ಹಣ ಬಂದರೂ ನಿರ್ಮಾಣವಾಗಿಲ್ಲ ತಡೆಗೋಡೆ


Team Udayavani, Nov 23, 2019, 3:58 PM IST

uk-tdy-2

ಕುಮಟಾ: ಎರಡು ವರ್ಷಗಳ ಹಿಂದೆ ತಾಲೂಕಿನ ಮಿರ್ಜಾನ್‌ ಬಳಿ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಅಗಲೀಕರಣದ ಸಂದರ್ಭದಲ್ಲಿ ಐಆರ್‌ಬಿ ಕಂಪೆನಿ ಸ.ಹಿ.ಪ್ರಾ. ಶಾಲೆ ಆವಾರದ ತಡೆಗೋಡೆ ಕೆಡವಿದ್ದು, ಇದುವರೆಗೂ ಮರುನಿರ್ಮಾಣ ಮಾಡಿಕೊಡದ ಬಗ್ಗೆ ಶಾಲೆ ಆಡಳಿತ ಮಂಡಳಿ ಆಕ್ರೋಶ ವ್ಯಕ್ತಪಡಿಸಿದೆ.

ಈ ಶಾಲೆ 1932 ರಲ್ಲಿ ಸ್ಥಾಪನೆಯಾಗಿದ್ದು, ಶತಮಾನೋತ್ಸವ ಸಂಭ್ರಮದ ಹೊಸ್ತಿಲಲ್ಲಿದೆ. ಈ ಶಾಲೆ ಬೆಳ್ಳಿಹಬ್ಬ, ಸುವರ್ಣ ಮಹೋತ್ಸವ, ವಜ್ರಮಹೋತ್ಸವ ಆಚರಿಸಿಕೊಂಡಿಲ್ಲ. ಇದರಿಂದಾಗಿ ಸ್ಮಾರ್ಟ್‌ಕ್ಲಾಸ್‌, ಕಂಪ್ಯೂಟರ್‌ ಶಿಕ್ಷಣದಂತಹ ವಿಶೇಷ ಸೌಲಭ್ಯಗಳಿಲ್ಲವಾಗಿದೆ. ಈ ಹಿಂದೆ ಐಆರ್‌ಬಿ ಕಂಪೆನಿಯವರು ರಸ್ತೆ ಅಗಲೀಕರಣದ ಕಾರಣಕ್ಕೆ ಆವಾರದ ಗೋಡೆ ನೆಲಸಮಗೊಳಿಸಿದ್ದು, ಆ ಸಮಯದಲ್ಲಿ ಆದಷ್ಟು ಶೀಘ್ರ ಆವಾರ ತಡೆಗೋಡೆ ನಿರ್ಮಿಸಿಕೊಡುತ್ತೇವೆ ಎಂದು ಆಶ್ವಾಸನೆ ನೀಡಿದ್ದರು.

ಇದರ ಹಣ ಜಿಪಂಗೆ ಜಮಾ ಆಗಿದೆ ಆದರೆ ಕಂಪೌಂಡ್‌ ಭಾಗ್ಯ ಮಾತ್ರ ಶಾಲೆಗೆ ದೊರೆಯದಿರುವುದು ಆಡಳಿತ ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಈ ಕುರಿತಂತೆ ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳು ಸಭೆ ಸೇರಿ ತಹಶೀಲ್ದಾರ್‌, ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿ, ಆದಷ್ಟು ಶೀಘ್ರದಲ್ಲಿ ಆವಾರದ ಗೋಡೆ ನಿರ್ಮಿಸಲು ಸಂಬಂಧಿಸಿದ ಇಲಾಖೆಗೆ ಸೂಚಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದರು.

ಆ ಸಮಯದಲ್ಲಿ ಉಪವಿಭಾಗಾಧಿಕಾರಿ ಗಳಾಗಿದ್ದ ಪ್ರೀತಿ ಗೆಲ್ಹೋಟ್‌ ಸ್ಥಳ ಪರಿಶೀಲನೆ ನಡೆಸಿ, ಕಂಪೌಂಡ್‌ ನಿರ್ಮಿಸಿ ಕೊಡುವ ಬಗ್ಗೆ ಭರವಸೆ ಕೂಡ ನೀಡಿದ್ದರು. ಆದರೆ ಅವರು ವರ್ಗಾವಣೆಗೊಂಡಿದ್ದು, ಭರವಸೆ ಮಾತ್ರ ಹಾಗೆಯೇ ಉಳಿದಿದೆ. ಶಾಲಾ ಕಂಪೌಂಡ್‌ ನಿರ್ಮಾಣಕ್ಕೆ ನೀಡಿದ ಪರಿಹಾರದ ಮೊತ್ತ ಜಿಲ್ಲಾಡಳಿತಕ್ಕೆ ಜಮೆಯಾಗಿದೆ ಎಂದು ತಿಳಿದುಬಂದಿದ್ದು, ಈ ಹಣ ವಿನಿಯೋಗಿಸಿ ಯಾವ ಕಾರಣಕ್ಕೆ ಕಂಪೌಂಡ್‌ ನಿರ್ಮಿಸಲು ಮುಂದಾಗುತ್ತಿಲ್ಲವೆಂಬುದೇ ಯಕ್ಷ ಪ್ರಶ್ನೆಯಾಗಿದೆ.

ಶಾಲೆಯ ಭದ್ರತೆಗೆ ಕಂಪೌಂಡ್‌ ಆಧಾರವಾಗಿದ್ದು, ಶಾಲಾ ಸುರಕ್ಷತೆ ಹಾಗೂ ಸೌಂದರ್ಯಕ್ಕೆ ಕಂಪೌಂಡ್‌ ಅತ್ಯವಶ್ಯಕ. ತಡೆಗೋಡೆ ಭದ್ರವಾಗಿ ನೆಲೆಯೂರಿದರೆ ಶಾಲೆಯಲ್ಲಿ ಮಕ್ಕಳು ಕೈಯಾರೆ ಪ್ರೀತಿಯಿಂದ ಬೆಳೆಸಿದ ಹೂವಿನಗಿಡಗಳು ಸುಂದರವಾಗಿ ಕಾಣಲು ಸಾಧ್ಯ. ತಡೆಗೋಡೆಯಿಲ್ಲದ ಕಾರಣ ದನ-ಕರುಗಳು ಅದನ್ನು ಹಾಳುಗೆಡುವುತ್ತಿವೆ. ಅಲ್ಲದೇ ಕೌಂಪೌಂಡ್‌ ಇಲ್ಲದ ಶಾಲೆಯಲ್ಲಿ ಭಿಕ್ಷುಕರ ವಾಸಸ್ಥಾನವಾಗಿ ಗಲೀಜು ನಿರ್ಮಾಣವಾಗುತ್ತದೆ ಎನ್ನುತ್ತಾರೆ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ರಾಮನಾಥ ಬಾಬು ನಾಯ್ಕ. ಶಾಲೆಯ ಆವಾರದ ತಡೆಗೋಡೆ ನಿರ್ಮಿಸಲು ತಹಶೀಲ್ದಾರ್‌ ಹಾಗೂ ಸಹಾಯಕ ಆಯುಕ್ತರಿಗೆ ಹಲವು ಬಾರಿ ಮನವಿ ಮಾಡಿಕೊಂಡರೂ ಏನೂ ಪ್ರಗತಿ ಕಾಣದೇ ಇರುವುದರಿಂದ ಶಾಲಾ ವಿದ್ಯಾರ್ಥಿಗಳೇ ಜಾಗೃತರಾಗಿ, ತಮ್ಮ ಶಾಲೆಗೆ ವಜ್ರ ಮಹೋತ್ಸವ ಆಚರಿಸುವ ಮುನ್ನವೇ ಕಂಪೌಂಡ್‌ ನಿರ್ಮಿಸಿಕೊಡುವಂತೆ ವಿದ್ಯಾರ್ಥಿಗಳು ಮನವಿ ಮಾಡಿರುವುದು ವಿಶೇಷವಾಗಿದೆ. ಈ ಬಗ್ಗೆ ಸಂಬಂಸಿದ ಹಿರಿಯ ಅಧಿಕಾರಿಗಳು ಗಮನ ಹರಿಸಬೇಕೆಂಬುದು ಹಲವರ ಆಶಯವಾಗಿದೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.