ಯುಜಿಡಿ ಪೈಪ್ ಲೈನ್ ಗುಂಡಿಯಲ್ಲಿ ಹೂತು ಹೋದ ಟಿಪ್ಪರ್
Team Udayavani, Nov 25, 2021, 9:56 AM IST
ದಾಂಡೇಲಿ: ನಗರದಲ್ಲಿ ಯಜಿಡಿ ಕಾಮಗಾರಿ ಆರಂಭವಾದಾಗಿನಿಂದ ಒಂದಲ್ಲ ಒಂದು ರೀತಿಯ ಸಮಸ್ಯೆಗಳಿಗೆ ಕಾರಣವಾಗಿದ್ದು, ಜನಜೀವನಕ್ಕೆ ದಿನಂಪ್ರತಿ ತೊಂದರೆಯಾಗಿರುವ ಗೋಳು ಅಷ್ಟಿಷ್ಟಲ್ಲ. ನಗರದ ಬಹುತೇಕ ರಸ್ತೆಗಳನ್ನು ಅಗೆದು ಪೈಪ್ಲೈನ್ ಅಳವಡಿಸಿ ಸಮರ್ಪಕವಾಗಿ ದುರಸ್ತಿ ಮಾಡದಿರುವುದರಿಂದ ವಾಹನ ಸಂಚಾರ ಅಷ್ಟು ಸುಲಭದ ಕೆಲಸವಲ್ಲ ಎನ್ನುವುದು ಸಾಬೀತಾಗತೊಡಗಿದೆ.
ಬುಧವಾರ ಬೆಳಿಗ್ಗೆ ನಗರದ ಟೌನಶೀಪಿನಲ್ಲಿರುವ ಭಟ್ ಆಸ್ಪತ್ರೆಯ ಹತ್ತಿರದ ರಸ್ತೆಯಲ್ಲೊಂದು ಜಲ್ಲಿಕಲ್ಲುಗಳನ್ನು ತುಂಬಿದ ಟಿಪ್ಪರ್ ಒಂದು ಯುಜಿಡಿ ಪೈಪ್ಲೈನಿಗೆ ಅಗೆದು ಮುಚ್ಚಿದ್ದ ಕಡೆ ಹೂತೋಗಿ ಸುಮಾರು ಹೊತ್ತು ಒದ್ದಾಡಿದ ಘಟನೆ ನಡೆದಿದೆ. ಬಹಳಷ್ಟು ಪ್ರಯಾಸ ಪಟ್ಟರೂ ಸಾಧ್ಯವಾಗದೇ ಇದ್ದಾಗ ಜೆಸಿಬಿಯ ಸಹಾಯದಿಂದ ಹೂತೋದ ಟಿಪ್ಪರನ್ನು ಮುಂದಕ್ಕೆ ತಳ್ಳಿದ ನಂತರ ಸಮಸ್ಯೆ ಬಗೆ ಹರಿದಿದೆ.
ಯುಜಿಡಿಯ ಕಾಮಗಾರಿಯಿಂದಾಗಿ ರಸ್ತೆ ಅವ್ಯವಸ್ಥೆಯಿಂದ ಹೂತೋದ ವಾಹನಗಳನ್ನು ಮೇಲಕ್ಕೆತ್ತಲೆಂದೆ ಒಂದು ಜೆಸಿಬಿಯನ್ನು ಕಾಯ್ದಿರಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಒಟ್ಟಿನಲ್ಲಿ ಅಗೆದು ಮುಚ್ಚಿದ ರಸ್ತೆಯನ್ನು ಯೋಗ್ಯ ರೀತಿಯಲ್ಲಿ ದುರಸ್ತಿ ಮಾಡಿಕೊಡಬೇಕೆಂಬ ಆಗ್ರಹ ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ