ಹಲವು ಅನುಮಾನಗಳ ಸುಳಿಯಲ್ಲಿ ಸಿಲುಕಿಕೊಂಡಿರುವ ಕಡಲ ಕಿನಾರೆಯ ಶವಗಳು


Team Udayavani, Sep 19, 2021, 8:46 PM IST

bhatkala news

ಭಟ್ಕಳ: ಶನಿವಾರ ಮಧ್ಯಾಹ್ನ ತಾಲೂಕಿನ ಹುಯಿಲಮಡಿ ಇಕೋ ಬೀಚ್ ಹತ್ತಿರದ ಸಮುದ್ರ ಕಿನಾರೆಯಲ್ಲಿ ಪತ್ತೆಯಾದ ಶವಗಳು ತಾಯಿ, ಮಗನ ಶವ ಎಂದು ತನಿಖೆಯಿಂದ ತಿಳಿದು ಬಂದಿದೆ. ಮೂಲತಃ ತೀರ್ಥಹಳ್ಳಿಯವರಾದ ಇವರು ಬೆಂಗಳೂರಿನಲ್ಲಿ ವಾಸ ಮಾಡಿಕೊಂಡಿದ್ದರೆನ್ನಲಾಗಿದೆ. ಈಗಾಗಲೇ ತಂದೆ ತೀರಿಕೊಂಡಿದ್ದು ಉದ್ಯೋಗದಲ್ಲಿದ್ದ ತಾಯಿ ಕೆಲಸವನ್ನು ಬಿಟ್ಟಿದ್ದು,  ಮಗ ಆದಿತ್ಯ ಬೆಂಗಳೂರಿನಲ್ಲಿಯೇ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

ಬೆಂಗಳೂರಿನಲ್ಲಿರುವ ಇವರ ಬಾಡಿಗೆ ಮನೆಯ ಮಾಲೀಕರಿಗೆ ಸುದ್ದಿ ತಿಳಿದ ತಕ್ಷಣ ಅವರು ತೀರ್ಥಹಳ್ಳಿಯಲ್ಲಿರುವ ಲಕ್ಷ್ಮೀಅವರ ಸಹೋದರರಿಗೆ ದೂರವಾಣಿ ಕರೆ  ಮಾಡಿ ತಿಳಿಸಿದ್ದು, ತೀರ್ಥಹಳ್ಳಿಯಿಂದ ಬಂದಿದ್ದ ಲಕ್ಷ್ಮೀ ಅವರ ಸಹೋದರ ಹಾಗೂ ಇತರರು ಶವದ ಗುರುತು ಪತ್ತೆ ಹಚ್ಚಿದ್ದು, ಸಾವಿಗೆ ನಿಖರವಾದ ಕಾರಣ ಅವರಿಗೆ ತಿಳಿದಿಲ್ಲ ಎನ್ನಲಾಗಿದೆ. ನಂತರ ಅವರು ಭಟ್ಕಳದಲ್ಲಿಯೇ ಅಂತ್ಯಕ್ರಿಯೆನ್ನು ಮುಗಿಸಿ ವಾಪಾಸು ಹೋಗಿದ್ದಾರೆನ್ನಲಾಗಿದೆ.

ಮೃತ ಪಟ್ಟಿದ್ದ ಆದಿತ್ಯ ಹಾಗೂ ತಾಯಿ ಲಕ್ಷ್ಮೀ  ಅವರು ಕಳೆದ ಸೆ.14ರಂದು ಬೆಂಗಳೂರಿನಿಂದ ರೈಲಿನ ಮೂಲಕ ಮುರ್ಡೇಶ್ವರಕ್ಕೆ ಬಂದು ಅಲ್ಲಿನ ವಸತಿ ಗೃಹದಲ್ಲಿ ಒಂದು ದಿನ ತಂಗಿದ್ದರೆನ್ನಲಾಗಿದೆ. ಬರುವಾಗ ತಾಯಿ ಮಗ ಒಟ್ಟು ಒಂದು ಬ್ಯಾಗ್ ಮಾತ್ರ ತಂದಿದ್ದು, ಕಾರನ್ನು ಹೊಂದಿದ್ದರೂ ಕೂಡಾ ರೈಲಿನಲ್ಲಿ ಬಂದಿರುವುದು ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದಲೇ ಎನ್ನುವ ಸಂಶಯ ಕೂಡಾ ಬರುತ್ತಿದೆ.  ಸೆ.15ರಂದು ಬುಧವಾರ ಬೆಳಿಗ್ಗೆ ವಸತಿ ಗೃಹದಿಂದ ಹೊರಟವರು ನೇರವಾಗಿ ಹುಯಿಲು ಮಡಿಗೆ ಹೋಗಿರುವ ಶಂಕೆ ಇದ್ದು ಅಂದೇ ಸಂಜೆಯೋಳಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಕುರಿತು ತಿಳಿದು ಬರುತ್ತದೆ. ತಾಯಿಯ ಶವ ಕಲ್ಲುಬಂಡೆಯ ಮೇಲೆ ಬಿದ್ದು ಮೃತಪಟ್ಟ ಸ್ಥಿತಿಯಲ್ಲಿದ್ದು, ಮಗನ ಶವ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಕೂಡಾ ಸ್ವಲ್ಪ ಅನುಮಾನಕ್ಕೆ ಕಾರಣವಾಗಿದೆ. ತಾಯಿ ಬಂಡೆಕಲ್ಲಿನ ಮೇಲೆ ಬಿದ್ದ ಸ್ಥಿತಿಯಲ್ಲಿ ಮೃತ ಪಡಲು ಕಾರಣ ಏನು ಎನ್ನುವ ಕುರಿತೂ ತನಿಖೆ ಮಾಡಬೇಕಾಗಿದೆ.

ಹುಯಿಲುಮಡಿ ಬೀಚನ್ನು ನೋಡಲು ಹೋಗಿ ಅಕಸ್ಮಾತ್ ಕಾಲುಜಾರಿ ಬಿದ್ದು ಮೃತ ಪಟ್ಟ ತಾಯಿಯ ಸ್ಥಿತಿಯನ್ನು ನೋಡಲಾಗದೇ ಈತ ನೇಣು ಬಿಗಿದುಕೊಂಡು ಮೃತಪಟ್ಟನೇ? ತಾಯಿಯನ್ನು ತಳ್ಳಿ ಮೃತಪಟ್ಟ ನಂತರ ಈತ ಆತ್ಮಹತ್ಯೆಗೆ ಶರಣಾದನೇ? ಯಾವುದೂ ಕೂಡಾ ಸ್ಪಷ್ಟವಿಲ್ಲವಾಗಿದ್ದು ಇನ್ನಷ್ಟೇ ಬೆಂಗಳೂರಿನಲ್ಲಿರುವ ಮನೆಯ ಅಕ್ಕಪಕ್ಕದವರು, ಆತನು ಕೆಲಸ ಮಾಡುತ್ತಿರುವ ಕಂಪೆನಿಯ ಸಹೋದ್ಯೋಗಿಗಳನ್ನು ವಿಚಾರಿಸಿದಾಗ ಸಾವಿಗೆ ನಿಖರ ಕಾರಣ ತಿಳಿದು ಬರಬೇಕಿದೆ. ಆತ್ಮಹತ್ಯೆಗೆ ಮಗನಿಗೆ ಮದುವೆಯಾಗಿಲ್ಲ ಎನ್ನುವ ಕೊರಗು ಕಾರಣವೇ ಇಲ್ಲ ಹಣಕಾಸು ವಿಚಾರವಾಗಿ ಸ್ಥಳೀಯವಾಗಿ ಬೆಂಗಳೂರಿನಲ್ಲಿ ಯಾರಾದರೂ ಬೆದರಿಕೆ ಹಾಕಿದ್ದರೇ ಎನ್ನುವ ಕುರಿತು ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಿದೆ.

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.