ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ; ಬೋಟ್ನಲ್ಲಿದ್ದವರ ರಕ್ಷಣೆ
Team Udayavani, Apr 4, 2022, 10:02 PM IST
ಭಟ್ಕಳ: ತಾಲೂಕಿನ ಮಾವಿನಕುರ್ವೆ ಬಂದರಿನ ಹೊರಭಾಗದ ಕೋಟೆಗುಡ್ಡೆ ಸಮೀಪ ಅರಬ್ಬೀ ಸಮುದ್ರದಲ್ಲಿ ಫಿಶರೀಸ್ ಬೋಟ್ವೊಂದು ಮುಳುಗಡೆಯಾಗಿದ್ದು, ಅದರಲ್ಲಿದ್ದವರನ್ನು ರಕ್ಷಿಸಲಾಗಿದೆ.
ಮಲ್ಪೆಯ ತೊಟ್ಟಂ ನಿವಾಸಿ ಸುಂದರ ಕೊಟ್ಯಾನ್ ಎನ್ನುವವರಿಗೆ ಸೇರಿದ ಸಿಹಾನ್ ಹೆಸರಿನ ಫಿಶರೀಸ್ ಬೋಟ್ ಮುಳುಗಡೆಯಾಗಿದ್ದು ಲಕ್ಷಾಂತರ ರೂ. ಹಾನಿಯಾಗಿದೆ ಎನ್ನಲಾಗಿದೆ.
ಎ .3ರಂದು ರಾತ್ರಿ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಹೊರಟಿದ್ದ ಬೋಟು ಎ.4ರಂದು ಬೆಳಗಿನ ಜಾವ ಭಟ್ಕಳ ತಾಲೂಕಿನ ಕೋಟೆಗುಡ್ಡೆ ಬಳಿ ಬಂದಿದೆ. ಅಲ್ಲಿ ಮೀನು ಹಿಡಿಯುತ್ತಿರುವ ಸಂದರ್ಭ ಬೋಟಿನ ಅಡಿ ಭಾಗಕ್ಕೆ ಯಾವುದೋ ಒಂದು ಬಲವಾದ ವಸ್ತು ಡಿಕ್ಕಿಯಾಗಿದ್ದು, ಬೋಟಿನ ಅಡಿಭಾಗದಲ್ಲಿ ರಂಧ್ರವಾಗಿ ನೀರು ಒಳನುಗ್ಗಿದೆ.
ತಕ್ಷಣ ಬೋಟಿನ ಚಾಲಕ ಅಳ್ವೆಕೋಡಿಯ ರವಿ ನಾಗಪ್ಪ ಮೊಗೇರ ಬೇರೆ ಬೋಟಿನಲ್ಲಿದ್ದವರನ್ನು ಸಂಪರ್ಕಿಸಿ ರಕ್ಷಣೆಗೆ ಕರೆದಿದ್ದಾರೆ. ಬೇರೆ ಬೋಟುಗಳಿಗೆ ಈ ಬೋಟನ್ನು ಕಟ್ಟಿ ದಡಕ್ಕೆ ಎಳೆದುಕೊಂಡು ಬರಲು ಪ್ರಯತ್ನಿಸಲಾಯಿತಾದರೂ ನೀರು ತುಂಬಿದ್ದರಿಂದ ಸಾಧ್ಯವಾಗಿಲ್ಲ ಎನ್ನಲಾಗಿದೆ.
ಬೋಟಿನಲ್ಲಿದ್ದ ಕಲಾಸಿಗಳಾದ ಮೋಹನ, ಮಂಜುನಾಥ, ದೇವೇಂದ್ರ, ರಮೇಶ, ವೆಂಕಟೇಶ ಕಲ್ಲೇಶಿ ಇವರುಗಳನ್ನು ಬೇರೆ ಬೋಟಿನವರು ರಕ್ಷಣೆ ಮಾಡಿದ್ದು ಬೋಟಿನಲ್ಲಿದ್ದ ಕೆಲವು ವಸ್ತುಗಳನ್ನು ರಕ್ಷಿಸಲಾಗಿದೆ. ಈ ಕುರಿತು ಗ್ರಾಮೀಣ ಠಾಣೆ ಪೊಲೀಸರು ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ