Bhatkal: ವಿವಾಹಿತೆಯ ಶವ ತೋಟದ ಬಾವಿಯಲ್ಲಿ ಪತ್ತೆ
Team Udayavani, Oct 9, 2023, 7:46 PM IST
ಭಟ್ಕಳ: ವಿವಾಹಿತಯೋರ್ವಳು ತೋಟದ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದು ಸಾವಿನಲ್ಲಿ ಶಂಸಯ ವ್ಯಕ್ತಪಡಿಸಿ ಆಕೆಯ ಸಹೋದರ ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮೃತ ಮಹಿಳೆಯನ್ನು ಕಟಗಾರಕೊಪ್ಪದ ಅತ್ತಿಬಾರ ನಿವಾಸಿ ಲಕ್ಷ್ಮೀ (32) ಎಂದು ಗುರುತಿಸಲಾಗಿದೆ. ಶಿರಾಲಿ ಹುಲ್ಲುಕ್ಕಿಯವಳಾದ ಲಕ್ಷ್ಮೀಯನ್ನು ಕಳೆದ ಒಂದೂವರೆ ವರ್ಷಗಳ ಹಿಂದೆ ಅತ್ತೀಬಾರ ವೆಂಕಟೇಶ ಗೊಂಡ ಅವರಿಗೆ ಮದುವೆ ಮಾಡಿ ಕೊಡಲಾಗಿತ್ತು. ಅ. 8ರಂದು ಸಂಜೆ 7ಗಂಟೆಯಿಂದ 7.30 ರ ನಡುವೆ ತನ್ನ ಸಹೋದರಿ ತೋಟದ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಆಕೆಯ ಸಾವಿನ ಬಗ್ಗೆ ಸಂಶಯವಿದೆ. ಸೂಕ್ತ ತನಿಖೆ ಮಾಡಬೇಕು ಎಂದು ಆಕೆಯ ಸಹೋದರ ಜನ್ನ ತಿಮ್ಮಪ್ಪ ಗೊಂಡ ಮುರ್ಡೇಶ್ವರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ಸ್ವೀಕರಿಸಿದ ಮುರ್ಡೇಶ್ವರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ