ಭಟ್ಕಳದಲ್ಲಿ ಭೀಕರ ಅಪಘಾತ : ಮದುಮಗಳು ಸೇರಿ 7 ಮಂದಿ ದಾರುಣ ಸಾವು
Team Udayavani, May 25, 2017, 8:40 AM IST
ಭಟ್ಕಳ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರ ಅನಂತವಾಡಿ ಎಂಬಲ್ಲಿ ಗುರುವಾರ ನಸುಕಿನ 1.30 ರ ವೇಳೆಗೆ ಖಾಸಗಿ ಬಸ್ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಮಿನಿ ಬಸ್ನಲ್ಲಿದ್ದ ಮದುಮಗಳು ಸೇರಿ 7 ಮಂದಿ ದಾರುಣವಾಗಿ ಸಾವನ್ನಪ್ಪಿ,25ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಭೀಕರ ದುರಂತ ಸಂಭವಿಸಿದೆ.
ಶಿರಸಿಯ ದಾಸನಕೊಪ್ಪದಿಂದ ಧರ್ಮಸ್ಥಳಕ್ಕೆ ದಿಬ್ಬಣ ತೆರಳುತ್ತಿದ್ದ ಮಿನಿ ಬಸ್ಗೆ ಹೊನ್ನಾವರ ಕಡೆ ತೆರಳುತ್ತಿದ್ದ ಬಸ್ ಢಿಕ್ಕಿಯಾಗಿ ಅವಘಡ ಸಂಭವಿಸಿದೆ.
ಗಂಭೀರ ಸ್ಥಿತಿಯಲ್ಲಿರುವ ಗಾಯಾಳುಗಳನ್ನು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದ ಗಾಯಾಳುಗಳನ್ನು ಕುಂದಾಪುರ, ಮುರ್ಡೇಶ್ವರ ಮತ್ತು ಭಟ್ಕಳದ ಖಾಸಗಿ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.
ಮೃತರು ದಾವಣಗೆರೆಯ ಮೂಲದ ವಧು ದಿವ್ಯಾ ಕುರ್ಡೇಕರ್, ಸುಬ್ರಹ್ಮಣ್ಯ,ಪಾಲಾಕ್ಷಿ (45),ದಿವ್ಯಾ , ಪೂಜಾ ಶೇಟ್ ,ನಾಗಪ್ಪ ಗಣಿಗಾರ್ ಎಂದು ತಿಳಿದು ಬಂದಿದೆ. ವರ ಹರೀಶ್ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳೀಯರು ರಕ್ಷಣಾ ಕಾರ್ಯಾಚರಣೆಗೆ ನೆರವು ನೀಡಿದರು. ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹರೀಶ್ ಮತ್ತು ದಿವ್ಯಾ ಪ್ರೇಮಿಗಳಾಗಿದ್ದು ಎರಡೂ ಮನೆಯವರು ಒಟ್ಟಾಗಿ ಇಂದು ನಡೆಯಬೇಕಿದ್ದ ಮದುವೆಗಾಗಿ ಧರ್ಮಸ್ಥಳಕ್ಕೆ ತೆರಳುತ್ತಿದ್ದರು.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
MUST WATCH
ಹೊಸ ಸೇರ್ಪಡೆ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು