ಚಿತ್ತಾಕುಲದ 12 ಕುಟುಂಬಗಳಿಗೆ 25 ವರ್ಷಗಳಿಂದ ಬಹಿಷ್ಕಾರ?


Team Udayavani, Apr 18, 2017, 3:45 AM IST

Ban18041706MednRvised.jpg

ಕಾರವಾರ: ಸಮೀಪದ ಸದಾಶಿವಗಡ ಗ್ರಾಮದ ಚಿತ್ತಾಕುಲ ಎಂಬಲ್ಲಿ ನೆಲೆಸಿರುವ ಮುಸ್ಲಿಂ ಸಮುದಾಯದ 12 ಕುಟುಂಬಗಳಿಗೆ ಸ್ವಧರ್ಮೀಯರೇ 25 ವರ್ಷಗಳಿಂದ ಬಹಿಷ್ಕಾರ ಹಾಕಿದ್ದಾರೆಂಬ ಆರೋಪ ಕೇಳಿಬಂದಿದೆ. ಆದರೆ, ಈ ಆರೋಪವನ್ನು ಮಸೀದಿ ಸಮಿತಿ ನಿರಾಕರಿಸಿದೆ.

ಬಹಿಷ್ಕಾರಕ್ಕೆ ಒಳಗಾಗಿದ್ದಾರೆ ಎನ್ನಲಾದ 12 ಕುಟುಂಬಗಳ ಸದಸ್ಯರು ಸೋಮವಾರ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದಾರೆ. ಆಂಧ್ರಪ್ರದೇಶದ ದಾವರ್‌ ಅಲಿ ಷಾ ಎಂಬ ಗುರುವಿನ ಫೋಟೋ ಇಟ್ಟು, ಅವರ ಅನುಯಾಯಿಗಳಾಗಿರುವ ಒಂದೇ ಕಾರಣಕ್ಕೆ ಸದಾಶಿವಗಡದ ಜಮಾತ್‌ ಉಲ್‌ ಮುಸ್ಲಿಮೀನ್‌ ನೂರಾನಿ ಮಸೀದಿ ಆಡಳಿತ ಸಮಿತಿ ತಮಗೆ ಬಹಿಷ್ಕಾರ ಹಾಕಿದೆ. ಅನ್ವರ್‌ ಮಹಮ್ಮದ್‌ ಖಾನೆ, ಜೈನುಲ್‌ ಅಬೆದಿನ್‌, ಕೌಸರ್‌ ಖಾನ್‌, ನಸೀಮಾ ಆಪಾj ಸೇರಿ 12 ಕುಟುಂಬಗಳು ತಮ್ಮ ಸಮುದಾಯದವರ ಶುಭ ಕಾರ್ಯಗಳಿಗೆ, ಮರಣ ಸಂದರ್ಭದಲ್ಲೂ ಹೋಗುವಂತಿಲ್ಲ. ಈ 12 ಕುಟುಂಬಗಳ ಮನೆಗೂ ಇತರರು ಬರುವಂತಿಲ್ಲ, ಮಾತನಾಡುವಂತಿಲ್ಲ, ವಾಸವಿರುವ ಪ್ರದೇಶದ ಬಾವಿ ನೀರು ಸೇದುವಂತಿಲ್ಲ ಎಂದು ಮಸೀದಿ ಆಡಳಿತ ಸಮಿತಿ ನಿರ್ಬಂಧ ಹೇರಿದೆ.

ಈ ಬಗ್ಗೆ ಜಿಲ್ಲಾಡಳಿತಕ್ಕೆ ಬಹು ಹಿಂದೆಯೇ ದೂರು ನೀಡಲಾಗಿತ್ತು. ಈಗಲಾದರೂ ಜಿಲ್ಲಾಡಳಿತ ಈ ಬಹಿಷ್ಕಾರದಿಂದ ಮುಕ್ತಗೊಳಿಸಲಿ ಎಂಬುದು ಕೌಸರ್‌ ಖಾನ್‌, ನಜೀಮಾ ಆಫಾj ಮತ್ತಿರರರು ಮನವಿ ಮಾಡಿದ್ದಾರೆ.

ಮಗನ ಮದುವೆ ತಪ್ಪುವ ಸಂಭವ:
ತಮ್ಮ ಪುತ್ರ ಅಬ್ದುಲ್‌ ಸಲಾಂ ಅವರ ಮದುವೆ ಧಾರವಾಡದಲ್ಲಿ ಏ. 21ಕ್ಕೆ ನಿಗದಿಯಾಗಿದೆ. ಸಂಬಂಧಿಧಿಕರಿಗೆ, ಸಮುದಾಯದವರಿಗೆ, ಮಸೀದಿ ಆಡಳಿತ ಸಮಿತಿ ಸದಸ್ಯರಿಗೆ ಮದುವೆ ಆಮಂತ್ರಣ ನೀಡಲಾಗಿದೆ. ಮದುವೆ ಸರಾಗವಾಗಿ ನಡೆಯಬೇಕೆಂದರೆ ಜಮಾತ್‌ ಉಲ್‌ ಮುಸ್ಲಿಮೀನ್‌ ನೂರಾನಿ ಮಸೀದಿ ಆಡಳಿತ ಸಮಿತಿ ನಿರಾಕ್ಷೇಪಣಾ ಪತ್ರ ನೀಡಬೇಕು. ಮಸೀದಿ ಸಮಿತಿ ಸದಸ್ಯರಿಗಾದರೂ ಮದುವೆಗೆ ಹಾಜರಾಗಲು ಅನುಮತಿ ನೀಡಬೇಕು. ಇಲ್ಲದಿದ್ದರೆ ಮದುವೆ ಮುರಿದು ಬೀಳುವ ಸಂಭವ ಇದೆ ಎಂಬ ಜೈನುಲ್‌ ಅಬೆದಿನ್‌ ಆತಂಕದಿಂದ ಹೇಳಿದರು.

ಆಂಧ್ರದ ದಾವರ್‌ ಅಲಿ ಷಾ ಅವರ ಅನುಯಾಯಿಗಳಾಗಿದ್ದೇವೆ ಎಂಬ ಒಂದೇ ಕಾರಣಕ್ಕೆ 12 ಕುಟುಂಬಗಳಿಗೆ ಬಹಿಷ್ಕಾರ ಹಾಕುವುದು ಎಷ್ಟು ಸರಿ? ಈ ಸಮಸ್ಯೆಯನ್ನು ಜಿಲ್ಲಾಡಳಿತವೇ ಮಧ್ಯ ಪ್ರವೇಶಿಸಿ ಪರಿಹರಿಸಬೇಕು.
– ಅನ್ವರ್‌ ಅಹಮ್ಮದ್‌ ಖಾನೆ, ಬಹಿಷ್ಕಾರಕ್ಕೆ ಒಳಗಾಗಿದೆ ಎನ್ನಲಾದ ಕುಟುಂಬದ ಮುಖ್ಯಸ್ಥ

ಎರಡು ದಿನಗಳ ಹಿಂದೆ ಈ ಬಗ್ಗೆ  ಠಾಣೆಯಲ್ಲಿ ಪಿಟಿಶನ್‌ ಆಗಿದೆ. ಸಹಾಯಕ ಕಮಿಷನರ್‌ ಫೌಜಿಯಾ ತರನಂ ಅವರೂ ಮಾತುಕತೆ ಸಂದರ್ಭದಲ್ಲಿದ್ದರು. ಜಮಾತ್‌ ಉಲ್‌ ಮುಸ್ಲಿಮೀನ್‌ ನೂರಾನಿ ಮಸೀದಿಯ ಆಡಳಿತ ಸಮಿತಿಯವರು ಯಾರಿಗೂ ಬಹಿಷ್ಕಾರ ಹಾಕಿಲ್ಲ ಎನ್ನುತ್ತಿದ್ದಾರೆ. 20 ವರ್ಷಗಳಿಂದ 12 ಕುಟುಂಬಗಳು ಮಸೀದಿಗೆ ಚಂದಾ ತುಂಬಿ ರಸೀದಿ ಪಡೆದಿಲ್ಲ. ಮದುವೆ ಸಮಾರಂಭದ ಆಮಂತ್ರಣ ಕೊಟ್ಟರೆ ಮದುವೆಗೆ ಮಸೀದಿ ಸಮಿತಿ ಸದಸ್ಯರು ಹೋಗಬಹುದು. ಅದಕ್ಕೆ ಅಡ್ಡಿಪಡಿಸುವುದಿಲ್ಲ ಎಂದು ಮಸೀದಿ ಆಡಳಿತ ಮಂಡಳಿಯವರು ಬರೆದುಕೊಟ್ಟಿದ್ದಾರೆ. ಬಹಿಷ್ಕಾರದಂಥ ಪ್ರಸಂಗವೇ ಇಲ್ಲ ಎಂದೂ ಹೇಳಿದ್ದಾರೆ. ಈ ವಿವಾದವನ್ನು ಅಲ್ಪಸಂಖ್ಯಾತರ ಇಲಾಖೆಯ ಮೂಲಕ ಅಂತರಿಕವಾಗಿ ಬಗೆಹರಿಸಿಕೊಳ್ಳಲು ಸೂಚಿಸಲಾಗಿದೆ.
– ಉಮೇಶ್‌ ಪಾವುಸ್ಕರ್‌ . ಪಿಎಸ್‌ಐ. ಚಿತ್ತಾಕುಲಾ
 

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.