ಕೊರೊನಾ ಭೀತಿ: ಜಲದಿಗ್ಬಂಧನದಲ್ಲಿರುವ ಹಡಗಿನಲ್ಲಿ ಕಾರವಾರದ ಯುವಕ

ಜಪಾನ್ ಸಮುದ್ರ ಮಧ್ಯದಲ್ಲೇ ನಿಂತುಬಿಟ್ಟಿದೆ ಬರ್ಮುಡಾ ಮೂಲದ ಪ್ರಿನ್ಸೆಸ್ ಡೈಮಂಡ್

Team Udayavani, Feb 8, 2020, 6:01 PM IST

Dimond-Princes-Ship-730

ಕಾರವಾರ: ಚೀನಾ ದೇಶವನ್ನು ಕಂಗೆಡಿಸಿರುವ ಕೊರೊನಾ ವೈರಸ್ ಇದೀಗ ಜಗತ್ತಿನ ವಿವಿಧ ದೇಶಗಳಿಗೂ ಹಬ್ಬುವ ಭೀತಿ ಎದುರಾಗಿದೆ. ಈ ಹಿನ್ನಲೆಯಲ್ಲಿ ದೇಶದಿಂದ ದೇಶಕ್ಕೆ ಸಮುದ್ರ ಮಾರ್ಗದಲ್ಲಿ ಪ್ರಯಾಣಿಸುವ ಐಶಾರಾಮಿ ಪ್ರಯಾಣಿಕರ ಹಡಗುಗಳಿಗೆ ಸಂಕಷ್ಟ ಎದುರಾಗಿದೆ.

ಎಲ್ಲಾ ದೇಶಗಳು ತಮ್ಮ ಜಲಭಾಗದತ್ತ ಬರುವ ಐಷಾರಾಮಿ ಪ್ರವಾಸಿ ಹಡಗುಗಗಳ ಮೇಲೆ ತೀವ್ರ ನಿಗಾ ಇಡಲು ಪ್ರಾರಂಭಿಸಿದೆ. ಇದರ ಪರಿಣಾಮವಾಗಿ ಈ ಪ್ರವಾಸಿ ಹಡಗುಗಳಲ್ಲಿ ಪ್ರಯಾಣಿಸುತ್ತಿರುವ ಪ್ರವಾಸಿಗರು ಹಾಗೂ ಇದರಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗಳಿಗೆ ಇದೀಗ ಸಂಕಷ್ಟ ಎದುರಾಗಿದ್ದು ಈ ಪ್ರಕರಣಗಳಲ್ಲಿ ಭಾರತೀಯರೂ ಸಹ ಸಂಕಷ್ಟಕ್ಕೆ ಸಿಲುಕಿಕೊಳ್ಳುತ್ತಿರುವ ಒಂದೊಂದೇ ಪ್ರಕರಣಗಳು ವರದಿಯಾಗುತ್ತಿದೆ.

ಚೀನಾ ಮೂಲದ ವರ್ಲ್ಡ್ ಡ್ರೀಮ್ ಹಡಗಿನಲ್ಲಿ ಉದ್ಯೋಗಿಯಾಗಿರುವ ಉಳ್ಳಾಲ ಕುಂಪಲದ ಯುವಕ ತನ್ನ ಮದುವೆಗೆ ತಾನೇ ಬರದಾಗಲಿರುವ ಪರಿಸ್ಥಿತಿ ಎದುರಾಗಿರುವ ಸುದ್ದಿಯೊಂದು ವರದಿಯಾಗಿರುವ ಬೆನ್ನಲ್ಲೇ ಇದೀಗ ಕಾರವಾರದ ಯುವಕನೊಬ್ಬ ಕೊರೊನಾ ಭೀತಿಯಿಂದ ತಾನು ಕರ್ತವ್ಯ ನಿರ್ವಹಿಸುತ್ತಿರುವ ಪ್ರವಾಸಿ ಹಡಗಿನೊಂದಿಗೆ ಜಲದಿಗ್ಬಂಧನಕ್ಕೊಳಗಾಗಿರುವ ಮಾಹಿತಿ ಲಭ್ಯವಾಗಿದೆ.


ಉತ್ತರ ಕನ್ನಡ ಜಿಲ್ಲೆಯ ಕಾರವಾರ ಮೂಲದ 26 ವರ್ಷ ಪ್ರಾಯದ ಅಭಿಷೇಕ್ ಎಂಬ ಯುವಕನೇ ಈ ರೀತಿಯಾಗಿ ಇದೀಗ ಸಂಕಷ್ಟಕ್ಕೆ ಸಿಲುಕಿರುವವರಾಗಿದ್ದಾರೆ. ಇವರು ಕಾರ್ಯನಿರ್ವಹಿಸುತ್ತಿದ್ದ ಬರ್ಮುಡಾ ಮೂಲದ ಡೈಂಮಂಡ್ ಪ್ರಿನ್ಸೆಸ್ ಪ್ರಯಾಣಿಕರ ಹಡಗು ಚೀನಾದ ಹಾಂಕಾಂಗ್ ನಿಂದ ಜಪಾನ್ ನ ಟೊಕಿಯೋಗೆ ಸಾಗುತ್ತಿತ್ತು. ಆದರೆ ಇನ್ನೇನು ಈ ಹಡಗು ಜಪಾನ್ ತಲುಪಬೇಕೆನ್ನುವಷ್ಟರಲ್ಲಿ ಈ ಹಡಗಿನಿಂದ ಇಳಿದಿದ್ದ ಪ್ರಯಾಣಿಕರೊಬ್ಬರಲ್ಲಿ ಮಾರಕ ಕೊರೋನಾ ಸೋಂಕು ಪತ್ತೆಯಾದ ಹಿನ್ನಲೆಯಲ್ಲಿ ಈ ಹಡಗನ್ನು ಬಂದರಿಗೆ ಪ್ರವೇಶಿಸದಂತೆ ತಡೆಯಲಾಗಿದ್ದು ಸದ್ಯಕ್ಕೆ ಈ ಹಡಗು ಸಮುದ್ರ ಮಧ್ಯದಲ್ಲೇ ನಿಂತಿದೆ.

ಅಭಿಷೇಕ್ ಅವರು ಗೋವಾದಲ್ಲಿ ಹೊಟೇಲ್ ಮ್ಯಾನೇಜ್ಮೆಂಟ್ ಕೋರ್ಸ್ ಪೂರೈಸಿದ್ದರು ಮತ್ತು ಕಳೆದ ಮೂರು ತಿಂಗಳುಗಳ ಹಿಂದೆಯಷ್ಟೇ ಅವರು ಈ ಹಡಗಿನಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದರು. ಇದೀಗ ಸುದ್ದಿತಿಳಿದು ಅಭಿಷೇಕ್ ಅವರ ಹೆತ್ತವರು ಚಿಂತಾಕ್ರಾಂತರಾಗಿದ್ದಾರೆ.

ಟಾಪ್ ನ್ಯೂಸ್

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.