ಅರಣ್ಯ ಭೂಮಿ ಅತಿಕ್ರಮಣದಾರರ ಮೇಲೆ ಅರಣ್ಯ ಇಲಾಖೆಯ ನಿರಂತರ ದೌರ್ಜನ್ಯ : ಆರೋಪ


Team Udayavani, May 17, 2022, 7:36 PM IST

ಅರಣ್ಯ ಭೂಮಿ ಅತಿಕ್ರಮಣದಾರರ ಮೇಲೆ ಅರಣ್ಯ ಇಲಾಖೆಯ ನಿರಂತರ ದೌರ್ಜನ್ಯ : ಆರೋಪ

ಭಟ್ಕಳ: ಭಟ್ಕಳ ತಾಲೂಕು ಹಾಗೂ ಜಿಲ್ಲೆಯಲ್ಲಿ ಅರಣ್ಯ ಭೂಮಿ ಅತಿಕ್ರಮಣದಾರರ ಮೇಲೆ ಅರಣ್ಯ ಇಲಾಖೆಯವರಿಂದ ನಿರಂತವಾಗಿ ದೌರ್ಜನ್ಯ, ಕಿರುಕುಳ ನಡೆದರೂ ಇದನ್ನು ತಡೆಯದೇ ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ನಾಗರಿಕ ವೇದಿಕೆಯ ಗೌರವಾಧ್ಯಕ್ಷ ಹಾಗೂ ಹೈಕೋರ್ಟ ವಕೀಲ ದತ್ತಾತ್ರೇಯ ಜೆ. ನಾಯ್ಕ ಆರೋಪಿಸಿದ್ದಾರೆ.

ನಗರದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ತಾಲೂಕಿನ ಹಾಡವಳ್ಳಿಯ ಅರಣ್ಯ ಭೂಮಿ ಅತಿಕ್ರಮಣದಾರ ನಾರಾಯಣ ಮಂಜಪ್ಪ ನಾಯ್ಕ ಅವರ ಮೇಲೆ ಅರಣ್ಯ ಇಲಾಖೆಯವರು ಕಾನೂನು ಬಾಹಿರವಾಗಿ ದಾಖಲಿಸಿದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ಧಾರವಾಡ ಪೀಠ ರದ್ದುಪಡಿಸಿದೆ.

ಅರಣ್ಯ ಇಲಾಖೆಯವರು ಅತಿಕ್ರಮಣದಾರರ ಮೇಲೆ ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು, ಅದನ್ನ ಬಿಟ್ಟು ಕ್ರಿಮಿನಲ್ ಪ್ರಕರಣ ದಾಖಲಿಸುವುದು ಕಾನೂನು ಬಾಹಿರವಾಗಿದೆ. ಅರಣ್ಯ ಅತಿಕ್ರಮಣದಾರರು ತಾಲೂಕಿನಲ್ಲಿ ಇಲಾಖೆಯಿಂದ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದರೂ ಸಹ ಜನಪ್ರತಿನಿಧಿಗಳು ಆ ಕುರಿತು ಯಾವುದೇ ಧ್ವನಿ ಎತ್ತುತ್ತಿಲ್ಲ. ಜನಪ್ರತಿನಿಧಿಗಳು ಅರಣ್ಯ ಕಾಯ್ದೆಯನ್ನು ಸರಿಯಾಗಿ ಓದಿ ಅರ್ಥ ಮಾಡಿಕೊಳ್ಳುವುದು ಅಗತ್ಯವಿದೆ. ನಮ್ಮ ಜನಪ್ರತಿನಿಧಿಗಳ ಕಾನೂನಿನ ಅಜ್ಞಾನದಿಂದಲೇ ಅತಿಕ್ರಮಣದಾರರಿಗೆ ಇನ್ನೂ ಪಟ್ಟಾ ಸಿಗದಂತಾಗಿದೆ ಎಂದ ಅವರು ಈಗಿರುವ ಅರಣ್ಯ ಹಕ್ಕು ಕಾಯ್ದೆಯನ್ನು ಸರಳೀಕೃತಗೊಳಿಸಿದರೆ ಮಾತ್ರ ಅರಣ್ಯಭೂಮಿ ಅತಿಕ್ರಮಣದಾರರಿಗೆ ಸುಲಭವಾಗಿ ಪಟ್ಟಾ ಸಿಗಲಿದೆ ಎಂದರು.

ಇದನ್ನೂ ಓದಿ : ಹುಣಸೂರು: ತಟ್ಟೆಕೆರೆ ಗ್ರಾ.ಪಂ.ಅಧ್ಯಕ್ಷರಾಗಿ ಎ.ಎಂ.ದೇವರಾಜ್ ಅವಿರೋಧ ಆಯ್ಕೆ

ಆ ನಿಟ್ಟಿನಲ್ಲಿ ಕೇಂದ್ರ ಸರಕಾರ ಕಾಯ್ದೆ ತಿದ್ದುಪಡಿ ತರಬೇಕು. ಅರಣ್ಯ ಭೂಮಿ ಅತಿಕ್ರಮಣದಾರರ ಕುರಿತು ಕೇಂದ್ರ, ರಾಜ್ಯ ಸರಕಾರ ಹಾಗೂ ಜನಪ್ರತಿನಿಧಿಗಳು ನಿರ್ಲಕ್ಷ್ಯ ಭಾವನೆ ತಾಳಿದ್ದಾರೆ. ಕಳೆದ ಹಲವು ವರ್ಷಗಳಿಂದ ಅತಿಕ್ರಮಣದಾರರು ತಮ್ಮ ಭೂಮಿ ಸಕ್ರಮವಾಗುತ್ತದೆಂಬ ನಂಬಿಕೆ ಹೊಂದಿ ಅಲ್ಲಿಯೇ ಬದುಕು ಕಟ್ಟಿಕೊಂಡಿದ್ದಾರೆ. ಆದರೆ ಅವರ ಮೇಲೆ ಇಲಾಖೆಯವರಿಂದ ನಿರಂತರವಾಗಿ ದೌರ್ಜನ್ಯ, ಕಿರುಕುಳ ನಡೆಯುತ್ತಿದೆ. ಸರಕಾರ ಕೂಡಲೇ ಅತಿಕ್ರಮಣದಾರರ ಮೇಲಿನ ದೌರ್ಜನ್ಯ ನಿಲ್ಲಿಸಲು ಇಲಾಖೆಗೆ ಕಟ್ಟು ನಿಟ್ಟಿನ ಆದೇಶ ಮಾಡಬೇಕು. ಅತಿಕ್ರಮಣದಾರರ ಬಗ್ಗೆ ಇರುವ ನಿರ್ಲಕ್ಷ್ಯ ಭಾವನೆ ಬಿಟ್ಟು ಮಾನವೀಯ ನೆಲೆಯಲ್ಲಿ ಅತಿಕ್ರಮಣದಾರರಿಗೆ ಪಟ್ಟಾ ಕೊಡಿಸುವ ಕೆಲಸಕ್ಕೆ ಜನಪ್ರತಿನಿಧಿಗಳು ಇನ್ನಾದರೂ ಮುಂದಾಗಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ನಾಗರೀಕ ವೇದಿಕೆಯ ಪಾಸ್ಕಲ್ ಗೋಮ್ಸ, ಸಂದೀಪ ನಾಯ್ಕ, ಭಾಸ್ಕರ ಮುಂತಾದವರಿದ್ದರು.

ಟಾಪ್ ನ್ಯೂಸ್

ENGvsWI; ಮುಂದುವರಿದ ಸಂಕಷ್ಟ: ವಿಂಡೀಸ್ ವಿರುದ್ಧವೂ ಏಕದಿನ ಸರಣಿ ಸೋತ ಇಂಗ್ಲೆಂಡ್

ENGvsWI; ಮುಂದುವರಿದ ಸಂಕಷ್ಟ: ವಿಂಡೀಸ್ ವಿರುದ್ಧವೂ ಏಕದಿನ ಸರಣಿ ಸೋತ ಇಂಗ್ಲೆಂಡ್

3-bus

KSRTC: ಧರ್ಮಸ್ಥಳಕ್ಕೆ ಬಸ್ ಇಲ್ಲದೆ ಪ್ರಯಾಣಿಕರ ಪರದಾಟ; ರಾ. ಹೆದ್ದಾರಿ ತಡೆದು ಪ್ರತಿಭಟನೆ

KAIVA movie review

KAIVA movie review; ಮುಗ್ಧ ಪ್ರೇಮಿಯ ರೆಡ್‌ ಅಲರ್ಟ್‌

Bhojipura; ಟ್ರಕ್ ಗೆ ಡಿಕ್ಕಿ ಹೊಡೆದ ಕಾರು; ಸುಟ್ಟು ಕರಕಲಾದ ಮಗು ಸೇರಿ ಎಂಟು ಜನರು

Bhojipura; ಟ್ರಕ್ ಗೆ ಡಿಕ್ಕಿ ಹೊಡೆದ ಕಾರು; ಸುಟ್ಟು ಕರಕಲಾದ ಮಗು ಸೇರಿ ಎಂಟು ಜನರು

Legends League Cricket; ಕಪ್ ಗೆದ್ದ ಮಣಿಪಾಲ್ ಟೈಗರ್ಸ್; ನಿರಾಸೆ ಅನುಭವಿಸಿದ ಹೈದರಾಬಾದ್

Legends League Cricket; ಕಪ್ ಗೆದ್ದ ಮಣಿಪಾಲ್ ಟೈಗರ್ಸ್; ನಿರಾಸೆ ಅನುಭವಿಸಿದ ಹೈದರಾಬಾದ್

2-surathkal

Surathkal: ಟೋಲ್ ಗೇಟ್ ಗೆ ಟ್ರಕ್ ಡಿಕ್ಕಿ

Karni Sena chief’s case: 2 shooters, 1 associate arrested

Chandigarh; ತಡರಾತ್ರಿ ಕಾರ್ಯಾಚರಣೆ: ಕರ್ಣಿ ಸೇನಾ ಮುಖ್ಯಸ್ಥನ ಹತ್ಯೆ ಆರೋಪಿಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

B K HARIPRASAD

ಇಂದು ಈಡಿಗರ ಸಮಾವೇಶ: ಹರಿಪ್ರಸಾದ್‌ ಅಪಸ್ವರ

ibrahim naani

JDS: ಜೆಡಿಎಸ್‌ನಿಂದ ಇಬ್ರಾಹಿಂ, ನಾಣು ಉಚ್ಚಾಟನೆ

beml

BEML: ಬೆಮೆಲ್‌ ಪರೀಕ್ಷೆಯಲ್ಲೂ ಕನ್ನಡಿಗರಿಗೆ ಅನ್ಯಾಯ

MARRIAGE

Marriage: ಹಿಂದೂ ಯುವಕನನ್ನು ವರಿಸಿದ ಅನ್ಯಕೋಮಿನ ಯುವತಿ

goolihatti shekhar

ಡಾ|ಹೆಡಗೇವಾರ್‌ ಮ್ಯೂಸಿಯಂ ಪ್ರವೇಶಿಸಿದ ವೀಡಿಯೋ ಇದೆಯೇ?-ನಾಯಕರಿಗೆ ಗೂಳಿಹಟ್ಟಿ ಶೇಖರ್‌ ಸವಾಲು

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

ENGvsWI; ಮುಂದುವರಿದ ಸಂಕಷ್ಟ: ವಿಂಡೀಸ್ ವಿರುದ್ಧವೂ ಏಕದಿನ ಸರಣಿ ಸೋತ ಇಂಗ್ಲೆಂಡ್

ENGvsWI; ಮುಂದುವರಿದ ಸಂಕಷ್ಟ: ವಿಂಡೀಸ್ ವಿರುದ್ಧವೂ ಏಕದಿನ ಸರಣಿ ಸೋತ ಇಂಗ್ಲೆಂಡ್

3-bus

KSRTC: ಧರ್ಮಸ್ಥಳಕ್ಕೆ ಬಸ್ ಇಲ್ಲದೆ ಪ್ರಯಾಣಿಕರ ಪರದಾಟ; ರಾ. ಹೆದ್ದಾರಿ ತಡೆದು ಪ್ರತಿಭಟನೆ

KAIVA movie review

KAIVA movie review; ಮುಗ್ಧ ಪ್ರೇಮಿಯ ರೆಡ್‌ ಅಲರ್ಟ್‌

Bhojipura; ಟ್ರಕ್ ಗೆ ಡಿಕ್ಕಿ ಹೊಡೆದ ಕಾರು; ಸುಟ್ಟು ಕರಕಲಾದ ಮಗು ಸೇರಿ ಎಂಟು ಜನರು

Bhojipura; ಟ್ರಕ್ ಗೆ ಡಿಕ್ಕಿ ಹೊಡೆದ ಕಾರು; ಸುಟ್ಟು ಕರಕಲಾದ ಮಗು ಸೇರಿ ಎಂಟು ಜನರು

Legends League Cricket; ಕಪ್ ಗೆದ್ದ ಮಣಿಪಾಲ್ ಟೈಗರ್ಸ್; ನಿರಾಸೆ ಅನುಭವಿಸಿದ ಹೈದರಾಬಾದ್

Legends League Cricket; ಕಪ್ ಗೆದ್ದ ಮಣಿಪಾಲ್ ಟೈಗರ್ಸ್; ನಿರಾಸೆ ಅನುಭವಿಸಿದ ಹೈದರಾಬಾದ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.