Kadambotsava: ಮಾರ್ಚ್ 5ರಂದು ಬನವಾಸಿ ಕದಂಬೋತ್ಸವ… ಆಹ್ವಾನ ಪತ್ರಿಕೆ ಬಿಡುಗಡೆ
Team Udayavani, Feb 29, 2024, 12:20 PM IST
ಶಿರಸಿ: ರಾಜ್ಯ ಮಟ್ಟದ ಕದಂಬೋತ್ಸವ ಮಾರ್ಚ್ 5 ಹಾಗೂ 6 ರಂದು ತಾಲೂಕಿನ ಬನವಾಸಿಯಲ್ಲಿ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ 5ರ ಸಂಜೆ 6ಕ್ಕೆ ಉದ್ಘಾಟಿಸಲಿದ್ದಾರೆ.
ಎರಡು ದಿನಗಳ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸ್ಥಳೀಯ ಪ್ರತಿಭೆಗಳ ಜೊತೆಗೆ ಮೊದಲ ದಿನ ರಘು ದೀಕ್ಷಿತ್ ತಂಡ ಹಾಗೂ ಎರಡನೇ ದಿನ ಹರಿಕೃಷ್ಣ ತಂಡ ಬೆಂಗಳೂರು ಕಾರ್ಯಕ್ರಮ ನೀಡಲಿದ್ದಾರೆ.
ಶಿರಸಿಯಲ್ಲಿ ಉತ್ಸವ ಸಮಿತಿ ಕಾರ್ಯದರ್ಶಿ ಎಸಿ ಅಪರ್ಣಾ ರಮೇಶ ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಿ, ಈಗಾಗಲೇ ಉತ್ಸವದ ಸಿದ್ದತೆ ನಡೆದಿದೆ. ಸರಕಾರ ಕೂಡ 2 ಕೋ.ರೂ.ಬಿಡುಗಡೆಗೆ ಮಾಡಿದ ವರದಿ ಬಂದಿದೆ ಎಂದರು.
ಈ ವೇಳೆ ತಹಸೀಲ್ದಾರ ಶ್ರೀಧರ ಮುಂದಲಮನಿ, ಉಪ ತಹಶೀಲ್ದಾರರಾದ ಶ್ರೀಕೃಷ್ಣ ಕಾಮಕರ, ರಮೇಶ ಹೆಗಡೆ, ಬಿಇಓ ನಾಗರಾಜ ನಾಯ್ಕ, ಇಓ ಸತೀಶ ಹೆಗಡೆ ಇತರರು ಇದ್ದರು.
ಸಾಂಪ್ರದಾಯಿಕವಾಗಿ ಪಂಪ ಪ್ರಶಸ್ತಿ ಕದಂಬೋತ್ಸವದಲ್ಲಿ ಪ್ರಧಾನ ಆಗಬೇಕಿತ್ತು. ಆದರೆ, ಈ ಬಾರಿ ಬೆಂಗಳೂರಿನಲ್ಲಿ ನಾ.ಡಿಸೋಜ ಅವರಿಗೆ ಪ್ರಧಾನ ಆಗಿದೆ ಎಂಬುದೂ ಉಲ್ಲೇಖನೀಯ.
ಹೆಬ್ಬಾರ್ ಗೈರು!
ಪ್ರತಿ ಕದಂಬೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಯಿಂದ ಎಲ್ಲ ಹಂತದಲ್ಲೂ ಸಕ್ರೀಯವಾಗಿ ಇರುತ್ತಿದ್ದ ಸ್ಥಳೀಯ ಶಾಸಕ ಶಿವರಾಮ ಹೆಬ್ಬಾರ್ ಈ ಬಾರಿ ಆಹ್ವಾನ ಪತ್ರಿಕೆ ಬಿಡುಗಡೆಯಲ್ಲಿ ಗೈರಾದರು. ರಾಜ್ಯ ರಾಜಕೀಯ ವಿದ್ಯಮಾನಗಳ ಬೆನ್ನಲ್ಲೇ ಕದಂಬೋತ್ಸವ ಕೂಡ ನಡೆಯುತ್ತಿದ್ದು, ಹೆಬ್ಬಾರ್ ಅವರ ಗೈರು ಅನೇಕ ಅರ್ಥಗಳಿಗೆ ಕಾರಣವಾಗಿದೆ.
ಇದನ್ನೂ ಓದಿ: Himachal: ಅಡ್ಡಮತದಾನ ಮಾಡಿದ 6 ಮಂದಿ ಕೈ ಶಾಸಕರು ಸದಸ್ಯತ್ವದಿಂದ ಅನರ್ಹ: ಸ್ಪೀಕರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ
Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು