ಕಾರವಾರ: ಸಹಾಯಕ ಕಮಿಷನರ್ ಕಚೇರಿ ಆಕೌಂಟೆಂಟ್ ನೇಣಿಗೆ ಶರಣು
Team Udayavani, Feb 3, 2022, 3:33 PM IST
ಕಾರವಾರ : ಇಲ್ಲಿಯ ಸಹಾಯಕ ಕಮಿಷನರ್ ಕಚೇರಿ ಆಕೌಂಟೆಂಟ್ ನೇಣಿಗೆ ಶರಣಾದ ಘಟನೆ ಗುರುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.
ಸಹಾಯಕ ಕಮಿಷನರ್ ಕಚೇರಿಯಲ್ಲಿ ಲೆಕ್ಕಾಧಿಕಾರಿಯಾಗಿದ್ದ ಈಶ್ವರ ಭಟ್ (38) ಕಾರವಾರ ನಗರದ ಹೊಟೇಲ್ ಒಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್ ನೋಟ್ ಬರೆದಿಟ್ಟಿದ್ದು ಪತ್ನಿಯ ಕ್ಷಮೆ ಕೋರಿದ್ದಾರೆ.
ಮೂಲತಃ ಹೊನ್ನಾವರದ ನಿವಾಸಿಯಾಗಿದ್ದ ಈಶ್ವರ ಭಟ್, ಅನಾರೋಗ್ಯದ ಕಾರಣದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಬರೆದಿದ್ದಾರೆ.
ಪತ್ನಿ ಮತ್ತು ಪೊಲೀಸರಿಗೆ ಪ್ರತ್ಯೇಕ ಡೆತ್ನೋಟ್ ಅನ್ನು ಇರಿಸಿದ್ದು,ನಾನು ನಿಮಗಾಗಿ ಆಸ್ತಿ ಮಾಡಿಲ್ಲ, ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳುವಂತೆ ಪತ್ನಿಗೆ ಪತ್ರದಲ್ಲಿ ಕೋರಿದ್ದಾರೆ. ಈಶ್ವರ ಭಟ್ಟರ ಪತ್ನಿ ಸಹ ಸರ್ಕಾರಿ ಉದ್ಯೋಗದಲ್ಲಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಕಾರವಾರ ನಗರ ಠಾಣೆ ಪೊಲೀಸ್ ಭೇಟಿ ಪರಿಶೀಲನೆ ನಡೆಸಿದ್ದು , ಪ್ರಕರಣ ದಾಖಲಿಸಿಕೊಂಡಿದ್ದಾರೆ.