ಸರ್ಕಾರದ ನಿರ್ಧಾರದ ಮೇಲೆ ಇಲಾಖೆ ಕಾರ್ಯಾಚರಣೆ: ಐಜಿಪಿ
Team Udayavani, Apr 9, 2020, 5:22 PM IST
ಭಟ್ಕಳ ಪಟ್ಟಣದಲ್ಲಿ ಕೈಗೊಳ್ಳಲಾಗಿರುವ ಬಂದೋಬಸ್ತ್ ಪರಿಶೀಲನೆ ನಡೆಸಿದ ಪಶ್ಚಿಮ ವಲಯ ಐಜಿಪಿ ದೇವ್ಜ್ಯೋತಿ
ಭಟ್ಕಳ: ಎಲ್ಲಾ ಜಿಲ್ಲೆಗಳ ಗಡಿ ಬಂದ್ ಮಾಡಲಾಗಿದ್ದು, ಜನರ ಓಡಾಟ ನಿರ್ಬಂಧಿ ಸುವುದು ಇದರ ಉದ್ದೇಶವಾಗಿದೆ ಎಂದು ಪಶ್ಚಿಮ ವಲಯ ಐಜಿಪಿ ದೇವ್ಜ್ಯೋತಿ ಹೇಳಿದರು. ಪಟ್ಟಣದಲ್ಲಿ ಇಲಾಖೆಯಿಂದ ಕೈಗೊಂಡ ಸುರಕ್ಷಾ ಕ್ರಮಗಳನ್ನು ಪರಿಶೀಲಿಸಿ ಮಾತನಾಡಿದ ಅವರು, ಏ.14ರ ನಂತರ ಸರಕಾರ ಯಾವ ಕ್ರಮ ಕೈಗೊಳ್ಳುತ್ತದೆ ಎನ್ನುವುದರ ಮೇಲೆ ಇಲಾಖೆ ಕಾರ್ಯಾಚರಣೆ ನಡೆಸಲಿದೆ.ಏ. 14ರ ನಂತರ ಬಂದೋಬಸ್ತ್ ಯಾವ ರೀತಿಯಾಗಿರಲಿದೆ ಎಂದು ಈಗಲೇ ಹೇಳಲು ಸಾಧ್ಯವಿಲ್ಲ. ಬೇರೆ ಬೇರೆ ಕಡೆಯಿದ್ದವರು ಅವರವರ ಸ್ಥಾನ ಸೇರಲು ಅವಕಾಶ ನೀಡುವ ಕುರಿತೂ ಹೇಳಲು ಸಾಧ್ಯವಿಲ್ಲ ಎಂದರು.
ಭಟ್ಕಳದಲ್ಲಿ ಸಂಶಯಿತ ವ್ಯಕ್ತಿಯ ಪೂರ್ವಾಪರ ವಿಚಾರಿಸಿ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಇಲ್ಲಿ ಮಾತ್ರವಲ್ಲ, ಎಲ್ಲಾ ಜಿಲ್ಲೆಗಳಲ್ಲಿಯೂ ಗಡಿ ಬಂದ್ ಮಾಡಿ ಜನರ ಓಡಾಟ ನಿರ್ಬಂಧಿಸಲಾಗಿದೆ. ಕೋವಿಡ್-19 ಕುರಿತು ಯಾವುದೇ ರೀತಿಯ ಮಾಹಿತಿ ಬಂದರೂ ತಕ್ಷಣ ಕಾರ್ಯಪ್ರವೃತ್ತರಾಗುತ್ತೇವೆ. ಭಟ್ಕಳದಲ್ಲಿ ಪರೀಕ್ಷೆಗೆ ಕಳುಹಿಸಿದ ಮಾದರಿಗಳಲ್ಲಿ ಅನೇಕರದ್ದು ನೆಗೆಟಿವ್ ಬಂದಿರುವುದು ಉತ್ತಮ ಬೆಳವಣಿಗೆ ಎಂದರು. ಎಸ್ಪಿ ಶಿವಪ್ರಕಾಶ ದೇವರಾಜು, ಡಿಎಸ್ಪಿ ಗೌತಮ್, ನಗರ ಠಾಣೆ ಪಿಎಸ್ಐ ಎಚ್.ಬಿ. ಕುಡಗುಂಟಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್
ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ
Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !
CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ
ಬ್ಯಾಡಗಿ: ಮೆಣಸಿನಕಾಯಿ ವಹಿವಾಟು ಸುಗಮ; ಪೊಲೀಸ್ ಭದ್ರತೆ