ಕೋವಿಡ್ 19: ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ: ದೇಬ್‌ಜ್ಯೋತಿ


Team Udayavani, May 6, 2020, 6:18 PM IST

uk-tdy-1

ಭಟ್ಕಳ: ನಗರ ವ್ಯಾಪ್ತಿಯನ್ನು ಕಂಟೇನ್ಮೆಂಟ್‌ ಝೋನ್‌ ಎಂದು ಘೋಷಣೆ ಮಾಡಿದ್ದರಿಂದ ಇಲ್ಲಿ ಕಟ್ಟುನಿಟ್ಟಿನ ಕ್ರಮ ಅನಿವಾರ್ಯವಾಗಿದ್ದು ಸಾರ್ವಜನಿಕರು ಸಹಕರಿಸಬೇಕು ಎಂದು ಪಶ್ಚಿಮ ವಲಯ ಐಜಿಪಿ ದೇಬ್‌ಜ್ಯೋತಿ ರೇ ಹೇಳಿದರು.

ಅವರು ಭಟ್ಕಳಕ್ಕೆ ಆಗಮಿಸಿ ಇಲ್ಲಿನ ಪ್ರವಾಸಿ ಬಂಗಲೆಯಲ್ಲಿ ಅಧಿಕಾರಿಗಳ ಹಾಗೂ ಪ್ರಮುಖ ಸಾರ್ವಜನಿಕರ ಸಭೆ ನಡೆಸಿದರು. ಭಟ್ಕಳಕ್ಕೆ ಬರುವುದಕ್ಕೆ ಹಾಗೂ ಭಟ್ಕಳದಿಂದ ಹೊರಗೆ ಹೋಗುವುದಕ್ಕೆ ಯಾವುದೇ ಅವಕಾಶ ನೀಡಲಾಗುವುದಿಲ್ಲ. ಭಟ್ಕಳಕ್ಕೆ ಹೊರಗಿನಿಂದ ಈಗಾಗಲೇ ಬಂದವರಿದ್ದರೆ ಅವರನ್ನು ಸೂಕ್ತ ತಪಾಸಣೆ ಮಾಡಿ ನಿಗಾ ವಹಿಸಲಾಗುವುದು ಎಂದರಲ್ಲದೇ ಭಟ್ಕಳಕ್ಕೆ ಬರುವವರನ್ನು ತಡೆಯಲಾಗುವುದು ಎಂದೂ ಹೇಳಿದರು.

ಭಟ್ಕಳದಲ್ಲಿ ವದಂತಿಗಳು ಹುಟ್ಟಿಕೊಳ್ಳುತ್ತಿದ್ದು ಅದಕ್ಕೆ ಯಾವುದೇ ರೀತಿಯ ಆಸ್ಪದ ಕೊಡಬಾರದು. ಯಾವುದೇ ವ್ಯಕ್ತಿ ಮೃತಪಟ್ಟಲ್ಲಿ ವೈದ್ಯಾಧಿಕಾರಿಗಳು ಹಾಗೂ ತಾಲೂಕು ಆಡಳಿತದ ಗಮನಕ್ಕೆ ತರಬೇಕು. ಯಾವುದೇ ಖಾಸಗಿ ವೈದ್ಯರು ಕೋವಿಡ್‌-19 ಸಂಶಯಿತರಿದ್ದರೆ ತಪಾಸಣೆ ಮಾಡುವುದು, ಔಷಧ ನೀಡುವುದು ತಪ್ಪು. ಅಂತಹ ಸಂಶಯಿತರಿದ್ದತೆ ತಕ್ಷಣ ಆರೋಗ್ಯಾಧಿಕಾರಿಗಳ ಗಮನಕ್ಕೆ ತರಬೇಕು ಎಂದು ಹೇಳಿದರು.

ಎಸ್‌.ಪಿ. ಶಿವಪ್ರಕಾಶ ದೇವರಾಜು ಮಾತನಾಡಿ, ಪಟ್ಟಣದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಸರ್ವೇ ಮಾಡಲು ಆರಂಭಿಸಲಾಗುವುದು. ಎಲ್ಲರೂ ಕೂಡಾ ಸರಿಯಾದ ಮಾಹಿತಿ ಕೊಟ್ಟು ಸಹಕರಿಸಬೇಕು. ಯಾವುದೇ ರೀತಿಯ ಪ್ರತಿರೋಧ ಮಾಡುವುದು ಸರಿಯಲ್ಲ. ಪ್ರತಿರೋಧ ಮಾಡಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಭಟ್ಕಳ ಉಪವಿಭಾಗಾಧಿಕಾರಿ ಭರತ್‌ ಎಸ್‌., ಡಿವೈಎಸ್‌ಪಿ ಗೌತಮ್‌ ಕೆ.ಸಿ, ತರಬೇತಿಯಲ್ಲಿರುವ ಪಿಎಸ್‌ಐ ಶಾಹಿಲ್‌ ಬಾಗ್ಲಾ, ನೊಡೆಲ್‌ ಅಧಿಕಾರಿ ಡಾ| ಶರದ್‌ ನಾಯಕ, ಡಾ| ಸವಿತಾ ಕಾಮತ್‌, ತಹಶೀಲ್ದಾರ್‌ ಎಸ್‌. ರವಿಚಂದ್ರ, ಡಾ| ಮೂರ್ತಿರಾಜ ಭಟ್ಟ, ಸಿಪಿಐ ರಾಮಚಂದ್ರ ನಾಯಕ, ತಂಜೀಂ ಪ್ರಮುಖ ಇನಾಯಿತುಲ್ಲಾ ಶಾಬಂದ್ರಿ, ಶಾಂತರಾಮ ಭಟ್ಕಳ, ಶಿವಾನಿ ಶಾಂತಾರಾಮ್‌, ಸುಬ್ರಾಯ ದೇವಾಡಿಗ, ಗೋವಿಂದ ನಾಯ್ಕ, ಶ್ರೀಧರ ನಾಯ್ಕ, ಎಂ.ಆರ್‌. ಮಾನ್ವಿ, ಇಮ್ರಾನ್‌ ಲಂಕಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.