ಮಂಗನ ಕಾಯಿಲೆ ನಿಯಂತ್ರಣಕ್ಕೆ ಸಹಕರಿಸಿ


Team Udayavani, Jan 21, 2020, 4:52 PM IST

uk-tdy-1

ಹೊನ್ನಾವರ: ಮಂಗನ ಕಾಯಿಲೆ ಮತ್ತೆ ಆರಂಭವಾಗುವ ಲಕ್ಷಣ ಕಾಣಿಸಿಕೊಂಡಿದ್ದು 2020ರ ಜನೆವರಿಯಲ್ಲಿ ಸಿದ್ಧಾಪುರ ಹೊನ್ನೇಪಟಕಿ ಬಳಿ 6 ಮಂಗಗಳು ಮೃತಪಟ್ಟಿದ್ದು ಒಂದಕ್ಕೆ ಕೆಎಫ್‌ಡಿ ತಗುಲಿದ್ದು ಕಂಡುಬಂದಿದೆ. ಜನಕ್ಕೆ ಈವರೆಗೆ ಬಾಧಿಸಿಲ್ಲ, ನಿರ್ಲಕ್ಷಿಸಿದರೆ ಪ್ರಾಣಕ್ಕೆ ಅಪಾಯ ತರುವ ಮಂಗನ ಕಾಯಿಲೆ ನಿಯಂತ್ರಿಸಲು ಜಿಲ್ಲಾ ಕೆಎಫ್‌ಡಿ ಘಟಕ ಸ್ಥಾನಿಕ ವೈದ್ಯಾಧಿಕಾರಿ ಡಾ| ಸತೀಶ ಶೇಟ್‌ ಹೇಳಿದ್ದಾರೆ.

ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ ಘಟಕದ ಸಹಕಾರದಲ್ಲಿ ಎಲ್ಲ ಸಿದ್ಧತೆ ಮಾಡಿಕೊಂಡಿದೆ. ಈವರೆಗೆ 1ಲಕ್ಷ ಡೋಸ್‌ ಸಿದ್ಧ ಮಾಡಿಕೊಂಡು ಇಷ್ಟರಲ್ಲಿ ಕೊಟ್ಟು ಮುಗಿಯಬೇಕಿತ್ತು. ಜನ ಆಸಕ್ತಿ ವಹಿಸದೆ, ಸಹಕಾರ ನೀಡದೇ ಇರುವುದರಿಂದ ಕೇವಲ 15,288 ಡೋಸ್‌ ಮಾತ್ರ ಕೊಡುವುದು ಸಾಧ್ಯವಾಗಿದೆ. ವಿಶ್ವ ಆರೋಗ್ಯ ಸಂಸ್ಥೆ ಸರ್ವೇಕ್ಷಣ ವೈದ್ಯಾಧಿಕಾರಿ ಡಾ| ಸತೀಶಚಂದ್ರ ಅವರು ಹೇಳಿದಂತೆ ಉಣ್ಣೆಗಳ ನಿಯಂತ್ರಣ ಮತ್ತು ಪೂರ್ಣ ಪ್ರಮಾಣದ ಲಸಿಕೆ ಪಡೆಯುವುದರಿಂದ ಮಂಗನ ಕಾಯಿಲೆ ನಿಯಂತ್ರಿಸುವುದು ಸಾಧ್ಯವಿದೆ. ಜಿಲ್ಲೆಯ ಹೊನ್ನಾವರ, ಕುಮಟಾ, ಶಿರಸಿ, ಸಿದ್ಧಾಪುರ, ಭಟ್ಕಳ, ಜೋಯಿಡಾ, ಯಲ್ಲಾಪುರ ತಾಲೂಕುಗಳ 20 ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಸಿಕೆಗಳನ್ನು ಇಡಲಾಗಿದ್ದು ರಜಾದಿನದ ಹೊರತು ಯಾವತ್ತು ಬೇಕಾದರೂ ಲಸಿಕೆ ಪಡೆಯಬಹುದು.

ಹೆಚ್ಚಿನ ಜನ ಬಂದರೆ ಯಾವುದೇ ಸ್ಥಳದಲ್ಲಿ ಲಸಿಕಾ ಶಿಬಿರ ನಡೆಸಲು ನಾವು ಸಿದ್ಧರಿದ್ದೇವೆ. ಈಗಾಗಲೇ ಹಳ್ಳಿಹಳ್ಳಿಗಳಲ್ಲಿ ಕಾಡಿಗೆ ಹೋಗುವವರಿಗೆ ಡಿಎಂಪಿ ತೈಲ ವಿತರಿಸಲಾಗಿದೆ. ಮಂಗಗಳು ಸತ್ತಲ್ಲಿ, ಉಣ್ಣಿಗಳು ಕಂಡಲ್ಲಿ ಸುಡುವ ವ್ಯವಸ್ಥೆ ಮಾಡಲಾಗಿದೆ. ಶಾಲೆ, ಕಾಲೇಜು ಸಹಿತ ಎಲ್ಲೆಡೆ ಲಸಿಕೆಯ ಮಾಹಿತಿ ನೀಡಿದ್ದು, ಧ್ವನಿವರ್ಧಕ, ಮಾಧ್ಯಮದಲ್ಲೂ ಪ್ರಚಾರ ಕೊಡಲಾಗಿದೆ. ಈ ವರ್ಷ 17 ರಕ್ತದ ಸ್ಯಾಂಪಲ್‌ ಗಳನ್ನು ಸಂಗ್ರಹಿಸಿದ್ದು 3 ಸತ್ತ ಮಂಗಗಳ ಉಣ್ಣಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳಿಸಲಾಗಿದೆ. 2019 ಜನೆವರಿವರೆಗೆ ಜಿಲ್ಲೆಯಲ್ಲಿ 413 ಮಂಗಗಳು ಸತ್ತಿದ್ದವು. 62 ಮಂಗಗಳು ಶವಪರೀಕ್ಷೆ ಮಾಡಲಾಗಿತ್ತು. 820 ಜ್ವರ ಪೀಡಿತರ ರಕ್ತ ಸಂಗ್ರಹಿಸಲಾಗಿತ್ತು. 86 ಜನರ ರಕ್ತದಲ್ಲಿ ಕೆಎಫ್‌ಡಿ ವೈರಾಣು ಇರುವುದು ಪತ್ತೆಯಾಗಿತ್ತು.

ಇದರಲ್ಲಿ ಸಿದ್ಧಾಪುರದ ಮೂವರು ಮೃತಪಟ್ಟಿದ್ದಾರೆ. ಕಳೆದವರ್ಷದ ಲೆಕ್ಕಾಚಾರದಲ್ಲಿ ಈ ವರ್ಷವೂ ಮಂಗನ ಕಾಯಿಲೆ ಎದುರಿಸಲು ಎಲ್ಲ ಸಿದ್ಧತೆ ಮಾಡಿದೆ. ಜನ ಕೈಜೋಡಿಸಿದರೆ ಮಾತ್ರ ನಿಯಂತ್ರಣ ಸಾಧ್ಯ. ಏಳು ತಾಲೂಕುಗಳಲ್ಲಿ ಓಡಾಡಲು ಹೆಚ್ಚು ಸಿಬ್ಬಂದಿ ಬೇಕಿತ್ತು, ಯಾರು ಹೇಳುವುದು, ಎಲ್ಲವನ್ನೂ ಸುಧಾರಿಸಿಕೊಂಡು ಘಟಕ ತನ್ನ ಕೆಲಸ ಮಾಡುತ್ತಿದ್ದರೂ ಜನ ಲಸಿಕೆ ಪಡೆಯಲು ಮುಂದೆ ಬರದೇ ಇರುವುದು ಪರಿಣಾಮಕಾರಿ ನಿಯಂತ್ರಣಕ್ಕೆ ತೊಡಕಾಗಿದೆ ಎಂದು ಅವರು ಹೇಳಿದ್ದಾರೆ. ಎಚ್ಚರಿಕೆ ಘಂಟೆ ಬಾರಿಸಿದೆ, ಜನ ಎಚ್ಚರಾಗಬೇಕಿದೆ.

 

-ಜೀಯು, ಹೊನ್ನಾವರ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.