ಸಂವಿಧಾನ ಓದು ಅಭಿಯಾನದಡಿ ಮನೆ-ಮನೆಗೂ ಸಂವಿಧಾನ ಕಾರ್ಯಕ್ರಮ


Team Udayavani, Oct 17, 2021, 6:10 PM IST

ಸಂವಿಧಾನ ಓದು ಅಭಿಯಾನದಡಿ ಮನೆ-ಮನೆಗೂ ಸಂವಿಧಾನ ಕಾರ್ಯಕ್ರಮ

ದಾಂಡೇಲಿ: ಸಂವಿಧಾನ ಎಂಬುವುದು ಜೀವನದ ಪ್ರಮುಖ ಘಟ್ಟ. ಸಂವಿಧಾನವನ್ನು ಓದಿ ಅರ್ಥೈಸಿಕೊಳ್ಳುವುದು ಹಾಗೂ ಸಂವಿಧಾನದ ಆಶಯಗಳನ್ನು ಜೀವನದಲ್ಲಿ ಆಳವಡಿಸಿಕೊಳ್ಳಬೇಕಾಗಿರುವುದು ಈ ದೇಶದ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ಈ ದೇಶದ ಮಹಾನ್ ಗ್ರಂಥವಾದ ಸಂವಿಧಾನವನ್ನು ಎಲ್ಲರು ಓದುವುದರ ಜೊತೆಗೆ ಅದರ ಮೌಲ್ಯಗಳ ಅನುಷ್ಟಾನದ ದಿಸೆಯಿಂದ ಸಂವಿಧಾನ ಓದು ಅಭಿಯಾನ ಕಾರ್ಯಕ್ರಮ ಪರಿಣಾಮಕಾರಿಯಾಗಿದೆ ಎಂದು ರಾಜ್ಯ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿಗಳಾದ ಎಚ್.ಎನ್.ನಾಗಮೋಹನ್ ದಾಸ್ ಅವರು ಹೇಳಿದರು.

ಅವರು ಭಾನುವಾರ ನಗರದ ಮಾರುತಿ ನಗರದಲ್ಲಿ ಸಂವಿಧಾನ ಪೀಠಿಕೆಯ ಫಲಕ ಅನಾವರಣದೊಂದಿಗೆ ಡಿ.ಸ್ಯಾಮಸನ್ ಕುಟುಂಬದ ಸಾಮರಸ್ಯ ಹೊಸ ಮನೆಗೆ ಹೊಸ ಹೆಜ್ಜೆ ಗೃಹಪ್ರವೇಶೋತ್ಸವ ನಿಮಿತ್ತ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಆಯೋಜಿಸಿದ ಸಂವಿಧಾನ ಓದು ಅಭಿಯಾನದಡಿ ಮನೆ-ಮನೆಗೂ ಸಂವಿಧಾನ ಎಂಬ ವಿನೂತನವಾದ ಅರ್ಥಪೂರ್ಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಈ ದೇಶದ ಆಡಳಿತ ವ್ಯವಸ್ಥೆ ಸಂವಿಧಾನ ಮೇಲೆ ಅವಲಂಭಿತವಾಗಿದೆ. ನಮ್ಮ ಸಂವಿಧಾನ ಭಾತೃತ್ವ, ಸಹೋದರತೆ, ಸಮಾನತೆಯ ನೆಲೆಯಿಂದ ಕೂಡಿದ್ದು, ಎಲ್ಲರಿಗೂ ಬದುಕಲು ಅವಕಾಶ ಕೊಟ್ಟಿದೆ. ಇಂತಹ ಸಂವಿಧಾನ ಓದು ಅಭಿಯಾನದ ಮೂಲಕ ರಾಜ್ಯದಲ್ಲೆ ಮೊದಲ ಬಾರಿಗೆ ಮನೆ-ಮನೆಗೂ ಸಂವಿಧಾನ ಕಾರ್ಯಕ್ರಮವನ್ನು ಇಲ್ಲಿ ಆಯೋಜಿಸಲಾಗಿರುವುದು ಸಂತಸ ತಂದಿದೆ ಎಂದು ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಮುಖ್ಯ ಅತಿಥಿಗಳಾಗಿ ಬೆಳಗಾವಿಯ ಕರ್ನಾಟಕ ಆಡಳಿತಾತ್ಮಕ ನ್ಯಾಯಾಧೀಕರಣದ ನ್ಯಾಯಾಧೀಶರಾದ ಟಿ.ನಾರಾಯಣ ಸ್ವಾಮಿಯವರು ಮಾತನಾಡಿ ಸಂವಿಧಾನ ಪೀಠಿಕೆಯ ಫಲಕವನ್ನು ಅನಾವರಣಗೊಳಸುವ ಮೂಲಕ ಗೃಹಪ್ರವೇಶ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಸ್ಮರಣೀಯವಾಗಿದೆ. ಸಂವಿಧಾನ ಮೌಲ್ಯಗಳನ್ನು ಜೀವನದಲ್ಲಿ ಆಳವಡಿಸಿ ಸರ್ವ ಸಮಾನತೆಯ, ಪರಸ್ಪರ ಸೌಹಾರ್ಧತೆಯ ಬದುಕು ಕಟ್ಟಿಕೊಳ್ಳಲು ಇಂಥಹ ಕಾರ್ಯಕ್ರಮಗಳು ಸ್ಪೂರ್ತಿದಾಯಕ ಎಂದರು.

ರಾಜ್ಯ ವಕೀಲರ ಪರಿಷತ್ತಿನ ಸದಸ್ಯರಾದ ಕೆ.ಕೋಟೇಶ್ವರರಾವ್ ಅವರು ಸಂವಿಧಾನ ಫೀಠಿಕೆಯನ್ನು ಫಲಕವನ್ನಾಗಿಸಿ, ಸ್ಮರಣಿಕೆಯನ್ನಾಗಿ ಕೊಡುವಂತಹ ಕಾರ್ಯವನ್ನು ಈ ಮೂಲಕವಾಗಿ ಮುಂದುವರಿಸಿಕೊಂಡು ಹೋಗಬೇಕು. ಮನೆ ಮನೆಗೂ ಸಂವಿಧಾನ ಕಾರ್ಯಕ್ರಮದ ಮೂಲಕ ನಮ್ಮ ದೇಶದ ಸಂವಿಧಾನ ಪ್ರತಿಯೊಂದು ಮನೆ ಹಾಗೂ ಮನಸ್ಸುಗಳನ್ನು ತಲುಪುವಂತಾಗಲೆಂದು ಕರೆ ನೀಡಿದರು.

ಸಹಯಾನ,ಕೆರೆಕೋಣದ ಯಮುನಾ ಗಾಂವಕರ ಅವರು ವಿಠ್ಠಲ ಭಂಡಾರಿಯವರ ಆಶಯವನ್ನು ಮುಂದಿಟ್ಟುಕೊಂಡು, ಅವರ ಕಾರ್ಯವನ್ನು ಮುಂದುವರಿಸುವ ಮಹತ್ವದ ಸಂಕಲ್ಪತೊಟ್ಟು ನನ್ನನ್ನು ನಾನು ಅರ್ಪಿಸಿಕೊಂಡಿದ್ದೇವೆ. ವಿಠ್ಠಲ ಭಂಡಾರಿಯವರ ಚಳುವಳಿಗಳು, ಹೋರಾಟ ಹಾಗೂ ಬದುಕು ಬರಹಗಳನ್ನು ಸ್ಮರಿಸಿಕೊಂಡರು.

ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಲೇಖಕರು ಮತ್ತು ಮಿಮರ್ಶಕರಾದ ಡಾ.ಎಂ.ಜಿ.ಹೆಗಡೆಯವರು ದೇಶದಲ್ಲಿ ಹಲವಾರು ಜಾತಿ, ಧರ್ಮ, ಮತ, ಪಂಗಡಗಳಿದ್ದರೂ ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಸ್ವತಂತ್ರವಾಗಿ ಸಂತಸದಿಂದ ಬದುಕಲು ಸಂವಿಧಾನವೆ ಮೂಲ ಕಾರಣವಾಗಿದೆ ಎಂದರು.

ವೇದಿಕೆಯಲ್ಲಿ ತಹಶೀಲ್ದಾರ್ ಶೈಲೇಶ ಪರಮಾನಂದ, ನಗರ ಸಭೆಯ ಪೌರಾಯುಕ್ತರಾದ ಆರ್.ಎಸ್.ಪವಾರ್, ವಕೀಲರ ಸಂಘದ ಕಾರ್ಯದರ್ಶಿ ವಿಶ್ವನಾಥ ಲಕ್ಷ್ಯಟ್ಟಿ ಉಪಸ್ಥಿತರಿದ್ದರು.

ಅಗಲಿದ ದಿ. ವಿಠ್ಠಲ ಭಂಡಾರಿಯವರ ಆತ್ಮಕ್ಕೆ ಶಾಂತಿ ಕೋರಿ ಒಂದು ನಿಮಿಷ ಮೌನ ಪ್ರಾರ್ಥನೆ ಸಲ್ಲಿಸಲಾಯ್ತು. ಕಾರ್ಯಕ್ರಮದಲ್ಲಿ ಅತಿಥಿ ಗಣ್ಯರನ್ನು ನಾಗಪ್ಪ ಮೊಕಾಶಿ ಮತ್ತು ಡಿ.ಸ್ಯಾಮಸನ್ ಪರಿವಾರದವರು ಸ್ಮರಣಿಕೆ ನೀಡಿ ಗೌರವಿಸಿದರು. ಇದೇ ಸಂದರ್ಭದಲ್ಲಿ ವಿಶ್ರಾಂತ ನ್ಯಾಯಮೂರ್ತಿಗಳಾದ ಎಚ್.ಎನ್.ನಾಗಮೋಹನದಾಸ್, ಡಿ.ಸ್ಯಾಮಸನ್ ದಂಪತಿಗಳನ್ನು ಮತ್ತು ಪತ್ರಕರ್ತ ಬಿ.ಎನ್.ವಾಸರೆಯವರನ್ನು ವಿಜಯ ಸಂದೇಶ ಪತ್ರಿಕೆಯ ಸಂಪಾದಕರಾದ ಸುಮಂಗಲಾ ಅಂಗಡಿ ಹಾಗೂ ಚಂದ್ರಕಾಂತ ಅಂಗಡಿ ದಂಪತಿಗಳು ಸನ್ಮಾನಿಸಿದರು.

ಮಾನಸಾ.ಬಿ.ವಾಸರೆ ಪ್ರಾರ್ಥನೆ ಗೀತೆ ಹಾಡಿದರು. ರತ್ನದೀಪಾ.ಎಂ ಅವರು ಸಂವಿಧಾನ ಪೀಠಿಕೆಯನ್ನು ಓದಿದರು. ಪತ್ರಕರ್ತ ಬಿ.ಎನ್.ವಾಸರೆ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಡಿ.ಸ್ಯಾಸಮನ್ ವಂದಿಸಿದರು. ಸಂವಿಧಾನ ಓದು ಅಭಿಯಾನದ ಸದಸ್ಯರಾದ ಕೆ.ಎಚ್.ಪಾಟೀಲ ಅವರು ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.