Bhatkal; 510 ಕೆ.ಜಿ ಅಕ್ರಮ ಪಡಿತರ ಅಕ್ಕಿ ವಶ ; ಕಾರಿನಲ್ಲಿದ್ದ ಇಬ್ಬರು ಪರಾರಿ!
Team Udayavani, Jun 17, 2023, 10:41 PM IST
ಭಟ್ಕಳ: ಅಕ್ರಮವಾಗಿ ಪಡಿತರ ಅಕ್ಕಿಯನ್ನು ಕಾರಿನಲ್ಲಿ ಕುಂದಾಪುರ ಕಡೆಯಿಂದ ಭಟ್ಕಳ ಕಡೆಗೆ ಸಾಗಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಬಂದ ಮೇರೆಗೆ ದಾಳಿ ಮಾಡಿದ ಆಹಾರ ನಿರೀಕ್ಷಕ ಹಾಗೂ ಪೊಲೀಸ್ ಸಬ್ ಇನ್ಸಪೆಕ್ಟರ್ ವಾಹನ ಸಹಿತ ಪಡಿತ ಅಕ್ಕಿಯನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಬಗ್ಗೆ ಆಹಾರ ನಿರೀಕ್ಷಕ ಪಾಂಡು ನಾಯ್ಕ ಅವರು ನಗರ ಠಾಣೆಯಲ್ಲಿ ದೂರು ನೀಡಿದ್ದು, ಕಾರನ್ನು ಪುರವರ್ಗದ ಪೊಲೀಸ್ ಚೆಕ್ ಪೋಸ್ಟ್ ಬಳಿಯಲ್ಲಿ ತಡೆದು ನಿಲ್ಲಿಸಿದಾಗ ಚಾಲಕ ಸ್ವಲ್ಪ ದೂರದಲ್ಲಿ ಹೋಗಿ ಕಾರನ್ನು ನಿಲ್ಲಿಸಿದ್ದು ಕಾರಿನಿಂದ ಇಬ್ಬರು ಇಳಿದು ಓಡಿ ಹೋಗಿದ್ದಾರೆ. ಅವರನ್ನು ಗುರುತಿಸಿದ್ದು ಅವರಲ್ಲಿ ಒಬ್ಬನು ಬೆಳ್ನಿಯ ನಿವಾಸಿ ಸೈಯದ್ ಅಲಿ ಇನ್ನೋರ್ವನ ಪುರವರ್ಗದ ನಿವಾಸಿ ನೌಶಾದ್ ಹಂಚಿ ಮೊಕ್ತಿಯಾರ್ ಅಹಮ್ಮದ್ ಎಂದು ಗುರುತಿಸಿದ್ದು ಅವರ ಮೇಲೆ ತಮ್ಮ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಕುರಿತು ಪ್ರಕರಣ ದಾಖಲಿಸಿದ್ದಾರೆ.
ಕಾರಿನಲ್ಲಿ ಒಟ್ಟು 14 ಪ್ಲಾಸ್ಟಿಕ್ ಚೀಲಗಳಿದ್ದು510 ಕೆ.ಜಿ. ಅಕ್ಕಿ ಇದೆ ಎಂದು ತಿಳಿಸಲಾಗಿದ್ದು ಅಕ್ಕಿಯ ಅಂದಾಜು ಬೆಲೆ17,340 ಹಾಗೂ ವಶಪಡಿಸಿಕೊಂಡ ಕಾರಿನ ಬೆಲೆ 1,20,000 ಎಂದು ತಿಳಿಸಲಾಗಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್