ಉಗ್ರ ನಂಟು: ಎನ್ಐಎಯಿಂದ ಭಟ್ಕಳದ ಇಬ್ಬರ ವಿಚಾರಣೆ ಮಾಡಿ ಬಿಡುಗಡೆ
ದೆಹಲಿಗೆ ಬರುವಂತೆ ನೋಟಿಸ್
Team Udayavani, Jul 31, 2022, 8:03 PM IST
ಭಟ್ಕಳ: ಭಯೋತ್ಪಾದನಾ ಕೃತ್ಯಕ್ಕೆ ಸಂಬಂಧ ಪಟ್ಟಂತೆ ಭಟ್ಕಳದ ಸಹೋದರರಿಬ್ಬನ್ನು ಬೆಂಗಳೂರು ಹಾಗೂ ದೆಹಲಿಯ ಎನ್ಐಎ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿ ದೆಹಲಿಗೆ ಬರುವಂತೆ ನೋಟಿಸ್ ನೀಡಿ ಬಿಟ್ಟಿದ್ದಾರೆ.
ನಗರದ ಮುಖ್ಯ ರಸ್ತೆಯ ನಿವಾಸಿ ಅಬ್ದುಲ್ ಮುಕ್ತದಿರ್ ಹಾಗೂ ಆತನ ಸಹೋದರನನ್ನು ಎನ್ಐಎ ಅಧಿಕಾರಿಗಳು ರವಿವಾರ ಬೆಳಗಿನ ಜಾವ ವಶಕ್ಕೆ ತೆಗೆದುಕೊಂಡು ಮಂಕಿಯಲ್ಲಿ ವಿಚಾರಣೆ ನಡೆಸಿದ್ದರು. ಬೆಳಗ್ಗೆಯಿಂದ ಸಂಜೆಯ ತನಕ ವಿಚಾರಣೆ ನಡೆಸಿದ ನಂತರ ಸಹೋದರರನ್ನು ಹೆಚ್ಚಿನ ವಿಚಾರಣೆಗಾಗಿ ದೆಹಲಿಗೆ ಬರುವಂತೆ ನೋಟಿಸ್ ಕೊಟ್ಟು ತಂಡ ವಾಪಾಸಾಗಿದ್ದು,ಸ್ಥಳೀಯ ಪೊಲೀಸರು ಸಹೋರರಿಬ್ಬರನ್ನು ಕರೆದುಕೊಂಡು ಬಂದು ಅವರ ಕುಟುಂಬದವರಿಗೆ ಒಪ್ಪಿಸಿದ್ದಾರೆ ಎನ್ನಲಾಗಿದೆ.
ಎನ್ಐಎ ಅಧಿಕಾರಿಗಳು ಸ್ಥಳೀಯ ಪೊಲೀಸರ ಸಹಕಾರದಿಂದ ರವಿವಾರ ಬೆಳಗಿನ ಜಾವ ಅವರ ಮನೆಯನ್ನು ಶೋಧ ಮಾಡಿ ಸಹೋದರಿಬ್ಬರನ್ನು ವಶಕ್ಕೆ ಪಡೆದಿದ್ದರು. ಅಲ್ಲಿಂದ ಅವರನ್ನು ವಿಚಾರಣೆಗಾಗಿ ಮಂಕಿಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಅವರನ್ನು ದೆವಿವಿಧ ರೀತಿಯಲ್ಲಿ ಪ್ರಶ್ನೆ ಮಾಡಿದ್ದರು.
ಅಬ್ದುಲ್ ಮುಕ್ತದಿರ್ ಪ್ರಿಂಟಿಂಗ್ ಕೆಲಸ ಮಾಡಿಕೊಂಡಿದ್ದಾನೆ ಎನ್ನಲಾಗಿದ್ದು, ಐಸಿಸ್ ಬಗ್ಗೆ ಮೃದು ಧೋರಣೆಯನ್ನು ಹೊಂದಿದ್ದಲ್ಲದೇ ಕಮೆಂಟ್ ಗಳನ್ನು ಕೂಡಾ ಮಾಡುತ್ತಿದ್ದ ಎನ್ನಲಾಗಿದೆ. ಈತ ಐಸಿಸ್ ಬರಹಗಳನ್ನು ತರ್ಜುಮೆ ಮಾಡಿ ಪ್ರಕಟಿಸುತ್ತಿದ್ದಾನೆ ಎನ್ನುವ ಸಂಶಯದ ಮೇಲೆ ವಶಕ್ಕೆ ಪಡೆದಿದ್ದು, ವಿಚಾರಣೆಯಲ್ಲಿ ಯಾವ ಯಾವ ವಿಚಾರ ಪ್ರಸ್ತಾಪವಾಗಿದೆ ಎನ್ನುವುದು ತಿಳಿದು ಬಂದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ