ಸಂವಿಧಾನ ಬದಲಿಸುವುದಿಲ್ಲ,ಭ್ರಷ್ಟಾಚಾರ ನಿಗ್ರಹ ಚುನಾವಣೆಯ ವಿಷಯ:ಗಡ್ಕರಿ


Team Udayavani, May 1, 2018, 4:28 PM IST

30kwr02b.jpg

ಕಾರವಾರ: ಜನರ ಭವಿಷ್ಯ ನಿರ್ಧರಿಸುವ ಚುನಾವಣೆ ಇದಾಗಿದೆ. ಭ್ರಷ್ಟಾಚಾರ ನಿಗ್ರಹ ಚುನಾವಣೆಯ ವಿಷಯವಾಗಿದೆ ಎಂದ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಹೇಳಿದರು.

ಕಾರವಾರದ ಮಿತ್ರ ಸಮಾಜ ಮೈದಾನದಲ್ಲಿ ಸೋಮವಾರ ಸಂಜೆ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ಬಿಜೆಪಿ ಜಾತಿವಾದದಲ್ಲಿ, ಮತೀಯವಾದದಲ್ಲಿ ನಂಬಿಕೆ ಇಟ್ಟಿಲ್ಲ. ನಾವು ಸಂವಿಧಾನ ಬದಲಿಸುವುದಿಲ್ಲ ಎಂದರು.

ಮನುಷ್ಯ ಜಾತಿಯಿಂದ, ಧರ್ಮದಿಂದ ದೊಡ್ಡವನಾಗುವುದಿಲ್ಲ. ಗುಣದಿಂದ ವ್ಯಕ್ತಿ ದೊಡ್ಡವನಾಗುತ್ತಾನೆ, ಅಭಿವೃದ್ಧಿ ರಾಜಕಾರಣದಲ್ಲಿ ಕೇಂದ್ರ ಸರ್ಕಾರ ನಂಬಿಕೆ ಇಟ್ಟಿದೆ. ಜಾತೀಯತೆ ಮತ್ತು ಅಸ್ಪೃಶ್ಯತೆ ಎರಡೂ ತಪ್ಪು. ಎಲ್ಲರಿಗೂ ನ್ಯಾಯ ಮತ್ತು ಸಮಾನ ಅವಕಾಶಗಳು ಸಿಗಬೇಕು. ಎಲ್ಲ ಧರ್ಮಗಳಲ್ಲಿನ ಜನರಲ್ಲಿ ಹಸಿವು ಇದೆ. ಇದನ್ನು ಹೋಗಲಾಡಿಸಲು ಕೇಂದ್ರ ಸಬ್‌ಕಾ ಸಾಥ್‌ ಸಬಕಾ ವಿಕಾಸ್‌ ತತ್ವದಲ್ಲಿ ನಂಬಿಕೆ ಇಟ್ಟಿದೆ ಎಂದು ಪ್ರತಿಪಾದಿಸಿದರು. ರಾಜ್ಯ ಸರ್ಕಾರ ಭ್ರಷ್ಟವಾಗಿದೆ: ರಾಜ್ಯದಲ್ಲಿ ಭ್ರಷ್ಟ ಸರ್ಕಾರವಿದೆ. ಹಾಗಾಗಿ ಅದನ್ನು ಬದಲಿಸಬೇಕಿದೆ ಎಂದ ಸಚಿವ ನಿತಿನ್‌ ಗಡ್ಕರಿ ನೆಹರೂ ಕುಟುಂಬದ ವಿರುದ್ಧ ವಾಗ್ಧಾಳಿ ನಡೆಸಿದರು. ನೆಹರೂ ಕಾಲದಿಂದ ದೇಶದ ಬಡತನ, ಹಸಿವು ನಿವಾರಣೆಯ ಘೋಷಣೆಯನ್ನು ಮಾಡುತ್ತಾ ಬರಲಾಯಿತು. ಆದರೆ ಇಂದಿರಾ ಗಾಂಧಿ  ಹಸಿವು ಮುಕ್ತ ಭಾರತವನ್ನು ರೂಪಿಸಲಿಲ್ಲ
ಎಂದರು .

ನಾನು ಸುಳ್ಳು ಮಾತಾಡುವುದಿಲ್ಲ: ನಾನು ಸುಳ್ಳು ಮಾತಾಡುವುದಿಲ್ಲ. ನನಗೆ ಅಭಿವೃದ್ಧಿಯಲ್ಲಿ ನಂಬಿಕೆ ಇದೆ. ದಿನ ನಿತ್ಯ ದೇಶದಲ್ಲಿ 18 ಕಿ.ಮೀ. ಉದ್ದದ ರಸ್ತೆ ನಿರ್ಮಾಣವಾಗುತ್ತಿದೆ. ಬೃಹತ್‌ ಸೇತುವೆಗಳು, ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆದಿವೆ. ದೆಹಲಿ ಮುಂಬಯಿ ನಡುವೆ ಹೆದ್ದಾರಿ ಕಾಮಗಾರಿ ನಡೆದಿದೆ. ಬೆಂಗಳೂರು ಮತ್ತು ಹೈದರಾಬಾದ್‌ ನಡುವೆ ಹೆದ್ದಾರಿ ಕಾಮಗಾರಿ ಅಗಲೀಕರಣ ಸದ್ಯ ಪ್ರಾರಂಭವಾಗಲಿದೆ ಎಂದರು.

ಬೇಲೇಕೇರಿ ಬಂದರು ಅಭಿವೃದ್ಧಿ: ಬೇಲೇಕೇರಿ ವಾಣಿಜ್ಯ ಬಂದರು ಅಭಿವೃದ್ಧಿಗೆ 5 ಸಾವಿರ ಕೋಟಿ ರೂ. ಮೀಸಲಿಟ್ಟಿದ್ದೇವೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ನವರಿಗೆ ಈ ಸಂಬಂಧ ಪತ್ರ ಬರೆದು, ಮಾತುಕತೆ ಸಹ ಆಡಿದ್ದೇನೆ. ಆದರೆ ಸರ್ಕಾರದಲ್ಲಿ ಇರುವವರು ಕ್ರಿಯಾಶೀಲರಾಗಿರಬೇಕು. ಅಭಿವೃದ್ಧಿಗೆ ಆಸಕ್ತಿ ತೋರಬೇಕು. ಮೀನುಗಾರರಿಗೆ ತೊಂದರೆಯಾಗದಂತೆ ಬಂದರು ಅಭಿವೃದ್ಧಿ ಮಾಡುತ್ತೇವೆ. ಕಾರವಾರ ಬಂದರು ಅಭಿವೃದ್ಧಿಗೆ 2000 ಕೋಟಿ ಹಣವನ್ನು ಸಾಗರ ಮಾಲಾ ಯೋಜನೆಯಲ್ಲಿ ಮೀಸಲಿಟ್ಟಿದ್ದೇವೆ. ನಮ್ಮದೇ ಸರ್ಕಾರ ಬಂದರೆ ಈ ಯೋಜನೆಗಳಿಗೆ ಚಾಲನೆ ಸಿಗಲಿದೆ. ಜಲ ಸಾರಿಗೆ ಮೂಲಕ ಕಾರವಾರ ಗೋವಾ ಮಧ್ಯೆ ಜಲ ಮತ್ತು ಭೂಮಿ ಮೇಲೆ ಸಂಚರಿಸುವ ಬಸ್‌ ಓಡಾಡಲಿದೆ ಎಂದರು.

ನದಿಗಳ ಜೋಡಣೆ

 ಗಂಗಾ -ಕಾವೇರಿ, ಗೋದಾವರಿ -ಕೃಷ್ಣ ನದಿಗಳ ಜೋಡಣೆ ಸಿದ್ಧ. ಇದಕ್ಕಾಗಿ 8 ಲಕ್ಷ ಕೋಟಿ ರೂ.ಗಳ ಯೋಜನೆ ಸಿದ್ಧವಿದೆ. ಈ ನದಿಗಳ ಜೋಡಣೆಯಾದರೆ ನೀರಾವರಿಗೆ ಮತ್ತು ಕುಡಿವ ನೀರಿನ ಬವಣೆ ನೀಗಲಿದೆ ಎಂದು ನಿತಿನ್‌ ಗಡ್ಕರಿ ಅಭಿಪ್ರಾಯಪಟ್ಟರು.

ಬಿಜೆಪಿ ಅಭ್ಯರ್ಥಿ ರೂಪಾಲಿ ನಾಯ್ಕ, ಜಿಲ್ಲಾಧ್ಯಕ್ಷ ಕೆ.ಜಿ. ನಾಯ್ಕ. ರವಿ ಹೆಗಡೆ ಹೂವಿನಮನೆ, ಬಿಜೆಪಿ
ಜಿಲ್ಲಾ ವಕ್ತಾರ ರಾಜೇಶ್‌ ನಾಯ್ಕ, ಮಾಜಿ ಶಾಸಕ ಗಂಗಾಧರ ಭಟ್‌, ಉಳ್ವೆಕರ್‌, ಮನೋಜ್‌
ಭಟ್ಟ,ಭಾಸ್ಕರ್‌ ನಾರ್ವೇಕರ್‌ ಇದ್ದರು.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.