![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಮುಚ್ಚಿದ ಶಾಲೆ ಪುನಾರಂಭ?
ಅಧಿಕಾರಿಗಳ ತಂಡ ಭೇಟಿ •ದೇವಗುಂಡಿ ಗ್ರಾಮಸ್ಥರ ಹೋರಾಟಕ್ಕೆ ಫಲ
Team Udayavani, May 11, 2019, 4:06 PM IST
![uk-tdy-5..](https://www.udayavani.com/wp-content/uploads/2019/05/uk-tdy-5..-1-620x328.jpg)
ಕುಮಟಾ: ದೇವಗುಂಡಿ ಗ್ರಾಮಸ್ಥರು ಹಾಗೂ ಮಕ್ಕಳು.
ಕುಮಟಾ: ವಿದ್ಯಾರ್ಥಿಗಳ ಹಾಜರಾತಿ ಕೊರತೆ ಕಾರಣದಿಂದಾಗಿ 2014-15ನೇ ಸಾಲಿನಲ್ಲಿ ಮುಚ್ಚಲ್ಪಟ್ಟಿದ್ದ ದೇವಗುಂಡಿ ಸರಕಾರಿ ಕಿರಿಯ ಪ್ರಾಥಮಿಕ ಕನ್ನಡ ಶಾಲೆ ಪುನಾರಂಭಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಪ್ರಕ್ರಿಯೆಗಳು ನಡೆಯುತ್ತಿದ್ದು, ಇದರಿಂದ ಗ್ರಾಮಸ್ಥರ ಮೊಗದಲ್ಲಿ ಮಂದಹಾಸ ಮೂಡಿದೆ.
ತಾಲೂಕಿನ ಕಲಭಾಗ ಗ್ರಾಪಂ ವ್ಯಾಪ್ತಿಯ ಪುಟ್ಟ ಗ್ರಾಮ ದೇವಗುಂಡಿ. ಸುಮಾರು 40 ಮನೆಗಳಿರುವ ಈ ಗ್ರಾಮದಲ್ಲಿ ಒಂದು ಶಾಲೆಯಿತ್ತು. 1958ರಲ್ಲಿ ಅಂದರೆ 60 ವರ್ಷಗಳ ಹಿಂದೆ ಸ್ಥಾಪನೆಯಾದ ಈ ಶಾಲೆಯಲ್ಲಿ ಒಂದರಿಂದ 4ನೇ ತರಗತಿಗಳು ನಡೆಯುತ್ತಿತ್ತು. ಸಾವಿರಾರು ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡಿದ್ದು, ಶಿಕ್ಷಕ, ಸೈನಿಕ ಸೇರಿದಂತೆ ಇನ್ನಿತರ ಸರಕಾರಿ ಹುದ್ದೆಗಳು, ಪ್ರತಿಷ್ಠಿತ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದಾರೆ.
ಹೀಗೆ 6 ದಶಕಗಳ ಕಾಲ ನಿರಂತರವಾಗಿ ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ ನೀಡುತ್ತಾ ಬಂದಿರುವ ಈ ಶಾಲೆಯನ್ನು ಹಾಜರಾತಿ ಕೊರತೆ ಕಾರಣದಿಂದಾಗಿ ಏಕಾಏಕಿ ಮುಚ್ಚಲ್ಪಟ್ಟಿದ್ದರಿಂದ ಗ್ರಾಮದ ಜನರಿಗೆ ತೀವ್ರ ನೋವನ್ನುಂಟುಮಾಡಿತ್ತು. ಈ ಪ್ರಕ್ರಿಯೆ ತಡೆಯಲು ಗ್ರಾಮಸ್ಥರು ಹಲವು ಪ್ರಯತ್ನ ನಡೆಸಿದರೂ ಪ್ರಯೋಜನವಾಗಿರಲಿಲ್ಲ.
ಊರಿನ ಮಕ್ಕಳು ಅನಿವಾರ್ಯವಾಗಿ ಪಕ್ಕದ ಕಲಭಾಗ ಶಾಲೆಗೆ ಹೋಗುವ ಪರಿಸ್ಥಿತಿ ಎದುರಾಗಿತ್ತು. ಮಳೆಗಾಲದಲ್ಲಿ ಚಿಕ್ಕ ಮಕ್ಕಳು ದಾರಿ ಮಧ್ಯೆಯಲ್ಲಿನ ಸೇತುವೆ ದಾಟಿ ಹೋಗುವುದು ತುಂಬಾ ಕಷ್ಟಕರದ್ದಾಗಿದೆ. ಕಳೆದ 4 ವರ್ಷಗಳಲ್ಲಿ ಚಿಕ್ಕ ಮಕ್ಕಳ ಪರಿಸ್ಥಿತಿ ಕಂಡ ಊರಿನ ಗ್ರಾಮಸ್ಥರು ಶಾಲೆಯನ್ನು ಪುನಃ ಆರಂಭಿಸಲೇಬೇಕೆಂದು ಪಣತೊಟ್ಟು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಕೂಡ ಸಲ್ಲಿಸಿದ್ದರು.
ಅದಲ್ಲದೇ, ಈ ಬಾರಿ ಸ್ಥಳೀಯ ಅಂಗನವಾಡಿಯಲ್ಲಿ ಕಲಿಯುತ್ತಿರುವ ನಾಲ್ಕು ವಿದ್ಯಾರ್ಥಿಗಳು ಒಂದನೇ ತರಗತಿಗೆ ಸೇರುತ್ತಿದ್ದು, ಅವರೂ ಸೇರಿದಂತೆ ಸುಮಾರು 12 ವಿದ್ಯಾರ್ಥಿಗಳು ಶಾಲೆಗೆ ಸೇರಲು ಉತ್ಸುಕರಾಗಿದ್ದಾರೆ. ಇದರಿಂದ ಶಾಲೆ ಪುನಾರಂಭಕ್ಕೆ ಆನೆಬಲ ಸಿಕ್ಕಂತಾಗಿದೆ. ಬಿಇಒ ಈ ಕುರಿತು ಉಪನಿರ್ದೇಶಕರಿಗೆ ಆದೇಶಕ್ಕಾಗಿ ಪತ್ರ ಬರೆದಿದ್ದು, ಅವರ ಆದೇಶದಂತೆ ಪರಿಶೀಲನೆಗಾಗಿ ಅಧಿಕಾರಿಗಳನ್ನು ಕಳುಹಿಸಿಕೊಡಲಾಗಿದೆ. ಗ್ರಾಮಸ್ಥರ ಅಭಿಪ್ರಾಯ ಪಡೆದು ಇಲ್ಲಿನ ವಸ್ತುಸ್ಥಿತಿ ಅವಲೋಕಿಸಿದ ಅಧಿಕಾರಿಗಳ ತಂಡ, ಮೇಲಧಿಕಾರಿಗಳಿಗೆ ವರದಿ ಸಲ್ಲಿಸಿ ಶಾಲೆ ತೆರೆಯುವ ಕುರಿತು ಗ್ರಾಮಸ್ಥರಿಗೆ ಭರವಸೆ ನೀಡಿದ್ದಾರೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shirur landslide; Green signal for National highway traffic in three or four days?](https://www.udayavani.com/wp-content/uploads/2024/07/1-27-150x83.jpg)
Shirur landslide; ರಾ.ಹೆದ್ದಾರಿ ಸಂಚಾರಕ್ಕೆ ಮೂರ್ನಾಲ್ಕು ದಿನಗಳಲ್ಲಿ ಗ್ರೀನ್ ಸಿಗ್ನಲ್ ?
![Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ](https://www.udayavani.com/wp-content/uploads/2024/07/shiruu-150x83.jpg)
Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ
![1-ccc-aa](https://www.udayavani.com/wp-content/uploads/2024/07/1-ccc-aa-150x94.jpg)
Shiruru hill collapse; 10 ದಿನದಿಂದ ಇಲ್ಲೇ ಇದ್ದೇನೆ : ಟೀಕೆಗಳಿಗೆ ಶಾಸಕ ಸೈಲ್ ಬೇಸರ
![1–eewr-aa-aa](https://www.udayavani.com/wp-content/uploads/2024/07/1-eewr-aa-aa-150x91.jpg)
Shiruru hill collapse; ಮಣ್ಣು ತೆಗೆಯುವ ಕಾರ್ಯಾಚರಣೆ ವೇಳೆ ಸಿಕ್ಕ ಹೋಟೆಲ್ ಅವಶೇಷಗಳು
![1–eewr-aa](https://www.udayavani.com/wp-content/uploads/2024/07/1-eewr-aa-150x89.jpg)
Shiruru hill collapse; ನದಿಯ ನಾಲ್ಕು ಕಡೆ ಅವಶೇಷಗಳು ಬೆಳಕಿಗೆ:ಇಂದ್ರಬಾಲನ್ ನಂಬಿಯಾರ್
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.