ಭಟ್ಕಳ: ಬಂದರಿನಲ್ಲಿ ತೇಲಿ ಬಂದ ಗೋವಿನ ರುಂಡಗಳು
Team Udayavani, Jul 10, 2022, 8:46 PM IST
ಭಟ್ಕಳ: ಅತ್ಯಂತ ಸೂಕ್ಷ್ಮ ಪ್ರದೇಶ ಎಂದು ಹಣೆಪಟ್ಟಿ ಪಡೆದುಕೊಂಡಿದ್ದ ತಾಲೂಕಿನ ಬಂದರಿನ ಸಂಗಮ ಪ್ರದೇಶದಲ್ಲಿ ಗೋವಿನ ರುಂಡಗಳು ನೀರಿನಲ್ಲಿ ತೇಲಿ ಬಂದಿದ್ದು,ಭಾನುವಾರ ಕೆಲ ಕಾಲ ಜನರಲ್ಲಿ ಆತಂಕ ಮೂಡಿಸಿತ್ತು.
ಸಂಜೆಯ ಸುಮಾರಿಗೆ ಬಂದರ ಪ್ರದೇಶದಲ್ಲಿ ಮೀನುಗಾರರು ಗೋವಿನ ರುಂಡಗಳು ನೀರಿನಲ್ಲಿ ತೇಲಿ ಬರುತ್ತಿರುವುದನ್ನು ಗಮನಿಸಿ ಆತಂಕಕ್ಕೊಳಗಾದರು. ನಂತರ ಅನೇಕ ಚೀಲಗಳಲ್ಲಿ ತೇಲಿ ಬರುತ್ತಿರುವುದನ್ನು ನೋಡಿದ್ದು ತಕ್ಷಣ ಕೆಲವರು ರುಂಡವನ್ನು ಹಗ್ಗದಿಂದ ಕಟ್ಟಿ ಹಾಕಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಗ್ರಾಮೀಣ ಠಾಣೆಯ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಗೋವಿನ ರುಂಡವನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಇನ್ನೂ ಕೆಲವು ರುಂಡಗಳು ಸಮುದ್ರಕ್ಕೆ ಸೇರಿದ್ದು, ಒಂದು ಮಾತ್ರ ದೊರೆತಿದೆ ಎನ್ನಲಾಗಿದೆ.
ರಾಜ್ಯದಲ್ಲಿ ಗೋಹತ್ಯೆ ನಿಷೇಧವಿದ್ದರೂ ಸಹ ಅಲ್ಲಲ್ಲಿ ಗೋವುಗಳನ್ನು ವಧೆ ಮಾಡಿರುವುದು ಸ್ಪಷ್ಟವಾಗಿದ್ದು ಬೆಳಿಗ್ಗೆ ಕಂಪೌಂಡ್ ಒಳಗಡೆ 20 ಕೆ.ಜಿ. ಮಾಂಸ ದೊರೆತರೆ, ಸಂಜೆ ನೀರಿನಲ್ಲಿ ತೇಲಿ ಬಂದ ಗೋವಿನ ರುಂಡಗಳು ಆತಂಕಕ್ಕೆ ಕಾರಣವಾಗಿದೆ. ಕಾನೂನನ್ನು ಉಲ್ಲಂಘನೆ ಮಾಡಿದವರನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಜರುಗಿಸಬೇಕು ಎನ್ನುವ ಕೂಗು ಕೇಳಿ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ