ಕಾರವಾರ; ಹತ್ತು ಲಕ್ಷ ರೂ.ನಗದು ವಶ: ಡಿಸಿ ಪ್ರಭುಲಿಂಗ ಕವಳಿಕಟ್ಟಿ


Team Udayavani, Mar 29, 2023, 9:41 PM IST

1-fadadasd

ಕಾರವಾರ : ಚುನಾವಣಾ ನೀತಿ ಸಂಹಿತೆ ಜಾರಿಯಾಗಿದ್ದು, ಹತ್ತು ಲಕ್ಷ ನಗದನ್ನು ಮಾಜಾಳಿ ಚೆಕ್ ಪೋಸ್ಟನಲ್ಲಿ ವಶಪಡಿಸಿಕೊಳ್ಳಲಾಗಿದೆ. ದಾಖಲೆಯಿಲ್ಲದ ಬೆಳ್ಳಿ ಸುಮಾರು 7.5 ಲಕ್ಷ ರೂ. ಮೊತ್ತದ್ದು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹೇಳಿದರು.

ಕಾರವಾರದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅವರು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಚಿನ್ನ, ಬೆಳ್ಳಿ, ಹಣ ಸಾಗಾಟ ಮಾಡುವಾಗ ಸೂಕ್ತ ದಾಖಲೆ ಇಟ್ಟುಕೊಳ್ಳಬೇಕು. ಇಲ್ಲದೇ ಹೋದಲ್ಲಿ ಅದು ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆಯುತ್ತಾರೆ. ಸೂಕ್ತ ದಾಖಲೆ ನೀಡಿ ಹಣ ಹಾಗೂ ಚಿನ್ನ ಬಿಡಿಸಿಕೊಳ್ಳಬಹುದು ಎಂದರು. ದಾಖಲೆ ಇಲ್ಲದೇ ಹೋದರೆ ಅವರು ಸರ್ಕಾರದ ವಶವಾಗುತ್ತದೆ. ಚುನಾವಣಾ ಶಾಖೆ ಎಲ್ಲಾ ಘಟನೆಗಳ ಮೇಲೆ ಹದ್ದಿನ ಕಣ್ಣು ಇಟ್ಟಿರುತ್ತದೆ ಎಂದರು.

ಗಾಂಜಾ ಚರಸ ಸೇರಿದಂತೆ ಇತರೆ ಸಾಮಾಗ್ರಿಗಳು ಸಹ ವಶವಾಗಿದೆ. ಈತನಕ ನಗದು ಸೇರಿ ಒಟ್ಟು69.80 ಲಕ್ಷ ರೂ. ಮೊತ್ತದ ಸಾಮಾಗ್ರಿ ವಶಕ್ಕೆ ಪಡೆಯಲಾಗಿದೆ. ಚುನಾವಣಾ ಸಂಬಂಧಿ ಈ ಕಾರ್ಯ ನಡೆಯುತ್ತಿದೆ. ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದಿದ್ದು, ಇದು ಮೇ15 ರತನಕ ಜಾರಿಯಲ್ಲಿರುತ್ತದೆ. ವಿವಿಧ ಪ್ರಚಾರದ ಪೋಸ್ಟರೆ ಕಿತ್ತುಹಾಕುವ ಕೆಲಸ ನಡೆದಿದೆ ಎಂದು ಅವರು ವಿವರಿಸಿದರು. ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಿದ್ದರೂ ಸಹ ಕಾಮಗಾರಿ ನಡೆಯಬೇಕಾದ ಸ್ಥಳದಲ್ಲಿ ಕೆಲಸ ಆರಂಭವಾಗಿಲ್ಲ ಎಂದದಾರೆ , ಅಂಥ ಕೆಲಸಗಳನ್ನು ಚುನಾವಣೆ ಮುಗಿಯುವತನಕ ಆರಂಭಿಸುವಂತಿಲ್ಲ. ಎಲ್ಲಾ ಇಲಾಖೆಗಳಲ್ಲಿ ಯಾವ ಕೆಲಸ ಆರಂಭವಾಗಿದೆ, ಯಾವುದು ಆರಂಭವಾಗಿಲ್ಲ. ಅನುದಾನ ಪಡೆದ ಕಾಮಗಾರಿಗಳು ಯಾವವು ಎಂಬ ಮಾಹಿತಿಯನ್ನು ಎಲ್ಲಾ ಇಲಾಖೆಗಳಿಂದ ಪಡೆಯುವ ಕಾರ್ಯ ನಡೆದಿದೆ ಎಂದು ಅವರು ವಿವರಿಸಿದರು.

ಪಕ್ಷದ ಅಭ್ಯರ್ಥಿಗಳ ಖರ್ಚು ವೆಚ್ಚದ ಮೇಲೆ ಕಣ್ಣಿಡಲಾಗಿದೆ ಎಂದ ಅವರು ಈ ಬಗ್ಗೆ ವಿವಿಧ ಪಕ್ಷಗಳ ಮುಖಂಡರಿಗೆ ಮಾಹಿತಿ ಸಹ ನೀಡಲಾಗಿದೆ ಎಂದರು. ಪತ್ರಿಕೆಗಳಲ್ಲಿ ಜಾಹೀರಾತು ಪ್ರಕಟಿಸುವ ರಾಜಕಾರಣಿಗಳು ಚುನಾವಣಾ ಶಾಖೆಯ ಅನುಮತಿ ಪಡೆಯಬೇಕು ಎಂದು ಅವರು ಸೂಚಿಸಿದರು.

ಜಿಲ್ಲಾಡಳಿತ ಮತದಾನ ಪ್ರಕ್ರಿಯೆಗೆ ಸಜ್ಜಾಗಿದೆ. ಅಂಗವಿಕಲ ಮತ್ತು 80 ವರ್ಷ ತುಂಬಿದವರಿಗೆ ಅಂಚೆ ಮತದಾನ ಸೌಲಭ್ಯ ಕಲ್ಪಿಸಲಾಗಿದೆ. ಅವರು ಮತದಾನ ಕೇಂದ್ರಕ್ಕೆ ಬಂದು ಮತದಾನ ಮಾಡುವುದಿದ್ದರೆ ಅದಕ್ಕೆ ಸಹ ಅವಕಾಶ ಇದೆ ಎಂದರು.

ಜಿಲ್ಲೆಯಲ್ಲಿ 11,83,461 ಲಕ್ಷ ಮತದಾರರು ಇದ್ದಾರೆ. ಇವರಲ್ಲಿ5,94,244ಪುರುಷರು,5,89,211 ಮಹಿಳಾ ಮತದಾರರು, 6 ಜನ ತೃತೀಯಲಿಂಗಿ ಮತದಾರರು ಇದ್ದಾರೆ. ಗ್ರಾಮೀಣ ಭಾಗದಲ್ಲಿ1122 ಪೊಲೀಂಗ್ ಸ್ಟೇಶನ್ಸ, ನಗರ ಭಾಗದಲ್ಲಿ 313 ಮತಗಟ್ಟೆ ಸ್ಥಾಪಿಸಲಾಗುವುದು. ಒಟ್ಟು ಜಿಲ್ಲೆಯಲ್ಲಿ 1435 ಮತಗಟ್ಟೆಗಳು ಇರುತ್ತವೆ ಎಂದರು. ಎ.13 ಎಂದು ಚುನಾವಣಾ ಅಧಿಸೂಚನೆ ಹೊರಡಲಿದೆ. ಅಭ್ಯರ್ಥಿಗಳು ಎ. 20 ರೊಳಗೆ ನಾಮಪತ್ರ ಸಲ್ಲಿಸಬೇಕು. ಎ.21 ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಎ.24 ನಾಮಪತ್ರ ವಾಪಾಸಿಗೆ ಕೊನೆಯ ದಿನ. ಮೇ.10 ಮತದಾನ ನಡೆಯಲಿದೆ. ಮೇ.13 ಮತ ಎಣಿಕೆ ಮಾಡಲಾಗುವುದು ಎಂದರು. ಎಸ್ಪಿ ವಿಷ್ಣುವರ್ಧನ್, ಎಡಿಸಿ ರಾಜು ಮೊಗವೀರ, ವಾರ್ತಾಧಿಕಾರಿ ಜಯಂತ ಇದ್ದರು.

ಟಾಪ್ ನ್ಯೂಸ್

1-asasa

Doordarshan ಖ್ಯಾತ ಟಿವಿ ನಿರೂಪಕಿ ಗೀತಾಂಜಲಿ ಅಯ್ಯರ್ ವಿಧಿವಶ

rain

ಬಿಪೊರ್ ಜಾಯ್ ಚಂಡಮಾರುತ: ಕರಾವಳಿಯಲ್ಲಿ ಎಚ್ಚರ ವಹಿಸಲು ಸೂಚನೆ

1-wewqew

Manipur ಆಂಬ್ಯುಲೆನ್ಸ್‌ಗೆ ದುಷ್ಕರ್ಮಿಗಳಿಂದ ಬೆಂಕಿ; 8 ವರ್ಷದ ಬಾಲಕ ಸೇರಿ ಮೂವರು ಬಲಿ

1-kabini

Kabini ಹಿನ್ನೀರಲ್ಲಿ 3.5 ಟನ್‌ ತ್ಯಾಜ್ಯ ಸಂಗ್ರಹಿಸಿದ ಅರಣ್ಯ ಸಿಬಂದಿ, ಸ್ವಯಂಸೇವಕರು

1-sadasd

Wrestlers ಪ್ರತಿಭಟನೆ ಜೂನ್ 15 ರವರೆಗೆ ಸ್ಥಗಿತಕ್ಕೆ ಒಪ್ಪಿಗೆ; ಕಾಯುವಂತೆ ಸರ್ಕಾರ ಒತ್ತಾಯ

sunil-kkl

Education ಗುಲಾಮಿ ಚಿಂತನೆಯನ್ನು ತುರುಕುತ್ತೀರಾ?:ಸಿಎಂ ಸಿದ್ದರಾಮಯ್ಯರಿಗೆ ಸುನಿಲ್ ಪ್ರಶ್ನೆ

BJP Symbol

2024 Election; ಬಿಜೆಪಿಯ ಎನ್‌ಡಿಎ ವಿಸ್ತರಣೆ ಅಜೆಂಡಾ ಕಾರ್ಯಗತವಾಗಬಹುದೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sirsi

SSLC Revaluation ; ಶಿರಸಿಯ ಅವಳಿ ಮಕ್ಕಳಿಗೆ 7 ಮತ್ತು 9 ನೇ ರ‍್ಯಾಂಕ್‌

3-dandeli

Dandeli : ದ್ವಿ ಚಕ್ರ ವಾಹನ ಸ್ಕಿಡ್ ಆಗಿ ಓರ್ವ ಗಂಭೀರ

1-sdd–dsad

Dandeli: ಗೆಳೆಯರೊಂದಿಗೆ ಈಜಲು ತೆರಳಿದ್ದ ಬಾಲಕ ನೀರುಪಾಲು

1-adsasad

ಪ್ಲಾಸ್ಟಿಕ್ ಮುಕ್ತ ಭಾರತಕ್ಕೆ ಸಂಕಲ್ಪ ಮಾಡೋಣ: ಹುಕ್ಕೇರಿ ಶ್ರೀ

1-sadasd

Ankola ಪೋಸ್ಟರ್ ಪ್ರಕರಣ:ಪೊಲೀಸರಿಂದ ಒರ್ವನ ಬಂಧನ

MUST WATCH

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಹೊಸ ಸೇರ್ಪಡೆ

1-scrain

ಕುಳಗೇರಿ ಕ್ರಾಸ್: ಕ್ರೇನ್ ಢಿಕ್ಕಿ ಹೊಡೆದು ಪಾದಚಾರಿ ಮೃತ್ಯು

1-asasa

Doordarshan ಖ್ಯಾತ ಟಿವಿ ನಿರೂಪಕಿ ಗೀತಾಂಜಲಿ ಅಯ್ಯರ್ ವಿಧಿವಶ

rain

ಬಿಪೊರ್ ಜಾಯ್ ಚಂಡಮಾರುತ: ಕರಾವಳಿಯಲ್ಲಿ ಎಚ್ಚರ ವಹಿಸಲು ಸೂಚನೆ

1-wewqew

Manipur ಆಂಬ್ಯುಲೆನ್ಸ್‌ಗೆ ದುಷ್ಕರ್ಮಿಗಳಿಂದ ಬೆಂಕಿ; 8 ವರ್ಷದ ಬಾಲಕ ಸೇರಿ ಮೂವರು ಬಲಿ

1——–asasdasd

Gangavathi ನಗರಸಭೆ ಸಾಮಾನ್ಯಸಭೆ: ಶಾಸಕ ರೆಡ್ಡಿ ಅವರಿಂದ ಅಧಿಕಾರಿಗಳ ತರಾಟೆ