ಸಾತೋಡ್ಡಿ ಜಲಪಾತ: ಪ್ರವಾಸಿಗರು ಜಾಗೃತರಾಗಿರಲು ಮನವಿ
Team Udayavani, Jul 21, 2023, 12:32 PM IST
ಯಲ್ಲಾಪುರ: ರಾಜ್ಯದ ಪ್ರಸಿದ್ದ ಯಲ್ಲಾಪುರ ತಾಲೂಕಿನ ಸಾತೋಡ್ಡಿ ಜಲಪಾತ ವೀಕ್ಷಣೆಗೆ ಎಗ್ಗಿಲ್ಲದೇ ಪ್ರವಾಸಿಗರು ಬರುತ್ತಿದ್ದಾರೆ.
ಎರಡು-ಮೂರು ದಿನದಿಂದ ಸುರಿದ ಭಾರೀ ಮಳೆಗೆ ಜಲಪಾತ ತುಂಬಿ ಧುಮ್ಮುಕ್ಕುತ್ತಿರುವ ನಯನ ಮನೋಹರ ದೃಶ್ಯ ಮತ್ತೆಲ್ಲೂ ನೋಡ ಸಿಗದು. ಆದರೆ ಸಂತೋಷವೂ ಕೆಲವೊಮ್ಮೆ ಸಂಕಟಕ್ಕೂ ಕಾರಣವಾಗಬಹುದೆಂಬ ಕಾರಣಕ್ಕೆ ಪ್ರವಾಸಿಗರಿಗೆ ಅಲ್ಲಿಯ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷರು ಕೆಲ ಕಿವಿಮಾತು ಹೇಳಿದ್ದಾರೆ.
ಸಾತೊಡ್ಡಿ ಸುತ್ತ-ಮುತ್ತ ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಬೀಳುತ್ತಿದ್ದು, ಸಾತೊಡ್ಡಿ ಜಲಪಾತ ತುಂಬಿ ಹರಿಯುತ್ತಿದೆ. ಜಲಪಾತ ನೋಡಲು ಬಂದ ಪ್ರವಾಸಿಗರು ಎಚ್ಚರಿಕೆ ವಹಿಸಬೇಕು ಎಂದು ಕುಂಬ್ರಾಳ ಕಂಚನಗದ್ದೆ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ನಾರಾಯಣ ಭಟ್ಟ ಕಂಚನಗದ್ದೆ ಪ್ರವಾಸಿಗರಲ್ಲಿ ವಿನಂತಿ ಮಾಡಿದ್ದಾರೆ.
ಜಲಪಾತದಲ್ಲಿ ನೀರು ರಭಸದಿಂದ ಹರಿಯುತ್ತಿದ್ದು, ಪ್ರವಾಸಿಗರು ನೀರಿಗಿಳಿಯುವ ಸಾಹಸ ಮಾಡಬಾರದು. ಜಲಪಾತಕ್ಕೆ ಹೋಗುವ ದಾರಿಯ ಪಕ್ಕದಲ್ಲಿರುವ ಗುಡ್ಡ ಕುಸಿಯುವ ಭೀತಿ ಇರುವ ಕಾರಣ ಪ್ರವಾಸಿಗರು ಎಚ್ಚರ ವಹಿಸುವುದು ಅಗತ್ಯ. ಜಲಪಾತ ವೀಕ್ಷಣೆಗೆ ಹೋದವರು ಹೆಚ್ಚು ಸಮಯ ಅಲ್ಲಿ ಕಳೆಯದೇ, ನೋಡಿದ ತಕ್ಷಣ ವಾಪಸಾಗುವಂತೆ ಪ್ರವಾಸಿಗರಲ್ಲಿ ಅವರು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ