ಕಾಂಗ್ರೆಸ್‌ ಮುಳುಗುತ್ತಿರುವ ಹಡಗು; ಜಗದೀಶ ಶೆಟ್ಟರ

ಹೊರಟ್ಟಿ ಶಿಕ್ಷಕರ ಮೆಚ್ಚಿನ ಪ್ರತಿನಿಧಿಯಾಗಿ 42 ವರ್ಷ ಉತ್ತಮ ಕಾರ್ಯ ಮಾಡಿದ್ದಾರೆ.

Team Udayavani, Jun 1, 2022, 6:20 PM IST

ಕಾಂಗ್ರೆಸ್‌ ಮುಳುಗುತ್ತಿರುವ ಹಡಗು; ಜಗದೀಶ ಶೆಟ್ಟರ

ಅಂಕೋಲಾ: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ತನ್ನ ಆಂತರಿಕ ಕಚ್ಚಾಟದಿಂದ ಅಸ್ತಿತ್ವ ಕಳೆದುಕೊಂಡು ಈಗ ಮುಳುಗುತ್ತಿರುವ ಹಡಗು ಆಗಿ ಬಿಟ್ಟಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.

ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಪರ ಅಂಕೋಲಾದ ನಾಡವರ ಸಭಾಭವನದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ನಾಯಕರು ಅಲ್ಪಸಂಖ್ಯಾತರ ಮತ ಓಲೈಕೆಗಾಗಿ ಆರ್‌ಎಸ್‌ಎಸ್‌ ವಿರುದ್ಧ ಅಸಂಬದ್ಧ ಮಾತನಾಡುವ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುವ ಹಗಲುಗನಸು ಕಾಣುತ್ತಿದ್ದಾರೆ.

ಸಿದ್ದರಾಮಯ್ಯ-ಡಿ.ಕೆ ಶಿವಕುಮಾರ ತದ್ವಿರುದ್ಧ ದಿಕ್ಕಿನಲ್ಲಿ ಸಾಗುತ್ತಿದ್ದಾರೆ. ಹೀಗಾಗಿ ಕೇಂದ್ರದಲ್ಲಿ, ರಾಜ್ಯದಲ್ಲೂ ಸಮರ್ಥ ನಾಯಕರಿಲ್ಲದೆ ಕಾಂಗ್ರೆಸ್‌ ನೆಲಕಚ್ಚಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಜೆಡಿಎಸ್‌ ಅಸ್ತಿತ್ವದಲ್ಲೇ ಇಲ್ಲ ಎನ್ನುವಂತಿದೆ ಎಂದರು.

ಬಸವರಾಜ ಹೊರಟ್ಟಿಯವರು ಹೋರಾಟದ ನೆಲೆಯಿಂದ ಬಂದವರು. ಶಿಕ್ಷಕರ ಕಷ್ಟನಷ್ಟಗಳನ್ನು ಹತ್ತಿರದಿಂದ ಬಲ್ಲವರು. ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿದ ಏಕೈಕ ನಾಯಕರಾಗಿದ್ದಾರೆ. ಅವರು ಕೇವಲ ಗೆಲ್ಲುವುದಷ್ಟೇ ಅಲ್ಲ ಶೇ.90ಕ್ಕಿಂತ ಹೆಚ್ಚು ಮತ ಪಡೆದು ದಾಖಲೆ ನಿರ್ಮಿಸಲಿದ್ದಾರೆ. ಉತ್ತರ ಕನ್ನಡ ಪ್ರಜ್ಞಾವಂತರ ಜಿಲ್ಲೆ ಎನಿಸಿದೆ. ಹೀಗಾಗಿ ಒಂದೇ ಒಂದು ಮತ ಕೂಡ ವ್ಯರ್ಥವಾಗಬಾರದು ಎಂದರು.

ವಿಧಾನ ಪರಿಷತ್‌ ಪಶ್ಚಿಮ ಪದವೀಧರ ಕ್ಷೇತ್ರದ ಪ್ರತಿನಿಧಿ ಎಸ್‌.ವಿ. ಸಂಕನೂರ ಮಾತನಾಡಿ, ಹೊರಟ್ಟಿಯವರು ಯಾವುದೇ ಪಕ್ಷದಲ್ಲಿದ್ದರೂ ಉತ್ತರ ಕನ್ನಡದ ಜನ ಅತೀ ಹೆಚ್ಚು ಮತ ನೀಡಿ ಗೆಲ್ಲಿಸಿದ್ದಾರೆ. ಈಗ ಎಂಟನೇ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಅತೀ ಹೆಚ್ಚು ಮತಗಳಿಸಿ ಹೊಸ ದಾಖಲೆ ನಿರ್ಮಿಸಲಿದ್ದಾರೆ ಎಂದರು.

ಕಾರ್ಮಿಕ ಸಚಿವ ಶಿವರಾಮ ಹೆಬ್ಟಾರ ಮಾತನಾಡಿ, ಈ ಹಿಂದೆ ಚುನಾವಣೆಗಳಲ್ಲಿ ಹೊರಟ್ಟಿ ವಿರುದ್ಧ ಬಿಜೆಪಿ ಸ್ಪರ್ಧಿಸುತ್ತಿತ್ತು. ಆದರೆ ಈಗ ಹೊರಟ್ಟಿಯವರೇ ಬಿಜೆಪಿಯಿಂದ ಸ್ಪರ್ಧಿಸುತ್ತಿರುವುದರಿಂದ ಅವರಿಗೆ ಪ್ರತಿಸ್ಪರ್ಧಿ ಇಲ್ಲವೆಂದೇ ಹೇಳಬಹುದು ಎಂದರು. ಶಾಸಕಿ ರೂಪಾಲಿ ನಾಯ್ಕ ಮಾತನಾಡಿ, ಬಸವರಾಜ ಹೊರಟ್ಟಿ ಶಿಕ್ಷಕರ ಮೆಚ್ಚಿನ ಪ್ರತಿನಿಧಿಯಾಗಿ 42 ವರ್ಷ ಉತ್ತಮ ಕಾರ್ಯ ಮಾಡಿದ್ದಾರೆ. ಹೀಗಾಗಿ ಅವರ ಗೆಲುವು ಖಚಿತ ಎಂದರು.

ವಿಧಾನ ಪರಿಷತ್‌ ಸದಸ್ಯ ಗಣಪತಿ ಉಳ್ವೆಕರ, ಧಾರವಾಡ ಜಿಲ್ಲಾ ಬಿಜೆಪಿ ಮಾಧ್ಯಮ ಪ್ರಭಾರಿ ಲಿಂಗರಾಜ ಪಾಟೀಲ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸದಸ್ಯ ರಾಜು ಖರವೆ, ಬಿಜೆಪಿ ಒಬಿಸಿ ರಾಜ್ಯ ಕಾರ್ಯಕಾರಿಣಿ ಸದಸ್ಯ ರಾಜೇಂದ್ರ ನಾಯ್ಕ, ಬಿಜೆಪಿ ಅಂಕೋಲಾ ಮಂಡಲ ಅಧ್ಯಕ್ಷ ಸಂಜಯ ನಾಯ್ಕ ಇದ್ದರು. ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ ಸ್ವಾಗತಿಸಿದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ತೆಂಗಿನಕಾಯಿ ಪ್ರಾಸ್ತಾವಿಕ ಮಾತನಾಡಿದರು. ಜಿಲ್ಲಾ ಬಿಜೆಪಿ ಮಾಧ್ಯಮ ವಕ್ತಾರ ನಾಗರಾಜ ನಾಯಕ ವಂದಿಸಿದರು.

ಏಳು ಬಾರಿ ಗೆಲುವು ಸಾಧಿಸಿದ್ದು ದೇಶದಲ್ಲಿ ಮಾತ್ರ ಅಲ್ಲ, ಇಡೀ ಏಷ್ಯಾ ಖಂಡದಲ್ಲಿ ಸಾಧನೆ. ಸಾಧನೆ ಪಟ್ಟಿ ಇಟ್ಟು ಗೆಲುವು ಸಾಧಿಸಿದವರು ಹೊರಟ್ಟಿ ಅವರು.
ಎಸ್‌.ವಿ. ಸಂಕನೂರು, ವಿ.ಪ ಸದಸ್ಯರು 

ಶಿಕ್ಷಕರ ಸಮಸ್ಯೆ ಬಾಕಿ ಉಳಿದದ್ದೂ ಇದೆ. ಅದನ್ನೂ ಮುಂದೆ ಈಡೇರಿಸುತ್ತೇವೆ.
ಬಸವರಾಜ್‌ ಹೊರಟ್ಟಿ, ಅಭ್ಯರ್ಥಿ

ಶಿಕ್ಷಣ ಕ್ಷೇತ್ರದಲ್ಲಿ ಹೊರಟ್ಟಿ ಅವರಿಗೆ ಇರುವ ಅನುಭವ ಬೇರೆಯವರಿಗೆ ಇರಲು ಸಾಧ್ಯವಿಲ್ಲ. ಹೊರಟ್ಟಿ ಎದುರು ಬಿಜೆಪಿ ಆಗಿತ್ತು. ಈ ಬಾರಿ ಬಿಜೆಪಿಗೆ ಹೊರಟ್ಟಿ ಪ್ಲಸ್‌ ಆಗಿದಾರೆ.
ಶಿವರಾಮ ಹೆಬ್ಟಾರ, ಸಚಿವ

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.