23 ಗ್ರಾಪಂಗಳ ನರೇಗಾ ಕಾಮಗಾರಿ ಪರಿಶೀಲನೆ

ಮಂಡ್ಲಿಕೊಪ್ಪ ದಾಸನ ಕೆರೆ ಹೂಳೆತ್ತುವ ಸ್ಥಳಕ್ಕೆ ಸಹಾಯಕ ನಿರ್ದೇಶಕ ಡಿ.ಇ. ದಿನೇಶ್‌ ಭೇಟಿ

Team Udayavani, May 8, 2022, 4:31 PM IST

20

ಕಾರವಾರ: ನರೇಗಾ ಯೋಜನೆಯಡಿ ಸಿದ್ದಾಪುರ ತಾಪಂ ವ್ಯಾಪ್ತಿಯ ಒಟ್ಟು 23 ಗ್ರಾಪಂಗಳಲ್ಲಿ ಹಲವು ಕಾಮಗಾರಿಗಳು ನಡೆಯುತ್ತಿದ್ದು, ಕೋರ್ಲಕೈ, ಕೋಲಸಿರ್ಸಿ, ಹಾರ್ಸಿಕಟ್ಟಾ, ಮನಮನೆ, ಕಂವಚೂರು ಗ್ರಾಪಂಗಳಲ್ಲಿ ಹೆಚ್ಚಿನ ಪ್ರಮಾಣದ ಕೂಲಿಕಾರರು ಕೆಲಸದಲ್ಲಿ ನಿರತರಾಗಿದ್ದಾರೆ ಎಂದು ತಾಪಂ ನರೇಗಾ ಸಹಾಯಕ ನಿರ್ದೇಶಕ ಡಿ.ಇ. ದಿನೇಶ್‌ ತಿಳಿಸಿದರು.

ಕೋಲಸಿರ್ಸಿ ಗ್ರಾಪಂನ ಮಂಡ್ಲಿಕೊಪ್ಪ ದಾಸನ ಕೆರೆ ಹೂಳೆತ್ತುವ ಸ್ಥಳಕ್ಕೆ ಭೇಟಿ ನೀಡಿದ ಅವರು, ಕಾಮಗಾರಿ ಪರಿಶೀಲಿಸಿ ಮಾತನಾಡಿದರು.

ಕಳೆದ ಸಾಲಿನಲ್ಲಿ ಯೋಜನೆಯ ಗುರಿ ತಲುಪಿದ್ದು, ಪ್ರಸಕ್ತ ಸಾಲಿನಲ್ಲಿಯೂ ಗುರಿ ತಲುಪಲು ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುತ್ತಿದೆ ಎಂದರು.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಸಮಗ್ರ ಶಾಲಾ ಅಭಿವೃದ್ಧಿ, ಕಾಲುಸಂಕ, ಅಂಗನವಾಡಿ ಕಟ್ಟಡ ಹಾಗೂ ಕೃಷಿ ಮತ್ತು ತೋಟಗಾರಿಕಾ ಇಲಾಖೆಯಡಿ ವೈಯಕ್ತಿಕ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಇದೀಗ ಪ್ರತಿದಿನವೂ 309 ರೂ ಕೂಲಿ ಹಾಗೂ 10 ರೂ ಸಲಕರಣೆ ವೆಚ್ಚ ಸೇರಿ ಒಟ್ಟು 319 ರೂ ಕೂಲಿಕಾರರ ಕೈ ಸೇರುತ್ತಿದೆ. ಕೂಲಿಕಾರರ ಬೇಡಿಕೆಗನುಗುಣವಾಗಿ ದುಡಿಯೋಣ ಬಾ ಅಭಿಯಾನದ ಮೂಲಕ ಕಾಮಗಾರಿಗಳನ್ನು ಯಶಸ್ವಿಗೊಳಿಸಲಾಗುತ್ತಿದೆ ಎಂದರು.

ಪ್ರಸಕ್ತ ಆರ್ಥಿಕ ವರ್ಷದಲ್ಲಿ 5 ಲಕ್ಷ ವೆಚ್ಚದಲ್ಲಿ ಮಂಡ್ಲಿಕೊಪ್ಪ ದಾಸನ ಕೆರೆ ಹೂಳೆತ್ತುವ ಕಾರ್ಯ ಭರದಿಂದ ಸಾಗಿದ್ದು, ಪ್ರತಿದಿನ ಸುಮಾರು 90 ಕೂಲಿಕಾರರು ಭಾಗಿಯಾಗಿದ್ದಾರೆ. ಈವರೆಗೆ ಅಂದಾಜು 429 ಮಾನವ ದಿನಗಳು ಸೃಜನೆಯಾಗಿದ್ದು, ಮಹಿಳೆಯರು, ಪುರುಷರು, ವಯಸ್ಕರು ಕೆಲಸ ನಿರ್ವಹಿಸುತ್ತಿದ್ದಾರೆ. ನರೇಗಾ ಯೋಜನೆಯಡಿ ಬೇಸಿಗೆಯಲ್ಲಿ ಕೃಷಿ ಕೆಲಸ ಕಡಿಮೆ ಇರುವುದರಿಂದ ದುಡಿಯುವ ಜನರು ಉದ್ಯೋಗ ಖಾತರಿ ಕೆಲಸ ಪಡೆದು, ಜೀವನ ನಿರ್ವಹಣೆ ಮಾಡುತ್ತಿದ್ದಾರೆ. ಇನ್ನು ಇಲ್ಲಿನ ಕೂಲಿಕಾರರಲ್ಲಿ ಬಹುತೇಕರು ಕೂಲಿ ಮಾಡಿಯೇ ಜೀವನ ನಿರ್ವಹಣೆ ಮಾಡಬೇಕಾದ ಅನಿವಾರ್ಯತೆ ಇದೆ.

ಹೀಗಾಗಿ ಕೆಲವು ಗ್ರಾಪಂಗಳಲ್ಲಿ ಕೆಲಸಕ್ಕೆ ಎಲ್ಲಿಲ್ಲದ ಬೇಡಿಕೆಯಿದೆ. ಆರ್ಥಿಕ ವರ್ಷದಲ್ಲಿ ಶಾಲಾ ಸಮಗ್ರ ಅಭಿವೃದ್ಧಿ, ಅಡುಗೆ ಕೋಣೆ, ಎಸ್‌ಡಬ್ಲೂಎಂ, ಕಾಲುಸಂಕ, ಪಿಂಕ್‌ ಶೌಚಾಲಯ, ಕಾಲುವೆ ನಿರ್ಮಾಣ, ಕೆರೆ ನಿರ್ಮಾಣ ಕಾಮಗಾರಿಗಳಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಲಾಗುತ್ತಿದೆ.

ಕೂಲಿಕಾರ ಮಹಿಳೆ ಸಾವಿತ್ರಿ ರಾಮಚಂದ್ರ ಗೊಂಡ ಹೇಳುವಂತೆ ಕಳೆದ ನಾಲ್ಕು ವರ್ಷಗಳಿಂದ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಮಾಡುತ್ತಿದ್ದೇನೆ. ನಮ್ಮಂತ ಕೂಲಿಕಾರರಿಗೆ ಈ ಯೋಜನೆಯಿಂದ ಬದುಕು ಕಟ್ಟಿಕೊಳ್ಳಲು ಸಹಾಯಕವಾಗಿದೆ. ನನ್ನಂತೆಯೇ ಪ್ರತಿಯೊಬ್ಬ ಮಹಿಳೆಯೂ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲಿ ಎಂದರು.

ಗ್ರಾಪಂ ಅಭಿವೃದ್ಧಿ ಅಧಿಕಾರಿ, ಗ್ರಾಪಂ ಸಿಬ್ಬಂದಿ, ಬಿಎಫ್‌ ಟಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.