ಬ್ಯಾರೇಜ್‌ ನಿರ್ಮಾಣ ಅನಿವಾರ್ಯ


Team Udayavani, Feb 22, 2020, 2:58 PM IST

uk-tdy-1

ಸಾಂಧರ್ಬಿಕ ಚಿತ್ರ

ಕಾರವಾರ: ಬೇಸಿಗೆ ಆರಂಭಕ್ಕೆ ಇನ್ನೇನು 75 ದಿನ ಬಾಕಿಯಿದೆ. ಆದರೆ, ಕಾರವಾರ ನಗರದ ನಿವಾಸಿಗಳಿಗೆ ಈಗಲೇ ಕುಡಿಯುವ ನೀರಿನ ಬರ ಎದುರಾಗುವ ಆತಂಕ ಕಾಡುತ್ತಿದೆ. ಜೊತೆಗೆ ಕದಂಬ ನೌಕಾನೆಲೆ ಸಹ ನೀರು ಪೂರೈಕೆಗೆ ಬೇಡಿಕೆಯಿಟ್ಟಿದ್ದು, ಬ್ಯಾರೇಜ್‌ ನಿರ್ಮಾಣಕ್ಕೆ ಈಗಾಗಲೇ ತನ್ನ ಪಾಲಿನ ಹಣವನ್ನು ರಾಜ್ಯ ಸರ್ಕಾರಕ್ಕೆ ಸಂದಾಯ ಮಾಡಿದೆ.

ಗಂಗಾವಳಿ ನದಿಗೆ ಬ್ಯಾರೇಜ್‌ ನಿರ್ಮಿಸಿ ಅಥವಾ ಕಾಳಿ ನದಿಯಿಂದ ಪೈಪ್‌ ಲೈನ್‌ ಹಾಕಿ ನೀರು ಪೂರೈಸುವಂತೆ ನೆನಪಿಸಿದೆ. ದೇಶದ ಪಶ್ಚಿಮ ಕರಾವಳಿಯ ರಕ್ಷಣೆಯ ಅಂಗವಾಗಿರುವ ಐಎನ್‌ಎಸ್‌ ಕದಂಬ ನೌಕಾನೆಲೆಯ ನೇವಿ ಸಿಬ್ಬಂದಿ ನಿವಾಸಿಗಳ ಜೊತೆಗೆ ಸ್ಥಳೀಯರಿಗೆ ನೀರಿನ ಬವಣೆ ಎದುರಾಗುವ ಆತಂಕ ಶುರುವಾಗಿದೆ. ಕರಾವಳಿಯ ಕಾರವಾರ, ಅಂಕೋಲಾ ತಾಲೂಕುಗಳಿಗೆ ಪ್ರಮುಖ ನೀರಿನ ಮೂಲವಾಗಿದೆ ಗಂಗಾವಳಿ ನದಿ. ನೌಕಾನೆಲೆ ಪ್ರತ್ಯೇಕ ನೀರಿನ ಸರಬರಾಜು ವ್ಯವಸ್ಥೆ ಕಲ್ಪಿಸುವಂತೆ ರಾಜ್ಯ ಸರ್ಕಾರದ ಮುಂದೆ ಬೇಡಿಕೆ ಇಟ್ಟಿದೆ. ಸದ್ಯ ಕಾರವಾರಕ್ಕೆ ಬರುವ ಪೈಪ್‌ ಲೈನ್‌ ನಿಂದಲೇ ನೌಕಾನೆಲೆಗೆ ನೀರು ಸರಬರಾಜು ನಡೆದಿದೆ.

ಜಲಮಂಡಳಿಗೆ ಬೇಡಿಕೆ: ಜಿಲ್ಲೆಯ ಕರಾವಳಿಯಲ್ಲಿ ಹರಿಯುವ ಕಾಳಿ ಹಾಗೂ ಗಂಗಾವಳಿ ನದಿಗಳು ಕಾರವಾರ ಹಾಗೂ ಅಂಕೋಲಾ ತಾಲೂಕುಗಳ ಪ್ರದೇಶಗಳಿಗೆ ಕುಡಿಯುವ ನೀರಿನ ಪ್ರಮುಖ ಆಸರೆಯಾಗಿವೆ. ಅದರಲ್ಲೂ ಗಂಗಾವಳಿ ನದಿಯಿಂದ ಕಾರವಾರ ನಗರದ ಬಹುಪಾಲು ಪ್ರದೇಶಕ್ಕೆ ನೀರು ಪೂರೈಕೆಯಾಗುತ್ತದೆ. ಇದೇ ನದಿಯಿಂದ ಕದಂಬ ನೌಕಾನೆಲೆಗೂ ನೀರು ಪೂರೈಕೆ ಮಾಡುತ್ತಿದ್ದು, ಕಳೆದ ಬಾರಿ ಭೀಕರ ಬೇಸಿಗೆ ಎದುರಾದ ಪರಿಣಾಮ ಗಂಗಾವಳಿ ನದಿ ಬತ್ತಿದ್ದರಿಂದ ನೀರಿಗಾಗಿ ಹಾಹಾಕಾರ ಉಂಟಾಗಿತ್ತು.ಆದರೆ, ಈ ಬಾರಿ ನೌಕಾನೆಲೆಯ ಎರಡನೇ ಹಂತದ ಕಾಮಗಾರಿ ಪ್ರಗತಿಯಲ್ಲಿದ್ದು, ಬೇಸಿಗೆಯಲ್ಲಿ ನೀರಿನ ಸಮಸ್ಯೆ ಎದುರಾಗದಂತೆ ಪ್ರತ್ಯೇಕ ನೀರಿನ ವ್ಯವಸ್ಥೆ ಮಾಡುವಂತೆ ಜಲಮಂಡಳಿಗೆ ನೌಕಾನೆಲೆ ಬೇಡಿಕೆ ಇಟ್ಟಿದೆ. ಇದರಿಂದ ಬೇಸಿಗೆಯಲ್ಲಿ ಮತ್ತೆ ನೀರಿನ ಸಮಸ್ಯೆ ಎದುರಾಗಲಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಉಪ್ಪು ನೀರು ಶುದ್ಧೀಕರಿಸಿಕೊಳ್ಳಲಿ: ಕಳೆದ ಬಾರಿ ಗಂಗಾವಳಿ ಬತ್ತಿದ ಪರಿಣಾಮ ಕಾರವಾರ ಭಾಗದ ಜನರು ನೀರಿಗಾಗಿ ಪರದಾಡು ವಂತಾಗಿತ್ತು. ಇದೀಗ ನೌಕಾನೆಲೆಗೆ ಪ್ರತ್ಯೇಕವಾಗಿ ನೀರು ಸರಬರಾಜಾಗುವುದರಿಂದ ಬೇಸಿಗೆಯಲ್ಲಿ ಮತ್ತೆ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಗಳಿವೆ. ಅಲ್ಲದೇ ನೌಕಾನೆಲೆ ಕಾಮಗಾರಿಗಳಿಗೆ ಕುಡಿಯುವ ನೀರನ್ನು ಬಳಕೆ ಮಾಡುವುದು ಸರಿಯಲ್ಲವಾಗಿದ್ದು, ಮಂಗಳೂರಿನಲ್ಲಿರುವಂತೆ ಉಪ್ಪು ನೀರನ್ನು ಶುದ್ಧೀಕರಿಸಿ ಕಾಮಗಾರಿಗೆ ಬಳಸಿಕೊಳ್ಳಬೇಕು ಎನ್ನುವುದು ಸ್ಥಳೀಯರ ಒತ್ತಾಯವಾಗಿದೆ.

ಕದಂಬ ನೌಕಾನೆಲೆಯಲ್ಲಿ ಎರಡನೇಯ ಹಂತದ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನಲೆ ಹೆಚ್ಚಿನ ನೀರಿನ ಅಗತ್ಯತೆ ಇದೆ. ಅಲ್ಲದೇ ಬೇಸಿಗೆಯಲ್ಲಿ ಕಾಮಗಾರಿ ಮುಂದುವರಿಸಲು ನೀರಿನ ಅಭಾವ ಎದುರಾಗುವ ಹಿನ್ನಲೆ ಕಾಳಿ ಅಥವಾ ಗಂಗಾವಳಿ ನದಿಯಿಂದ ಕಾಮಗಾರಿಗೂ ಸಾಕಾಗುವಷ್ಟು ನೀರನ್ನು ಪೂರೈಸುವಂತೆ ನೌಕಾನೆಲೆ ಬೇಡಿಕೆ ಇಟ್ಟಿದೆ. ಈ ನಿಟ್ಟಿನಲ್ಲಿ ಈಗಾಗಲೇ ಎರಡೂ ನದಿಗಳಿಂದ ನೀರನ್ನು ಪೂರೈಕೆ ಮಾಡುವ ಸಾಧ್ಯತೆಗಳ ಕುರಿತು ಜಲಮಂಡಳಿ ಕ್ರಿಯಾಯೋಜನೆಯನ್ನೂ ರೂಪಿಸಿ ಸಲ್ಲಿಕೆ ಮಾಡಿದ್ದು, ಇನ್ನೂ ಯೋಜನೆ ಅಂತಿಮವಾಗಿಲ್ಲ. ಆದರೆ, ಇದರಿಂದ ಕಾರವಾರ ನಗರಕ್ಕೆ ನೀರು ಪೂರೈಕೆ ಮಾಡಲು ಸಮಸ್ಯೆಯಾಗುವುದಿಲ್ಲ ಎಂದು ಜಲಮಂಡಳಿ ತಿಳಿಸಿದೆ.

40 ಮಿಲಿಯನ್‌ ಲೀಟರ್‌ ನೀರು ಅಗತ್ಯ : ನೌಕಾನೆಲೆಯಲ್ಲಿ 2024ರವರೆಗೆ ಎರಡನೇ ಹಂತದ ಕಾಮಗಾರಿ ನಡೆಯುವುದರಿಂದ 40 ಮಿಲಿಯನ್‌ ಲೀಟರ್‌ಗಳಷ್ಟು ನೀರಿನ ಅಗತ್ಯತೆ ಇದೆ ಎನ್ನಲಾಗಿದೆ. ಹೀಗಾಗಿ ಪ್ರತ್ಯೇಕ ನೀರಿನ ವ್ಯವಸ್ಥೆಗೆ ನೌಕಾನೆಲೆ ಬೇಡಿಕೆ ಇಟ್ಟಿದೆ. ಅಲ್ಲದೇ ನದಿಗೆ ಬ್ಯಾರೇಜ್‌ ನಿರ್ಮಾಣಕ್ಕೆ ಬೇಕಾಗುವ ತನ್ನ ಪಾಲಿನ ಹಣ ಅಂದಾಜು 70 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರಕ್ಕೆ ಸಂದಾಯ ಮಾಡಿದೆ ಎನ್ನಲಾಗಿದೆ. ಹಾಗಾಗಿ ಗಂಗಾವಳಿ ನದಿಗೆ ಅಡ್ಡಲಾಗಿ ಬ್ಯಾರೇಜ್‌ ನಿರ್ಮಾಣ ಮಾಡಿದಲ್ಲಿ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಉಂಟಾಗುವುದನ್ನು ತಪ್ಪಿಸಬಹುದು ಎನ್ನುವುದು ಜಲಮಂಡಳಿ ಅಧಿಕಾರಿಗಳ ಅಭಿಪ್ರಾಯವಾಗಿದೆ. ಬ್ಯಾರೇಜ್‌ ನಿರ್ಮಾಣಕ್ಕೆ ಕಂದಾಯ ಭೂಮಿಯೂ ಲಭ್ಯವಿದೆ.

ಹತ್ತಿಪ್ಪತ್ತು ಹೆಕ್ಟೇರ್‌ ಭೂಮಿ ಅರಣ್ಯ ಇಲಾಖೆಯದಾಗಿದ್ದು, ಅದರ ಬಳಕೆಗೆ ಕೇಂದ್ರ ಅರಣ್ಯ ಪರಿಸರ ಇಲಾಖೆಯ ಅನುಮತಿ ಪಡೆಯುವ ಕೆಲಸ ಮಾತ್ರ ಬಾಕಿಯಿತ್ತು. ಇದಕ್ಕೆ ಕಳೆದ 2 ವರ್ಷದಿಂದ ಪ್ರಯತ್ನ ಸಾಗಿತ್ತು. ಆದರೆ ಜಲ ಮಂಡಳಿ ಈ ವಿಷಯಕ್ಕೆ ಹೆಚ್ಚು ಆಸಕ್ತಿ ತಾಳದ ಕಾರಣ ಯೋಜನಾ ಮೊತ್ತ ಸಹ ಹೆಚ್ಚತೊಡಗಿದೆ. ಈಗಾಗಲೇ ರಾಜ್ಯ ಸರ್ಕಾರಕ್ಕೆ ಹಣ ನೀಡಿರುವ ರಕ್ಷಣಾ ಇಲಾಖೆ ಬ್ಯಾರೇಜ್‌ ಕಟ್ಟಿ ನೀರು ಕೊಡುವಂತೆ ಕೇಳತೊಡಗಿದೆ. ಇನ್ನೊಂದೆಡೆ ಈ ಬಾರಿ ಉತ್ತಮ ಮಳೆಯಾಗಿದ್ದರೂ ಸಹ ಹರಿವ ನದಿ ನೀರನ್ನು ಸಂಗ್ರಹಿಸಿ ಇಡುವ ಕೆಲಸವಾಗಿಲ್ಲ. ಹೀಗಿರುವಾಗ ನೌಕಾನೆಲೆಗೆ ಪ್ರತ್ಯೇಕವಾಗಿ ನೀರನ್ನು ಸರಬರಾಜು ಮಾಡಿದ ಬಳಿಕ, ಜನಸಾಮಾನ್ಯರ ಬಳಕೆಗೆ ಸಾಕಾಗುವಷ್ಟು ನೀರು ಇರಲಿದೆಯೇ ಎನ್ನುವುದು ಸ್ಥಳೀಯರ ಪ್ರಶ್ನೆಯಾಗಿದೆ.

ಗಂಗಾವಳಿಯಿಂದ ನೀರು ಸರಬರಾಜು ಮಾಡಲು ಫೆಬ್ರುವರಿ ಕೊನೆಯವರೆಗೂ ಸಮಸ್ಯೆ ಇಲ್ಲ. ಆ ಬಳಿಕ ಬೇಸಿಗೆಯಲ್ಲಿ ನೀರಿನ ಹರಿವು ಕಡಿಮೆಯಾಗುವುದರಿಂದ ನೀರನ್ನು ತಡೆದು ನಿಲ್ಲಿಸಿ, ಕಾರವಾರ ನಗರ, ಗ್ರಾಮೀಣ ಭಾಗಗಳಿಗೆ ಪೂರೈಕೆ ಮಾಡಲಾಗುತ್ತಿತ್ತು. ಇದೀಗ ಗಂಗಾವಳಿಯಿಂದ ನೌಕಾನೆಲೆಗೆ ಪ್ರತ್ಯೇಕವಾಗಿ ನೀರು ಪೂರೈಕೆ ಮಾಡಲು ಬ್ಯಾರೇಜ್‌ ನಿರ್ಮಾಣಕ್ಕೆ ಯೋಜನೆರೂಪಿಸಿದ್ದು, ನೀರು ಪೂರೈಕೆಗೆ ಯಾವುದೇ ಸಮಸ್ಯೆ ಎದುರಾಗುವುದಿಲ್ಲ. – ಸುರೇಶ್‌, ಜಲಮಂಡಳಿಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌

 

-ನಾಗರಾಜ ಹರಪನಹಳ್ಳಿ

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.