ಅಂಕೋಲಾಕ್ಕೆ ಪ್ರಧಾನಿ ಬಂದು ಹೋದ ಮೇಲೆ ಆತ್ಮವಿಶ್ವಾಸ ಹೆಚ್ಚಿದೆ: ವೆಂಕಟೇಶ ನಾಯಕ್


Team Udayavani, May 4, 2023, 3:49 PM IST

ಅಂಕೋಲಾಕ್ಕೆ ಪ್ರಧಾನಿ ಬಂದು ಹೋದ ಮೇಲೆ ಆತ್ಮವಿಶ್ವಾಸ ಹೆಚ್ಚಿದೆ: ವೆಂಕಟೇಶ ನಾಯಕ್

ಕಾರವಾರ: ಜಿಲ್ಲೆಯಲ್ಲಿ ಬುಧವಾರ ನಡೆದ ಬಿಜೆಪಿ ಬಹಿರಂಗ ಸಮಾವೇಶದಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ ನಂತರ ನಮ್ಮ ಆತ್ಮವಿಶ್ವಾಸ ಹೆಚ್ಚಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ವೆಂಕಟೇಶ ನಾಯಕ್ ಹೇಳಿದರು‌.

ಕಾರವಾರದಲ್ಲಿ ಗುರುವಾರ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿ ಮಾಡಿದ ಅವರು ಬಿಜೆಪಿ ಜಿಲ್ಲೆಯಲ್ಲಿ ಆರು ವಿಧಾನಸಭಾ ಕ್ಷೇತ್ರ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು. ಸಮಾವೇಶಕ್ಕೆ ನಿರೀಕ್ಷೆಗೂ ಮೀರಿ ಜನರು ಬಂದಿದ್ದರು. ಬಿಗಿ ಭದ್ರತಾ ಕಾರಣ ನೀರನ್ನು ಸಹ ಮಾಧ್ಯಮದವರಿಗೆ ಕೊಡಲಾಗದ್ದಕ್ಕೆ ಕ್ಷಮೆಯಾಚಿಸಿದರು. ಪಕ್ಷದ ಅಭ್ಯರ್ಥಿಯೋರ್ವರು, ಅನ್ಯ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಕಣಕ್ಕೆ ನಿಂತಿರುವ ಗೆಳೆಯನ ಗೆಲುವಿಗೆ ಯತ್ನಿಸಿದ ಸುದ್ದಿ ಇದೆಯಲ್ಲಾ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಜಿಲ್ಲಾಧ್ಯಕ್ಷರು, ಈ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು. ಕಾರವಾರ ಅಭ್ಯರ್ಥಿ ವಿರುದ್ಧ ಪಕ್ಷೇತರನನ್ನು ನಿಲ್ಲಿಸಿದ ಸಂಗತಿಗೂ ಸಹ ವೆಂಕಟೇಶ ನಾಯಕ್ ಉತ್ತರಿಸಿ, ಈ ಬಗ್ಗೆ ಮಾಹಿತಿ ಇಲ್ಲ. ಅಂಥದ್ದೇನು ಪಕ್ಷದಲ್ಲಿ ಇಲ್ಲ ಎಂದರು.

ಗಂಗಾಧರ ಭಟ್ ಉಚ್ಛಾಟನೆ: ಕಾರವಾರ ಕ್ಷೇತ್ರದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿರುವ ಗಂಗಾಧರ ಭಟ್ಟರನ್ನು ಪಕ್ಷದ ರಾಜ್ಯ ಶಿಸ್ತು ಸಮಿತಿ ಲಿಂಗರಾಜ್ ಅವರು ಉಚ್ಚಾಸಿದ್ದಾರೆ. ಹಾಗಾಗಿ ಗಂಗಾಧರ ಭಟ್ಟರಿಗೂ ಪಕ್ಷಕ್ಕೂ ಸಂಬಂಧ ಮುಗಿದಿದೆ ಎಂದರು. ಕಾಂಗ್ರೆಸ್ ಭಜರಂಗ ದಳ ನಿಷೇಧಕ್ಕೆ ಮುಂದಾಗುತ್ತದೆ ಎಂಬುದನ್ನು ಖಂಡಿಸುವೆ ಎಂದ ಅವರು ಹನುಮಂತ ನಮ್ಮ ದೇವರು. ದಕ್ಷಿಣ ಭಾರತದ ಮಹತ್ವದ ದೈವ. ಆತನ ಬಳಗ ಭಜರಂಗ ದಳವನ್ನು ನಿಷೇಧ ಮಾಡಲು ಮುಂದಾಗುವುದು ಸರಿಯಲ್ಲ. ಕಾಂಗ್ರೆಸ್ ಪಕ್ಷದ ನಿಲುವು ನಮಗೆ ಒಳ್ಳೆಯದೇ ಆಗಿದೆ. ಅದನ್ನು ಹನುಮ‌ ಭಕ್ತರು ಗಂಭೀರವಾಗಿ ತೆಗೆದುಕೊಳ್ಳಲಿದ್ದಾರೆಂದರು.

ಗೋ ಹತ್ಯೆ ನಿಷೇಧ ತೆಗೆದು ಹಾಕುವ ಲಕ್ಷಣ ಇದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಾವು ತಂದ ಕಾನೂನುಗಳು ರದ್ದಾಗಲಿ ಎಂದ ಅವರು ಇದಕ್ಕೆ ಜನ ಅವಕಾಶ ಕೊಡುವುದಿಲ್ಲ ಎಂದರು.

ಸಂಸದ ಸಿಂಗಾಪುರಕ್ಕೆ: ಪ್ರಧಾನಿ ನರೇಂದ್ರ ಮೋದಿ ಉತ್ತರ ಕನ್ನಡ  ಜಿಲ್ಲೆಗೆ  ಬಂದಾಗ ಸಂಸದ ಅನಂತ ಕುಮಾರ್ ಹೆಗಡೆ ಗೈರು ಹಾಜರಿ ಎಷ್ಟರ ಮಟ್ಟಿಗೆ ಸರಿ ಎಂದು ಪತ್ರಕರ್ತರು ಪ್ರಶ್ನಿಸಿದಾಗ , ಪ್ರಧಾನಿ ಕಾರ್ಯಕ್ರಮ ಇದೆ ಎಂದು ತಿಳಿಸಲು ಸಂಸದ ಅನಂತ ಕುಮಾರ್ ಹೆಗಡೆಗೆ ಪೋನ್ ಮಾಡಿದ್ದೆ. ಆಗ ಅವರು ಬರುತ್ತೇನೆ ಎಂದಿದ್ದರು. ನಂತರ ಮತ್ತೆ ಕರೆ ಮಾಡಿದಾಗ ಸಿಂಗಾಪುರ ಪ್ರವಾಸದಲ್ಲಿರುವುದಾಗಿ ಹೇಳಿದರು. ಪಕ್ಷದ ಚಟುವಟಿಕೆ, ಹಾಗೂ ಅಭ್ಯರ್ಥಿಗಳ ಪ್ರಚಾರಕ್ಕೆ ಸಹ ಕೆನರಾ‌ ಸಂಸದ ಅನಂತ ಕುಮಾರ್ ಹೆಗಡೆ ಬರುತ್ತಿಲ್ಲವಲ್ಲ ಎಂಬ ಪ್ರಶ್ನೆಗೆ ಜಿಲ್ಲಾ ಬಿಜೆಪಿ ಅಧ್ಯಕ್ಷರು ಮೌನವಾದರು. ಪಕ್ಷದ ಹಿರಿಯರು ಎಲ್ಲವನ್ನೂ ಗಮನಿಸುತ್ತಿದ್ದಾರೆ ಎಂದಷ್ಟೇ ಉತ್ತರಿಸಿದರು.

ಬಿಜೆಪಿ ಬಾಗಿಲು ತಟ್ಟಿದ್ದ ಅಸ್ನೋಟಿಕರ್; ಬಿಜೆಪಿ ಬಾಗಿಲು ತಟ್ಟುತ್ತಿದ್ದ ಹಾಗೂ ಈ ಸಲ ಬಿಜೆಪಿ ಟಿಕೆಟ್ ಗೆ ಯತ್ನಿಸಿದ್ದ ಮಾಜಿ ಸಚಿವ ಆನಂದ ಅಸ್ನೋಟಿಕರ್ ಇವತ್ತಿನಿಂದ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕೆ ನಿಂತಿದ್ದರಲ್ಲಾ ಎಂಬ ಪ್ರಶ್ನೆಗೆ ಅವರು ಏನು ಅಂತ ಪಕ್ಷಕ್ಕೆ ಗೊತ್ತಿದೆ. ನಮ್ಮಲ್ಲಿ ಒಮ್ಮೆ ಹೊರ ಹಾಕಿದವರನ್ನು ಒಳಗೆ ತಗೋಳೋದು ಕಷ್ಟ. ಅವರು ಪಕ್ಷಾಂತರಿ. ಅವರ ಹಿನ್ನೆಲೆ ಕಾಂಗ್ರೆಸ್. ಹಾಗಾಗಿ ಅವರ ಬಗ್ಗೆ ನಾವು ಅಷ್ಟು ಯೋಚಿಸುವುದಿಲ್ಲ ಎಂದರು. ಅವರು ಯಾರ ಪ್ರಚಾರ ಮಾಡಿದರೂ ನಮಗೆ ಅಭ್ಯಂತರ ಇಲ್ಲ.ನಮ್ಮ ಅಭ್ಯರ್ಥಿ ಕಾರವಾರದಲ್ಲಿ 25 ಸಾವಿರ ಮತಗಳ  ಅಂತರದಲ್ಲಿ ಗೆಲ್ಲಲಿದ್ದಾರೆ ಎಂದರು‌ .

ಜಿಲ್ಲಾ ಬಿಜೆಪಿ ಮಾಧ್ಯಮ ವಕ್ತಾರ ನಾಗರಾಜ ನಾಯಕ, ಮನೋಜ್ ಭಟ್, ರೇಶ್ಮಾ ಮಾಳ್ಸೇಕರ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

3

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-sirsi

Sirsi: ಯಾರನ್ನೂ ಯಾವತ್ತೂ ಪ್ಲೀಸ್ ಮಾಡಬೇಡಿ, ಪ್ರೀತಿ ಮಾಡಿ ಸಾಕು: ಹುಕ್ಕೇರಿ ಶ್ರೀ

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

ಭಾರತ್‌ ಜೋಡೋದಿಂದ ದೇಶದ ಜನರ ಮನಸ್ಸು ಬೆಸೆದ ರಾಗಾ: ಡಿಕೆಶಿ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ ಅಳಲು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.