ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾಪಟುಗಳು ಬೆಳೆಯಲಿ


Team Udayavani, Sep 9, 2018, 3:49 PM IST

9-sepctember-23.jpg

ಕುಮಟಾ: ಭಾರತದ ಜನಸಂಖ್ಯೆಗೆ ತಕ್ಕಂತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅತಿಹೆಚ್ಚಿನ ಕ್ರೀಡಾ ಸಾಧನೆ ಆಗಬೇಕಿದೆ. ಈ ನಿಟ್ಟಿನಲ್ಲಿ ಭವಿಷ್ಯದ ಸಫಲ ಕ್ರೀಡಾಪಟುಗಳನ್ನು ತಯಾರು ಮಾಡುವ ಹೊಣೆ ನಮ್ಮ ನಿಮ್ಮೆಲ್ಲರ ಮೇಲಿದೆ ಎಂದು ಶಾಸಕ ದಿನಕರ ಶೆಟ್ಟಿ ತಿಳಿಸಿದರು. ಅವರು ಕಡ್ಲೆ ಗಾಂಧೀವನ ಕ್ರೀಡಾಂಗಣದಲ್ಲಿ ಹೊಲನಗದ್ದೆ ಸರಕಾರಿ ಹಿಪ್ರಾ ಶಾಲೆ ಮುಂದಾಳತ್ವದಲ್ಲಿ ತಾಲೂಕು ಮಟ್ಟದ 14 ವರ್ಷದೊಳಗಿನ ಪ್ರಾಥಮಿಕ ಶಾಲಾ ಮಕ್ಕಳ ಇಲಾಖಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.

ಆರ್ಥಿಕತೆಯ ಸಮಸ್ಯೆಯಿಂದ ಕ್ರೀಡಾಪಟುಗಳಿಗೆ ಸಾಧನೆ ಅಡ್ಡಿಯಾಗಬಾರದು. ಈ ನಿಟ್ಟಿನಲ್ಲಿ ಕ್ರೀಡಾ ಪ್ರತಿಭೆಗಳಿಗೆ ಎಲ್ಲರೂ ಕೈಲಾದ ಸಹಾಯ, ಸಹಕಾರ ನೀಡಬೇಕು ಎಂದರು. ಕಡ್ಲೆ ಕ್ರೀಡಾಂಗಣವು ಅರಣ್ಯ ಇಲಾಖೆ ಕ್ಷೇತ್ರಕ್ಕೊಳಪಟ್ಟಿರುವುದರಿಂದ ಇದನ್ನು ಅಭಿವೃದ್ಧಿ ಪಡಿಸಲು ಸಮಸ್ಯೆಯಾಗಿದೆ. ಸಂಬಂಧಪಟ್ಟ ದಾಖಲಾತಿಗಳನ್ನು ಪೂರೈಸಿ ಪ್ರಸ್ತಾವನೆ ಇಟ್ಟರೆ ಅದನ್ನು ಅರಣ್ಯ ಇಲಾಖೆಯಿಂದ ಮಂಜೂರಿಗೊಳಿಸುತ್ತೇನೆ ಎಂದು ಭರವಸೆ ನೀಡಿದರು.

ಜಿಪಂ ಸದಸ್ಯ ರತ್ನಾಕರ ನಾಯ್ಕ ಮಾತನಾಡಿ, ಇಷ್ಟೊಂದು ಸುಂದರ ಕ್ರೀಡಾಂಗಣ ಜಿಲ್ಲೆಯಲ್ಲೇ ಬೇರೆಲ್ಲೂ ಇಲ್ಲ. ಇದರ ಅಭಿವೃದ್ಧಿ ಅಗಲೇಬೇಕು. ಈ ನಿಟ್ಟಿನಲ್ಲಿ ಸ್ಥಳೀಯವಾಗಿ ಹಲವರು ಕೈಜೋಡಿಸಿ ಸಾಕಷ್ಟು ಪ್ರಯತ್ನ ಮಾಡಿದ್ದೇವೆ ಎಂದರು.

ಅಚ್ಚುಕಟ್ಟಾಗಿ ಕ್ರೀಡಾಕೂಟ ಸಂಘಟಿಸಿದ್ದರೂ ಮೇಲಧಿಕಾರಿಗಳು ನಮಗೆ ಬೆನ್ನು ತಟ್ಟಿ ಪ್ರೋತ್ಸಾಹಿಸುವ ಬದಲು ಸಿದ್ಧತೆಗಳಿಗೂ ಮುಖತಿರುವಿ, ಕಾರ್ಯಕ್ರಮಕ್ಕೂ ಬಾರದೇ ಇರುವುದು ವಿಷಾದನೀಯ ಎಂದು ಕ್ರೀಡಾಕೂಟದ ಮುಖ್ಯಸಂಯೋಜಕ, ದೈಹಿಕ ಶಿಕ್ಷಕರ ಸಂಘದ ರಾಜ್ಯ ಘಟಕದ ರವೀಂದ್ರ ಭಟ್ಟ ಸೂರಿ ಶಾಸಕರ ಗಮನಸೆಳೆದರು.

ಅಧ್ಯಕ್ಷತೆ ವಹಿಸಿದ್ದ ವಿಜಯಾ ಪಟಗಾರ, ಜಿಪಂ ಸದಸ್ಯ ಗಜಾನನ ಪೈ, ಹೊಲನಗದ್ದೆ ಪಂಚಾಯತ ಅಧ್ಯಕ್ಷ ರಾಘವೇಂದ್ರ ಪಟಗಾರ, ಸದಸ್ಯರಾದ ರಾಮಾ ಮಡಿವಾಳ, ಡಯಟ್‌ ಪ್ರಾಚಾರ್ಯ ಈಶ್ವರ ನಾಯ್ಕ, ಎಸ್‌ಡಿಎಂಸಿ ಅಧ್ಯಕ್ಷೆ ದೀಪಾ ಹಿಣಿ, ಗಣಪತಿ ಮುಕ್ರಿ, ಶಿಕ್ಷಕರ ಸಂಘದ ಆನಂದು ಗಾಂವಕರ, ದೈಹಿಕ ಶಿಕ್ಷಕರ ಸಂಘದ ಬಿ.ಜಿ. ನಾಯಕ ಮತ್ತಿತರರು ಇದ್ದರು. ದೈಹಿಕ ಶಿಕ್ಷಣ ಪರಿವೀಕ್ಷಕ ಎಸ್‌.ಎಸ್‌. ಭಟ್ಟ ಸ್ವಾಗತಿಸಿದರು. ಶಿಕ್ಷಕ ವಸಂತ ಶಾನಭಾಗ ಪ್ರತಿಜ್ಞಾವಿಧಿ ಬೋಧಿಸಿದರು. ನಿವೃತ್ತ ದೈಹಿಕ ಶಿಕ್ಷಕ ಗೋಪಾಲ ಆಗೇರ ಹಾಗೂ ಹೊಲನಗದ್ದೆ ಶಾಲೆಯ ಮುಖ್ಯ ಶಿಕ್ಷಕ ಗಣಪತಿ ನಾಯ್ಕರನ್ನು ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.