ಗ್ರಾಪಂ ಚುನಾವಣೆಗೆ ಕಾಂಗ್ರೆಸ್ ತಯಾರಿ
Team Udayavani, Oct 9, 2020, 6:17 PM IST
ಹಳಿಯಾಳ: ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ ಅಧಿಕಾರ ವಹಿಸಿಕೊಂಡ ಬಳಿಕ ಪಕ್ಷದ ಸಂಘಟನೆಯಲ್ಲಿ ಅಮೂಲಾಗ್ರ ಬದಲಾವಣೆ ಆಗುತ್ತಿರುವ ಕಾರಣ ಶಿವಕುಮಾರ ಅವರ ಆದೇಶದಂತೆ ಜಿಲ್ಲೆಯಾದ್ಯಂತ ಕಾಂಗ್ರೆಸ್ ಪಕ್ಷ ಬಲವರ್ಧನೆಗೆ ಸಭೆ ನಡೆಸಲಾಗುತ್ತಿದೆ. ಅಲ್ಲದೇ ಗ್ರಾಪಂ ಚುನಾವಣೆಗೆ ಪಕ್ಷ ಸಜ್ಜಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಭಿಮಣ್ಣಾ ನಾಯ್ಕ ಹೇಳಿದರು.
ಪಟ್ಟಣದ ಲಕ್ಷ್ಮಣ ಪ್ಯಾಲೇಸ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕರಾಗಿರುವ ಆರ್.ವಿ. ದೇಶಪಾಂಡೆ, ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಘೋಕ್ಲೃಕರ ಆದಿಯಾಗಿ ಹಲವು ಹಿರಿಯ ನಾಯಕರ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಭದ್ರವಿದೆ. ಹೀಗಾಗಿ ಕೆಪಿಸಿಸಿಯಿಂದ ಹೊಸದಾಗಿ ಬೂತ್ ಮಟ್ಟದ ಎಜೆಂಟ್ (ಬಿಎಲ್ಎ)ಗಳ ನೇಮಕಾತಿ ಪರಿಶೀಲನೆ ಹಿನ್ನೆಲೆ ಬಿಎಲ್ಎಗಳ ಜಿಲ್ಲಾ ಉಸ್ತುವಾರಿಯನ್ನಾಗಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಘೊಕ್ಲೃಕರ ಅವರನ್ನು ನೇಮಿಸಿ ಪಕ್ಷದ ಹೈಕಮಾಂಡ್ ಆದೇಶ ಹೊರಡಿಸಿದೆ ಎಂದು ತಿಳಿಸಿದರು.
ಬಿಎಲ್ಎಗಳು ಚುನಾವಣೆಗೆ ಮಾತ್ರ ಸೀಮಿತವಾಗದೆ ಪ್ರತಿಯೊಬ್ಬರನ್ನು ಮತದಾರರ ಪಟ್ಟಿಗೆ ಸೇರಿಸುವ ಕೆಲಸ ಮಾಡಬೇಕು ಎಂದು ಕರೆ ನೀಡಿದ ಭೀಮಣ್ಣಾ, ಕಾಂಗ್ರೆಸ್ನಿಂದ ಯುವಕರ ಸದಸ್ಯತ್ವ ಅಭಿಯಾನ ನಡೆದಿದ್ದು, ಕಾಂಗ್ರೆಸ್ ಪಕ್ಷ ಯುವಕರಿಗೆ ಹೆಚ್ಚಿನ ಒತ್ತು ನೀಡುತ್ತಿದೆ. ಯುವಕರನ್ನು ಸೆಳೆಯುವ ಕೆಲಸ ಮಾಡುತ್ತಿದ್ದು, ಯುವ ಸಮೂಹ ಕೇವಲ ಬಿಜೆಪಿಯಲ್ಲಿ ಮಾತ್ರವಲ್ಲ ಕಾಂಗ್ರೆಸ್ನಲ್ಲೂ ಅಪಾರ ಪ್ರಮಾಣದಲ್ಲಿದೆ ಎಂದರು.
ಎಪಿಎಂಸಿ, ಕೃಷಿ, ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ವಿರೋಧಿಸಿ ಜಿಲ್ಲೆಯಲ್ಲಿ ಅತಿ ಹೆಚ್ಚು ಸಹಿ ಸಂಗ್ರಹ ಮಾಡಲಾಗಿದೆ ಎಂದ ಅವರು, ಚುನಾವಣೆ, ಟಿಕೆಟ್ಗಾಗಿ ಮಾತ್ರ ಪಕ್ಷಕ್ಕೆ ಸೇರದೆ ಸಮಾಜ ಮತ್ತು ದೇಶ ಸೇವೆಗಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರುವಂತೆ ಕರೆ ನೀಡಿದರು.
ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಘೋಕ್ಲೃಕರ ಮಾತನಾಡಿ, ಬಿಜೆಪಿಯ ಆಮಿಷಗಳಿಗೆ ಬಲಿಯಾಗಿದ್ದ ರೈತ ಹಾಗೂ ಯುವ ಸಮೂಹಕ್ಕೆ ಈಗ ಬಿಜೆಪಿಯ ಬಣ್ಣ ತಿಳಿಯುತ್ತಿದೆ. ಉದ್ಯೋಗ ಸೃಷ್ಟಿ ಇಲ್ಲದೇ ಕೋಟ್ಯಂತರ ಯುವಕರು ನಿರುದ್ಯೋಗಿಗಳಾಗಿದ್ದಾರೆ ಎಂದರು.
ಮುಖಂಡರಾದ ಎಸ್.ಕೆ. ಭಾಗ್ವತ, ರಮೇಶ ದುಬಾಶೆ, ಶ್ರೀನಿವಾಸ ಘೋಕ್ಲೃಕರ್, ರವಿ ತೊರಣಗಟ್ಟಿ, ಬಿಡಿ ಚೌಗಲೆ, ಶಿವಪುತ್ರಪ್ಪಾ ನುಚ್ಚಂಬ್ಲಿ, ಸಿಎಫ್ ನಾಯ್ಕ, ಸತ್ಯಜೀತ ಗಿರಿ, ಮಾಲಾ ಬ್ರಗಾಂಜಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shirur landslide; ರಾ.ಹೆದ್ದಾರಿ ಸಂಚಾರಕ್ಕೆ ಮೂರ್ನಾಲ್ಕು ದಿನಗಳಲ್ಲಿ ಗ್ರೀನ್ ಸಿಗ್ನಲ್ ?
Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ
Shiruru hill collapse; 10 ದಿನದಿಂದ ಇಲ್ಲೇ ಇದ್ದೇನೆ : ಟೀಕೆಗಳಿಗೆ ಶಾಸಕ ಸೈಲ್ ಬೇಸರ
Shiruru hill collapse; ಮಣ್ಣು ತೆಗೆಯುವ ಕಾರ್ಯಾಚರಣೆ ವೇಳೆ ಸಿಕ್ಕ ಹೋಟೆಲ್ ಅವಶೇಷಗಳು
Shiruru hill collapse; ನದಿಯ ನಾಲ್ಕು ಕಡೆ ಅವಶೇಷಗಳು ಬೆಳಕಿಗೆ:ಇಂದ್ರಬಾಲನ್ ನಂಬಿಯಾರ್
MUST WATCH
ಹೊಸ ಸೇರ್ಪಡೆ
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.