ಕಾರವಾರದ ಕೋವಿಡ್-19 ಸೋಂಕಿತೆ ಗರ್ಭಿಣಿ ಗುಣಮುಖ: ಉಡುಪಿ ಆಸ್ಪತ್ರೆಯಿಂದ ಬಿಡುಗಡೆ
Team Udayavani, Apr 24, 2020, 6:21 PM IST
Representative Image
ಕಾರವಾರ: ಭಟ್ಕಳದ ಕೋವಿಡ್-19 ಸೋಂಕಿತ ಗರ್ಭಿಣಿ ಮಹಿಳೆ ಸಂಪೂರ್ಣ ಗುಣಮುಖರಾಗಿ ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆಯಾದರು. ಅವರನ್ನು ಇನ್ನೂ 14 ದಿನ ಹೋಂ ಕ್ವಾರಂಟೇನ್ ದಲ್ಲಿ ಇಡಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.
ಉಡುಪಿಯ ಟಿಎಂಎ ಪೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಿಲ್ಲೆಯ ಭಟ್ಕಳದ ಕೋವಿಡ್-19 ಸೋಂಕಿತ ಗರ್ಭಿಣಿ ಮಹಿಳೆ ಸಂಪೂರ್ಣ ಗುಣಮುಖರಾದ ಹಿನ್ನೆಲೆಯಲ್ಲಿ ಅವರನ್ನು ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಮುನ್ನೆಚ್ಚರಿಕೆ ಕ್ರಮವಾಗಿ ಅವರನ್ನ ಭಟ್ಕಳದ ಫೆಸಿಲಿಟೇಶನ್ ಕೇಂದ್ರದಲ್ಲಿ ಮತ್ತೆ 14 ದಿನ ಕ್ವಾರಂಟೈನ್ ನಲ್ಲಿ ಇರಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲೆಯ ಬಹುತೇಕ ಕೋವಿಡ್ ಸೋಂಕಿತರಿಗೆ ಕಾರವಾರದ ಐಎನ್ ಎಸ್ ಪತಂಜಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಆದರೆ ಮಹಿಳೆ ಗರ್ಭಿಣಿಯಾಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ವೈದ್ಯಕೀಯ ಸೌಲಭ್ಯದ ಅಗತ್ಯ ಕಂಡುಬಂದಿದ್ದು ಉಡುಪಿಯ ಆಸ್ಪತ್ರೆಗೆ ಸೇರಿಸಲಾಗಿತ್ತು. ಗುಣಮುಖರಾದ ಮಹಿಳೆಯನ್ನು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ ಮತ್ತಿತರ ಹಿರಿಯ ಅಧಿಕಾರಿಗಳು ಮನೆಗೆ ಕಳುಹಿಸಿಕೊಟ್ಟರು.
ಇದರೊಂದಿಗೆ ಜಿಲ್ಲೆಯ ಒಟ್ಟು 11 ಸೋಂಕಿತರಲ್ಲಿ 10 ಜನ ಗುಣಮುಖರಾದಂತಾಗಿದೆ. ಶುಕ್ರವಾರ ಗುಣಮುಖರಾದ ಗರ್ಭಿಣಿ ಮಹಿಳೆಯ ಪತಿ ಪತಂಜಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಕಾರವಾರದ ಪತಂಜಲಿ ನೇವಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜಿಲ್ಲೆಯ ಏಕೈಕ ಸೋಂಕಿತ ವ್ಯಕ್ತಿಯಾಗಿದ್ದಾರೆ. ಅವರೂ ಸಹ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದು ಬಹುಬೇಗ ಗುಣಮುಖರಾಗುವ ವಿಶ್ವಾಸವನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ