ಕಾಡಿನಲ್ಲಿ ಕೆಲಸ ಮಾಡಿದವರಿಗೆ ಪ್ರಶಸ್ತಿ


Team Udayavani, Oct 2, 2019, 1:29 PM IST

Udayavani Kannada Newspaper

ಶಿರಸಿ: ಕಾಡಿನಲ್ಲಿ ಕೆಲಸ ಮಾಡಿ, ಅರಣ್ಯಗಳ್ಳತನ, ವನ್ಯಜೀವಿ ರಕ್ಷಣೆಯಲ್ಲಿ ಕೆಲಸ ಮಾಡಿದ ಅರಣ್ಯ ಇಲಾಖೆ ಪ್ರಾಮಾಣಿಕ, ನೇರ ಅಧಿಕಾರಿಗಳಿಗೆ ನೀಡಲಾಗುವ ಮುಖ್ಯಮಂತ್ರಿಗಳ ಚಿನ್ನದ ಪ್ರಶಸ್ತಿಗೆ ರಾಜ್ಯದ 32 ವೃತ್ತಗಳಿಂದ 25 ಸಿಬ್ಬಂದಿಗೆ ಪ್ರಶಸ್ತಿ ಘೋಷಣೆಯಾಗಿದೆ.

ಇಲಾಖೆಯ ಪ್ರತ್ಯೇಕ ಐದು ವಿಭಾಗಗಳಲ್ಲಿ ಪಶಸ್ತಿ ಪ್ರಕಟಿಸಲಾಗಿದೆ. ಈ ಪೈಕಿ ಕೆನರಾ ಅರಣ್ಯ ವೃತ್ತದ ಸಿಬ್ಬಂದಿ ಹೆಚ್ಚಿನ ಪ್ರಶಸ್ತಿಗಳನ್ನು ಬಾಚಿಕೊಂಡು ಅರಣ್ಯಾದಾಯ ಕೊಡುವ ಜೊತೆಗೆ, ರಕ್ಷಣೆಯಲ್ಲೂ ಮುಂದಿದೆ!

ಕೆನರಾ ಅರಣ್ಯ ವೃತ್ತಕ್ಕೆ ಆರು ಪ್ರಶಸ್ತಿಗಳು ಬಂದಿದ್ದು, 4 ಪ್ರಶಸ್ತಿ ಬಾಚಿಕೊಂಡ ಧಾರವಾಡ ನಂತರದ ಸ್ಥಾನದಲ್ಲಿದೆ. ಬಳ್ಳಾರಿ, ಚಿಕ್ಕಮಗಳೂರು ಅರಣ್ಯ ವೃತ್ತಗಳು ತಲಾ ಮೂರು ಪ್ರಶಸ್ತಿ ಪಡೆದು ಮೂರನೇ ಸ್ಥಾನದಲ್ಲಿವೆ.

ಏನಿದು ಪ್ರಶಸ್ತಿ?: ಅರಣ್ಯ ಇಲಾಖೆಯಲ್ಲಿ ಪ್ರಾಮಾಣಿಕವಾಗಿ ವನ್ಯಜೀವಿ ರಕ್ಷಣೆ, ಅರಣ್ಯ ಸಂರಕ್ಷಣೆ, ಅಪರಾಧ ಚಟುವಟಿಕೆ ನಿಯಂತ್ರಿಸಿದ, ಅರಣ್ಯ ನಿರ್ವಹಣೆ ತರಬೇತಿ, ಸಂಶೋಧನೆ, ಕ್ರೀಡಾಕೂಟದಲ್ಲಿ ಪಾಲ್ಗೊಂಡ ಸಾಧಕ ಅರಣ್ಯ ಇಲಾಖೆ ಸಿಬ್ಬಂದಿಗೆ ಪ್ರಶಸ್ತಿ ಇದು. ಶೌರ್ಯತನ, ದಿಟ್ಟತನ ತೋರಿದ ಅಧಿಕಾರಿಗಳಿಗೂ ಪ್ರಶಸ್ತಿ. ವೃತ್ತ ಮಟ್ಟದಿಂದ ಸ್ವೀಕೃತವಾದ ಅರ್ಜಿಗಳನ್ನು ಕಳೆದ ಜು.17 ರಂದು ರಾಜ್ಯ ಮಟ್ಟದ ಸಭೆಯಲ್ಲಿ ಅಖೈರುಗೊಳಿಸಿದ ಪ್ರಸ್ತಾವನೆಗೆ ಕಳೆದ ಸೆ.30 ರಂದು ಸರಕಾರದ ಅಧೀನ ಕಾರ್ಯದರ್ಶಿ ಪಿ.ವಿ. ಶ್ರೀನಿವಾಸನ್‌ ಮುಖ್ಯಮಂತ್ರಿಗಳ ಪದಕ ಪ್ರದಾನಕ್ಕೆ ಸಹಿ ಹಾಕಿದ್ದಾರೆ.

ಯಾರಿಗೆಲ್ಲ ಬಂತು?: ಚಿಕ್ಕಮಗಳೂರು ವೃತ್ತದ ವಲಯಾರಣ್ಯಾಧಿಕಾರಿ ಶಿಲ್ಪಾ ಎಸ್ಸೆಲ್‌, ಮಂಜುನಾಥ ಎಚ್‌.ವಿ, ಬಳ್ಳಾರಿಯ ಎ.ಎಚ್‌. ಮುಲ್ಲಾ, ಗುರುನ ಗೌಡ ಪಾಟೀಲ, ಧಾರವಡದ ಡಿ.ಜಿ. ಕನ್ನಜ್ಜವನರ್‌, ಕೆನರಾ ವೃತ್ತದ ಶಿರಸಿಯಲ್ಲಿ ಕೆಲಸ ಮಾಡಿದ್ದ ವಿ.ಮುನಿರಾಜು, ಬೆಳಗಾವಿಯ ಎ.ವೈ. ಪಾಟೀಲ, ಉಪ ವಲಯ ಅರಣ್ಯಾಧಿಕಾರಿಗಳಾದ ಧಾರವಾಡದ ಶಂಕರಪ್ಪ ಮಾಣಿ, ಎಸ್‌.ಬಿ.ಪೂಜಾರ, ಚಾಮರಾಜನಗರದ ಚಂದ್ರಕುಮಾರ ಆರ್‌, ಕೆನರಾದ ಹರಿಶ್ಚಂದ್ರ ಪಟಗಾರ, ವೈ.ಎಲ್‌. ಲಮಾಣಿ, ಬೆಳಗಾವಿಯ ಜಿ.ಎಂ. ಬಾಯಣ್ಣವರ್‌, ಬೆಂಗಳೂರು ತನೂರ್‌ ಅಹಮದ್‌, ಕೊಡಗಿನ ವೈ.ಕೆ. ಜಗದೀಶ, ಬಳ್ಳಾರಿಯ ರಾಮಣ್ಣ, ಅರಣ್ಯ ರಕ್ಷಕರಾದ ಕೆನರಾದ ತಾರಾ ನಾಯ್ಕ, ಬೆಂಗಳೂರಿನ ಅನಿಲಕುಮಾರ ಎಸ್‌. ಜೆ., ಧಾರವಾಡದ ಗಿರೀಶ ಅಗಸಾಲೆ, ಚಾಮರಾಜ ನಗರದ ಮುತ್ತುರಾಜ ಬಿ., ಮಂಗಳೂರಿನ ಮೋಹನ, ಹಾಸನದ ಮಲ್ಲಯ್ಯ ಪಡೆದಿದ್ದಾರೆ.

ಮಾವುತರಿಗೂ: ಅರಣ್ಯ ಸಂರಕ್ಷಣೆ ಜೊತೆಗೆ ಆನೆಗಳನ್ನು ಪಳಗಿಸಿದ ಮಾವುತರಿಗೂ ಪ್ರಶಸ್ತಿ ಲಭಿಸಿದೆ. ಆನೆ ಮಾವುತ ಚಿಕ್ಕಮಗಳೂರಲ್ಲಿ ಚಿಕ್ಕಮಗಿ ಅಂಥೋಣಿ ಯು.ಆರ್‌. ಅವರಿಗೆ ಲಭಿಸಿದೆ. ಅರಣ್ಯ ಸಂರಕ್ಷಣೆಯಲ್ಲಿ ವಿಶೇಷ ಪಾಲು ನೀಡುವ ಅರಣ್ಯ ವೀಕ್ಷಕರಾದ ಕೆನರಾ ವೃತ್ತದ ಗೋಪಾಲ ಗೌಡ, ಪರಶುರಾಮ ತೋರಸ್ಕರಗೆ ಮುಖ್ಯಮಂತ್ರಿಗಳ ಪದಕ ಪ್ರಾಪ್ತವಾಗಿದೆ.

ಅರಣ್ಯ ರಕ್ಷಣೆಗಾಗಿ ಗುದ್ದಾಟ ಮಾಡಿದ್ದಕ್ಕೆ ಸರಕಾರ ಬೆನ್ನುತಟ್ಟಿದೆ. ಇದು ಇನ್ನಷ್ಟು ಕೆಲಸ ಮಾಡುವ ಉಮೇದು ನೀಡಿದೆ. ವಿ.ಮುನಿರಾಜು, ಶಿರಸಿಯಲ್ಲಿ ಕೆಲಸ ಮಾಡಿ ಹೆಬ್ರಿಗೆ ವರ್ಗಾವಣೆಗೊಂಡ ಅರಣ್ಯಾಧಿಕಾರಿ

ಪ್ರತೀ ವರ್ಷ ಈ ಪ್ರಶಸ್ತಿಯನ್ನು ವಿಶ್ವ ಪರಿಸರ ದಿನಾಚರಣೆಗೇ ನೀಡುವಂತಾಗಬೇಕು. ಆ ಮೂಲಕ ಪರಿಸರ ಸಂರಕ್ಷಣೆಗೆ ಟೊಂಕ ಕಟ್ಟಿದ ಅಧಿಕಾರಿಗಳನ್ನೂ ಅಭಿನಂದಿಸಿದಂತಾಗುತ್ತದೆ. ರಮೇಶ ಹಳೇಕಾನಗೋಡ, ಪರಿಸರ ಕಾರ್ಯಕರ್ತ

 

ರಾಘವೇಂದ್ರ ಬೆಟ್ಟಕೊಪ್ಪ

ಟಾಪ್ ನ್ಯೂಸ್

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.