ಶಿರಸಿ: ಭಾರತ್ ಸ್ಕೌಟ್ ಮತ್ತು ಗೈಡ್ಸ್- ಗೀತಗಾಯನ ಸ್ಪರ್ಧೆ
Team Udayavani, Sep 4, 2022, 9:02 AM IST
ಶಿರಸಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕದ ಸ್ಥಳೀಯ ಸಂಸ್ಥೆ ವತಿಯಿಂದ ಅಝಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ತಾಲೂಕು ಮಟ್ಟದ ದೇಶಭಕ್ತಿ ಗೀತಗಾಯನ ಸ್ಪರ್ಧೆ ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಮುಖ್ಯ ಆಯುಕ್ತ ಎಂ.ಎಂ.ಭಟ್ಟ ಕಾರೆಕೊಪ್ಪ ವಹಿಸಿದ್ದರು. ಶಿರಸಿ ತಾಲೂಕು ಸ್ಥಳೀಯ ಸಂಸ್ಥೆ ಉಪಾಧ್ಯಕ್ಷ ಶ್ರೀಪಾದ ರಾಯ್ಸದ್ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ನಿರ್ಣಾಯಕರಾಗಿ ಮಮತಾ ಹೆಗಡೆ, ಉದಯ ಭಟ್ಟ ಹಾಗೂ ರಾಜೇಶ್ವರಿ ಹೆಗಡೆ ಕಾರ್ಯನಿರ್ವಹಿಸಿದರು.
ಗೀತಗಾಯನ ಸ್ಪರ್ಧೆಯ ಫಲಿತಾಂಶ:
ಸ್ಕೌಟ್ಸ್ ವಿಭಾಗ: ಪ್ರಥಮ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆ ಶಿರಸಿ, ದ್ವಿತೀಯ, ಸ.ಹಿ.ಪ್ರಾ.ಶಾಲೆ, ಯಡಳ್ಳಿ, ತೃತೀಯ ಕಲ್ಲಿ.
ಗೈಡ್ಸ್ ವಿಭಾಗ: ಪ್ರಥಮ ಶ್ರೀ ಗಜಾನನ ಪ್ರೌಢಶಾಲೆ ಹೆಗಡೆಕಟ್ಟಾ, ದ್ವಿತೀಯ ಲಯನ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಶಿರಸಿ, ತೃತೀಯ ಸರಕಾರಿ ಉರ್ದು ಪ್ರೌಢಶಾಲೆ ಶಿರಸಿ
ಸಮಾಧಾನಕರ: ಎಂ.ಡಿ.ಆರ್. ಎಸ್. ಕಲ್ಲಿ ಹಾಗೂ ಹೆಚ್.ಪಿ.ಎಸ್. ಯಡಳ್ಳಿಗೆ ಲಭಿಸಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಗೈಡ್ಸ್ ಆಯುಕ್ತೆ ಜ್ಯೋತಿ ಭಟ್ಟ, ಉಪಾಧ್ಯಕ್ಷ ಅಶೋಕ ಹೆಗಡೆ, ಕಾರ್ಯಕಾರಿ ಸಮಿತಿ ಛೇರಮನ್ ಸುರೇಶ ಪಟಗಾರ, ತಾಲೂಕ ಜಂಟಿ ಕಾರ್ಯದರ್ಶಿ ಯಮುನಾ ಪೈ, ಸಹಾಯಕ ರಾಜ್ಯ ಸಂಘಟನಾ ಆಯುಕ್ತ ವಿರೇಶ ಮಾದರ ಉಪಸ್ಥಿತರಿದ್ದರು.
ಜಿ. ಎಸ್. ಭಟ್ ಕಾರ್ಯಕ್ರಮ ನಿರ್ವಹಿಸಿದರು. ಸ್ಥಳೀಯ ಸಂಸ್ಥೆ ಶಿರಸಿ ಕಾರ್ಯದರ್ಶಿ ಎನ್ ಎಸ್ ಭಾಗ್ವತ ಸಂಘಟಿಸಿದರು. 10 ಶಾಲೆಯ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್