಜಿಲ್ಲಾ ರಂಗಭೂಮಿ ಕಲಾವಿದರ ವೇದಿಕೆ ವತಿಯಿಂದ ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.
ಉ.ಕ. ಜಿಲ್ಲೆ ಭೌಗೋಳಿಕವಾಗಿ ಘಟ್ಟದ ಮೇಲಿನ ಹಾಗೂ ಘಟ್ಟದ ಕೆಳಗಿನ ತಾಲೂಕುಗಳಿವೆ. ಜನಸಾಮಾನ್ಯರ ಹಿತದೃಷ್ಟಿಯಿಂದ ಹಾಗೂ ಅಭಿವೃದ್ಧಿ ತ್ವರಿತವಾಗಿ ಮಾಡಲು ಜಿಲ್ಲೆಯನ್ನು ವಿಭಜಿಸುವುದು ಸೂಕ್ತವಾಗಿದೆ. ಘಟ್ಟದ ಮೇಲಿನ ಜೋಯಿಡಾ, ದಾಂಡೇಲಿ, ಹಳಿಯಾಳ, ಮುಂಡಗೋಡ, ಯಲ್ಲಾಪುರ, ಶಿರಸಿ, ಸಿದ್ದಾಪುರ ತಾಲೂಕುಗಳಿಗೆ ಮಧ್ಯವರ್ತಿ ಸ್ಥಳವಾಗಿದೆ.
ಕವಡಿಕೇರಿ ಮತ್ತು ಮಾಗೋಡ ಕಾಲನಿಯಲ್ಲಿ ಜಿಲ್ಲಾ ಕೇಂದ್ರ ವಿವಿಧ ಕಚೇರಿಗಳನ್ನು ಮಾಡಲು ಜಾಗ ಸೂಕ್ತವಾಗಿದೆ. ಕಾರಣ ಘಟ್ಟದ ಮೇಲಿನ ಎಲ್ಲಾ ತಾಲೂಕುಗಳಿಗೆ ಮಧ್ಯವರ್ತಿ ಸ್ಥಳವಾದ ಯಲ್ಲಾಪುರವನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಬೇಕೆಂದು ಒತ್ತಾಯಿಸಿದ್ದಾರೆ. ಶ್ರೀಗುರು ರಂಗಭೂಮಿ ಕಲಾವಿದರ ವೇದಿಕೆ ಜಿಲ್ಲಾಧ್ಯಕ್ಷ ಜೈರಾಮ ಭಟ್ಟ, ಪ್ರಮುಖರಾದ ದಿಲೀಪ ದೊಡ್ಡಮನಿ, ಎಂ.ಎ.ಬಾಗೇವಾಡಿ, ಶ್ರೀಧರ ಮಡಿವಾಳ, ಕೆ.ಎಸ್. ಭಟ್ಟ ಆನಗೋಡ, ಶ್ರೀಧರ ಅಣಲಗಾರ, ಐ.ಕೆ. ಬಿರಾದಾರ ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ