ಭಟ್ಕಳ : ತಾಲೂಕಿನಾದ್ಯಂತ ಭಾರಿ ಮಳೆ, ಹಲವು ಮನೆಗಳಿಗೆ ಹಾನಿ
Team Udayavani, May 20, 2022, 8:24 PM IST
ಭಟ್ಕಳ: ತಾಲೂಕಿನಲ್ಲಿ ಸುರಿಯುತ್ತಿದ್ದ ಭಾರೀ ಮಳೆ ಬೆಳಿಗ್ಗೆಯಿಂದಲೇ ಬಿಡುವು ನೀಡಿದ್ದು ಬಹುತೇಕ ನೀರು ತುಂಬಿದ್ದ ಪ್ರದೇಶಗಳಲ್ಲಿನ ನೀರು ಒಣಗಿದ್ದು ಅಪಾಯದ ಪರಿಸ್ಥಿತಿಯಿಂದ ಕೊಂಚ ಹೊರಬಂದಂತಾಗಿದೆ.
ಬುಧವಾರ ಬೆಳಿಗ್ಗೆಯಿಂದಲೇ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥವಾಗಿದ್ದು ಎಲ್ಲಿಯೂ ತಿರುಗಾಡದಂತಾಗಿತ್ತು.
ಬುಧವಾರ ಬೆಳಿಗ್ಗೆಯಿಂದ ಗುರುವಾರ ಬೆಳಿಗ್ಗೆಯ ತನಕ ಒಟ್ಟೂ 187.2 ಮಿ.ಮಿ. ಮಳೆಯಾಗಿದ್ದು ಇಲ್ಲಿಯ ತನಕ ಒಟ್ಟೂ 360.8 ಮಿ.ಮಿ. ಮಳೆಯಾದಂತಾಗಿದೆ. ಮೇ. 19ರಂದು ರಾತ್ರಿ ಮಾರುಕೇರಿ ಗ್ರಾಮ ಪಂಚಾಯತ್ನ ಕೋಟಖಂಡ ಮಜಿರೆಯ ಮಾಸ್ತಿ ಸುಕ್ರ ಗೊಂಡ ಎನ್ನುವವರ ಮನೆಯು ಸಂಪೂರ್ಣ ಕುಸಿದು ಹಾನಿಯಾಗಿದ್ದು ಯಾರೂ ವಾಸ್ತವ್ಯ ಇಲ್ಲದಿರುವುದರಿಂದ ಅಪಾಯದಿಂದ ಪಾರಾದಂತಾಗಿದೆ.
ಮೇ. 20 ರಂದು ಸುರಿದ ಭಾರೀ ಮಳೆಗೆ ಕಾಯ್ಕಿಣಿಯ ಶಂಕರ ಮುರ್ಡೇಶ್ವರ ಬಾಕಡ ಎನ್ನುವವರ ಮನೆಗೆ ಭಾಗಶ ಹಾನಿಯಾಗಿದೆ. ಮೂಡಶಿರಾಲಿಯ ಶಿವಮ್ಮ ಜಟ್ಟ ನಾಯ್ಕ ಎನ್ನುವವರ ಮನೆಗೆ ಕೂಡಾ ಹಾನಿಯಾಗಿದ್ದು ಮನೆಯು ಸಂಪೂರ್ಣ ಕುಸಿದು ಬಿದ್ದಿದೆ. ಒಟ್ಟಾರೆ ತಾಲೂಕಿನಲ್ಲಿ ಚಂಡಮಾರುತದ ಪ್ರಭಾವದಿಂದಾಗಿ ಭಾರೀ ಹಾನಿ ಸಂಭವಿಸಿದ್ದು ಇನ್ನೂ ಕೂಡಾ ಅಪಾಯದ ಮುನ್ಸೂಚನೆ ಇದೆ. ತಾಲೂಕಾ ಆಡಳಿತ ಎಲ್ಲಾ ನೋಡಲ್ ಅಧಿಕಾರಿಗಳಿಗೆ ಜಾಗೃತ ಸ್ಥಿತಿಯಲ್ಲಿ ಇರಲು ಸೂಚನೆ ನೀಡಿದ್ದು ಯಾವುದೇ ರೀತಿಯ ಅಪಾಯ ಎದುರಾದರೂ ಸಹ ತಕ್ಷಣ ಸ್ಪಂಧಿಸಲು ಸಿದ್ಧತೆಯಲ್ಲಿದೆ ಎನ್ನಲಾಗಿದೆ.
ಇದನ್ನೂ ಓದಿ : ಕಟಪಾಡಿ : ರಾತ್ರಿ ಇದ್ದಕ್ಕಿದ್ದಂತೆ ಮನೆಯಿಂದ ಹೊರ ಹೋದ ವಿವಾಹಿತ ನಾಪತ್ತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್