ಭಟ್ಕಳ: ಹೆದ್ದಾರಿ ಸರ್ಕಲ್ ನ್ನು ತಿರಂಗಾ ವೃತ್ತವೆಂದು ನಾಮಕಾರಣ ಮಾಡಿ; ಬಿಜೆಪಿ ಯುವಮೋರ್ಚಾ
Team Udayavani, Jun 7, 2022, 5:35 PM IST
ಭಟ್ಕಳ: ನಗರದಲ್ಲಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು ಈಗಿರುವ ಸರ್ಕಲ್ನ್ನು ದೊಡ್ಡ ಸರ್ಕಲ್ನ್ನಾಗಿ ಮಾಡಿ ಆ ವೃತ್ತಕ್ಕೆ ದೇಶಾಭಿಮಾನ ಮತ್ತು ದೇಶದ ಧ್ವಜಕ್ಕೆ ಗೌರವ ಸಲ್ಲಿಸುವ ಉದ್ದೇಶದಿಂದ ತಿರಂಗಾ ವೃತ್ತ (ಸರ್ಕಲ್) ಎಂದು ನಾಮಕಾರಣ ಮಾಡಬೇಕೆಂದು ಆಗ್ರಹಿಸಿ ಬಿಜೆಪಿ ಯುವಮೋರ್ಚಾದ ವತಿಯಿಂದ ಶಾಸಕ ಸುನೀಲ ನಾಯ್ಕ ಅವರಿಗೆ ಮನವಿ ಸಲ್ಲಿಸಲಾಯಿತು.
ಮನವಿಯಲ್ಲಿ ಪಟ್ಟಣ ಭಾಗದಲ್ಲಿ ಚತುಸ್ಪಥ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಈಗಿರುವ ಭಟ್ಕಳ ವೃತ್ತ ಅಗಲೀಕರಣವಾಗುತ್ತಿದ್ದು ಇದೇ ಸ್ಥಳದಲ್ಲಿ ಭಟ್ಕಳದ ಪ್ರತಿಷ್ಠೆ ಮತ್ತು ಗೌರವದ ಸಂಕೇತವಾಗಿ ಪುನ: ಬೃಹತ್ ಸರ್ಕಲ್ ನಿರ್ಮಿಸಿ, ಹೊಸದಾಗಿ ನಿರ್ಮಾಣವಾಗುವ ಸರ್ಕಲ್ಗೆ ತಿರಂಗಾ ಸರ್ಕಲ್ ಎಂದು ನಾಮಕರಣ ಮಾಡಲು ಜಿಲ್ಲಾಡಳಿತ, ಹೆದ್ದಾರಿ ಪ್ರಾಧಿಕಾರ, ಐಆರ್ ಬಿ ಅವರಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಕೋರಲಾಗಿದೆ.
ಮನವಿ ಸ್ವೀಕರಿಸಿದ ಶಾಸಕ ಸುನೀಲ ನಾಯ್ಕ ಸಂಸದರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಯುವಮೋರ್ಚಾದಿಂದ ಮನವಿಯನ್ನು ಸಂಸದ ಅನಂತಕುಮಾರ ಹೆಗಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೂ ನೀಡಲಾಗಿದೆ.
ಮನವಿ ನೀಡುವ ಸಂದರ್ಭದಲ್ಲಿ ಭಟ್ಕಳ ಬಿಜೆಪಿ ಯುವಮೋರ್ಚ ಅಧ್ಯಕ್ಷ ಮಹೇಂದ್ರ ನಾಯ್ಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ ನಾಯ್ಕ, ಜಿಲ್ಲಾ ಕಾರ್ಯದರ್ಶಿ ಉದಯ ದೇವಾಡಿಗ, ತಾಲೂಕ ಪ್ರಧಾನ ಕಾರ್ಯದರ್ಶಿಗಳಾದ ರವೀಶ್ ನಾಯ್ಕ, ರಾಘವೇಂದ್ರ ನಾಯ್ಕ, ಕಿರಣ ನಾಯ್ಕ, ಉಪಾಧ್ಯಕ್ಷ ಚಂದ್ರು ನಾಯ್ಕ, ಹೇಮಂತ್ ನಾಯ್ಕ್, ಸದಸ್ಯರಾದ ವೆಂಕಟೇಶ ನಾಯ್ಕ್, ಉಮೇಶ ನಾಯ್ಕ, ವಿನೋದ ದೇವಾಡಿಗ, ದುರ್ಗೇಶ ನಾಯ್ಕ, ಯಶವಂತ ನಾಯ್ಕ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಯಾರನ್ನೂ ಯಾವತ್ತೂ ಪ್ಲೀಸ್ ಮಾಡಬೇಡಿ, ಪ್ರೀತಿ ಮಾಡಿ ಸಾಕು: ಹುಕ್ಕೇರಿ ಶ್ರೀ
Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ
Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ
ಭಾರತ್ ಜೋಡೋದಿಂದ ದೇಶದ ಜನರ ಮನಸ್ಸು ಬೆಸೆದ ರಾಗಾ: ಡಿಕೆಶಿ
Honnavar; ಖಾಸಗಿ ಬಸ್ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ
MUST WATCH
ಹೊಸ ಸೇರ್ಪಡೆ
Gayatri Siddeshwar: “ರಾಹುಲ್ ಪ್ರಧಾನಿಯಾಗಿಸುವ ಪಾಕಿಸ್ತಾನ ಷಡ್ಯಂತ್ರ ಫಲ ನೀಡಲ್ಲ’
B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್
BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ
Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು
ಬಿಲ್ಡರ್ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್