ನ.4ರಿಂದ ಭಗವದ್ಗೀತಾ ಅಭಿಯಾನ

ಡಿ.4 ರಂದು ದಾವಣಗೆರೆಯಲ್ಲಿ ಮಹಾ ಸಮರ್ಪಣೆ ; ಐದನೇ ಅಧ್ಯಾಯ ಆಯ್ಕೆ: ಸ್ವರ್ಣವಲ್ಲೀ ಶ್ರೀ

Team Udayavani, Sep 15, 2022, 3:13 PM IST

15

ಶಿರಸಿ: ಹದಿನಾಲ್ಕನೇ ವರ್ಷದ ಭಗವದ್ಗೀತಾ ಅಭಿಯಾನಕ್ಕೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನ.4 ರಿಂದ ಆರಂಭಿಸಲಾಗುತ್ತಿದೆ. ಡಿ.4 ರಂದು ದಾವಣಗೆರೆಯಲ್ಲಿ ಮಹಾ ಸಮರ್ಪಣೆ ನಡೆಯಲಿದೆ ಎಂದು ಭಗವದ್ಗೀತಾ ಅಭಿಯಾನದ ಮುಖ್ಯಸ್ಥರು, ಸ್ವರ್ಣವಲ್ಲೀ ಮಹಾಸಂಸ್ಥಾನದ ಮಠಾಧೀಶ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿ ಪ್ರಕಟಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಗೀತಾ ಅಭಿಯಾನಕ್ಕೆ ಈ ಬಾರಿ ಐದನೇ ಅಧ್ಯಾಯ ಆಯ್ಕೆ ಮಾಡಿಕೊಳ್ಳಲಾಗಿದೆ. 2007 ರಿಂದ ಆರಂಭಗೊಂಡ ಈ ಅಭಿಯಾನ ಸಮಾಜದಲ್ಲಿ ಗೀತೆ ಮೂಲಕ ಸುಖ ಶಾಂತಿ ನೆಲೆಸುವಂತೆ, ಪ್ರತಿ ವ್ಯಕ್ತಿ ಸುಸಂಸ್ಕೃತರಾಗಲು ಪ್ರೇರೇಪಿಸಲು ಇದು ನಿರಂತರವಾಗಿ ನಡೆಯುತ್ತಿದೆ. ಕಳೆದೆರಡು ವರ್ಷ ಕೊರೊನಾ ಕಾರಣದಿಂದ ಸಾರ್ವಜನಿಕವಾಗಿ ನಡೆಸಲು ಸಾಧ್ಯ ಆಗಿರಲಿಲ್ಲ. ಈ ವರ್ಷ ಸಾರ್ವಜನಿಕರ, ಸರಕಾರದ, ಸಂಸ್ಥೆಗಳ ಸಹಕಾರದಲ್ಲಿ ಮುನ್ನಡೆಸಲಾಗುತ್ತದೆ ಎಂದರು. ರಾಯಚೂರು ಜಿಲ್ಲಾ ಕಾರಾಗೃಹದಲ್ಲಿ ತಪ್ಪದೇ ಗೀತಾಭಿಯಾನ ನಡೆದಿದೆ. ಈ ಬಾರಿ ರಾಜ್ಯದ ಎಲ್ಲ ಜೈಲಿನಲ್ಲೂ ನಡೆಸಲು ಯೋಜಿಸಿದ್ದೇವೆ ಎಂದ ಅವರು, ಮೂರು ಹಂತದಲ್ಲಿ ರಾಜ್ಯದಲ್ಲಿ ಗೀತಾ ಅಭಿಯಾನ ನಡೆಯಲಿದೆ ಎಂದರು.

ಅಭಿಯಾನದಲ್ಲಿ ಹಿರಿಯ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಗೀತೆ ಕುರಿತ ವಿವಿಧ ಸ್ಪರ್ಧೆ ರಾಜ್ಯ ಮಟ್ಟದ ತನಕ ನಡೆಯಲಿದೆ. ಸಾರ್ವಜನಿಕವಾಗಿ ಮೂರು ಹಂತದ ಅಭಿಯಾನಕ್ಕೆ ನ.4 ರಿಂದ 10, 12 ರಿಂದ 18, 20 ರಿಂದ ನ.26 ರ ತನಕ ನಡೆಸಬೇಕು. ಒಟ್ಟೂ ಎಂಟು ದಿನಗಳ ಅಭ್ಯಾಸ ಇಲ್ಲಾಗಬೇಕು ಎಂದ ಶ್ರೀಗಳು, ನ.28 ರಂದು ತಾಲೂಕು ಮಟ್ಟದ, ನ.30 ಜಿಲ್ಲಾ ಮಟ್ಟದ, ಡಿ.4 ರಾಜ್ಯ ಮಟ್ಟದ ಸ್ಪರ್ಧೆಗಳು ನಡೆಯಲಿದೆ ಎಂದರು.

ನ.27 ರಿಂದ ಏಳು ದಿನ ಪ್ರತಿ ಮನೆಯಲ್ಲಿ 5ನೇ ಅಧ್ಯಾಯ ಪಠಿಸಬೇಕು. ಡಿ.3 ರಂದು 18 ಅಧ್ಯಾಯ ಪಠಣ ಮಾಡಿ ಗೀತಾ ಜಯಂತಿ ಆಚರಿಸಬೇಕು ಎಂದೂ ಆಶಿಸಿದರು.

ಈಗಾಗಲೇ ರಾಜ್ಯಮಟ್ಟದ ಅಭಿಯಾನ ಸಮಿತಿ ರಚನೆ ಮಾಡಲಾಗಿದೆ. ಪ್ರತಿ ಜಿಲ್ಲೆಯಲ್ಲೂ ಜಿಲ್ಲಾ ಪ್ರಮುಖರನ್ನೂ ನಿಯೋಜಿಸಲಾಗಿದೆ ಎಂದರು.

ಮಠದ ಆಡಳಿತ ಮಂಡಳಿ ಅಧ್ಯಕ್ಷ ವಿ.ಎನ್‌. ಹೆಗಡೆ ಮಾಹಿತಿ ನೀಡಿ ಅಭಿಯಾನ ಕುರಿತು ಮಾಹಿತಿ, ಸಂಪರ್ಕಕ್ಕೆ ವೆಂಕಟ್ರಮಣ ಹೆಗಡೆ 8277383500 ಅಥವಾ 08384 279359ಗೆ ಮುಂಜಾನೆ 11 ರಿಂದ 1 ಅಥವಾ ಸಂಜೆ 4ರಿಂದ 6ರ ತನಕ ಸಂಪರ್ಕ ಮಾಡಬಹುದಾಗಿದೆ ಎಂದರು. ಮಠದ ವ್ಯವಸ್ಥಾಪಕ ಎಸ್‌.ಎನ್‌. ಗಾಂವಕರ್‌ ಇತರರು ಇದ್ದರು.

ಮನುಷ್ಯ ಅನೇಕ ವಿಕಾರಗಳಿಗೆ ಬಲಿ ಆಗುತ್ತಿದ್ದಾನೆ. ವಿಕೃತ ಮನಸ್ಸು ಅಡ್ಡದಾರಿ ಹಿಡಿಯುತ್ತಿದೆ. ಅಪಕ್ವ, ವಿಕೃತ ಮನಸ್ಸಿನ ಪರಿಷ್ಕಾರಕ್ಕೆ ಆಧ್ಯಾತ್ಮ ವಿದ್ಯೆಯೇ ಏಕೈಕ ಪರಿಹಾರ. ಆಧ್ಯಾತ್ಮ ವಿದ್ಯೆಯ ಆಕರ ಗ್ರಂಥವೇ ಭಗವದ್ಗೀತೆ. -ಸ್ವರ್ಣವಲ್ಲೀ ಶ್ರೀ

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.