ಕೋವಿಡ್ ಸೋಂಕು ಹೆಚ್ಚಳದ ಕಳವಳ

ಜಾಗೃತಿ ಮೂಡಿಸುತ್ತಿದ್ದರೂ ಹಳ್ಳಿಯ ಜನತೆ ಮಾತು ಕೇಳುತ್ತಿಲ್ಲ-ವಾರಿಯರ್ಗಳ ಪೀಕಲು

Team Udayavani, May 15, 2021, 9:35 PM IST

cats

ಜೀಯು, ಹೊನ್ನಾವರ

ಹೊನ್ನಾವರ: ಕಳೆದೆರಡು ತಿಂಗಳಲ್ಲಿ ತಾಲೂಕು ಆಡಳಿತ ಸಂಪ್ರದಾಯದಂತೆ ಜಾತ್ರೆ ಆಚರಿಸಲು, 50 ಜನ ಮಿತಿಯಲ್ಲಿ ಮದುವೆ ನಡೆಸಲು ಅನುಮತಿ ಕೊಟ್ಟಿದ್ದೇ ತಪ್ಪಾಯಿತೇನೋ ಎಂಬಂತೆ ಹಳ್ಳಿಗಳಲ್ಲಿ ಕೊರೊನಾ ಕಾಡ್ಗಿಚ್ಚಿನಂತೆ ಹಬ್ಬಿದೆ.

ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಇಲಾಖೆ, ಪೊಲೀಸ್‌ ಇಲಾಖೆ, ವೈದ್ಯರು ಶ್ರಮಪಟ್ಟು ಹಾಸಿಗೆಗಳನ್ನು ಹೆಚ್ಚಿಸಿ ಆಕ್ಸಿಜನ್‌, ಔಷಧ, ಇತ್ಯಾದಿಗಳನ್ನು ವ್ಯವಸ್ಥೆ ಮಾಡಿಕೊಟ್ಟು ಜೊತೆಯಲ್ಲಿ ಹಳ್ಳಿಯ ಮನೆಮನೆಗಳಿಗೆ ಆಶಾ ಕಾರ್ಯಕರ್ತೆಯರನ್ನು ಕಳಿಸಿ ಎಚ್ಚರಿಕೆ ಹೇಳಿ, ಎಲ್ಲಾ ಮುಂಜಾಗ್ರತಾ ಕ್ರಮ ಕೈಗೊಂಡರೂ ಸಹ ಜನ ಇದಾವುದೂ ಸಂಬಂಧವಿಲ್ಲ ಎಂಬಂತೆ ನಿರ್ಲಕ್ಷಿಸಿದ ಕಾರಣ ಕೊರೊನಾ ಅನಿಯಂತ್ರಿತವಾಗುತ್ತಿದೆ.

ಮದುವೆ ಮಾಡಲು 50ಜನಕ್ಕೆ ಪರವಾನಿಗೆ ಕೊಟ್ಟರೆ 200-300ಜನ ಉಂಡರು, ಕವಳ ಜೆಗೆದು ಉಗುಳಿದರು. ಸೋಂಕು ತಗಲಿದವರು ಒಂದಿಬ್ಬರಿದ್ದರೆ ಮದುವೆಗೆ ಹೋದವರಿಗೆಲ್ಲಾ ಸೋಂಕು ತಗಲಿತು. ಈಗ ಬರುತ್ತಿರುವ ಸೋಂಕಿತರು ಬಹುಪಾಲು ಮದುವೆಗೆ ಹೋಗಿ ಬಂದವರು. ಮನೆಯಲ್ಲೂ ಮದುವೆ ಮಾಡದೆ ಹಿತ್ತಲಲ್ಲಿ ಬಾಳೆ ಮರದ ಬುಡದಲ್ಲಿ ಮಾಲೆ ಹಾಕಿಕೊಂಡು ವರ-ವಧು ಕೈಕೈಹಿಡಿದು ಮನೆಗೆ ಹೋಗಿದ್ದರೆ ಇಂಥ ದುರಂತ ಸಂಭವಿಸುತ್ತಿರಲಿಲ್ಲ.

ಎಲ್ಲೋ ಕುಂಭಮೇಳ ನಡೆಯಿತು, ಜಾತ್ರೆ ಆಯಿತು, ಚುನಾವಣೆಯಾಯಿತು ಎಂದು ಇಲ್ಲಿ ಜಾತ್ರೆಗೆ ಹೋದವರು ಸೋಂಕು ಹೆಚ್ಚಿಸಿಕೊಂಡರು. ಕವಳದ ಬಟ್ಟಲು ವಿನಿಮಯ ಮಾತ್ರವಲ್ಲ ಊಟದ ಬಟ್ಟಲು ಸರಿಯಾಗಿ ತೊಳೆಯದೇ ಇರುವುದು ಸಹ ಕೋವಿಡ್‌ ವಿಸ್ತರಣೆಗೆ ಕಾರಣವಾಗಬಹುದು. ಯೋಗ, ಪ್ರಾಣಾಯಾಮ, ಪ್ರಾರ್ಥನೆಗಳು ಮನಸ್ಸನ್ನು ಶಾಂತವಾಗಿಟ್ಟುಕೊಂಡು ಕೋವಿಡ್‌ ನಿಯಮ ಪಾಲಿಸಿ ಸೋಂಕಿನಿಂದ ದೂರವಿರಲು ಸಹಾಯ ಮಾಡುತ್ತದೆ.

ಬಾಯ್ತುಂಬ ರಸಗವಳ ತುಂಬಿಕೊಂಡು ಅದನ್ನು ಉಗಿದರೆ ಅಲ್ಲಿ ಇನ್ನೊಬ್ಬ ಬಾಯೊ¤ಳೆದರೆ ಅವನಿಗೆ ಸೋಂಕು ಖಂಡಿತ. ಕವಳದ ಸ್ಪ್ರೆà ಕೊರೊನಾ ವಾಹಕ ಎಂದು ಡಾ| ಪ್ರಕಾಶ ನಾಯ್ಕ, ಡಾ| ಗಜಾನನ ಭಟ್‌ ಹೇಳುತ್ತಾರೆ. ಕೊರೊನಾ ಎರಡನೇ ಅಲೆಯನ್ನು ಹಗುರವಾಗಿ ಪರಿಗಣಿಸಿದ ಕಾರಣ ಗಂಭೀರ ಪರಿಸ್ಥಿತಿ ಉಂಟಾಗಿದೆ.

ಜಿಲ್ಲೆಯಲ್ಲಿ ಗುರುವಾರ ಒಂದೇ ದಿನ 14ಜನ ಮೃತಪಟ್ಟಿದ್ದಾರೆ. 791ಸೋಂಕಿತರು ಪತ್ತೆಯಾಗಿದ್ದಾರೆ. 752ಜನ ಗುಣಮುಖರಾಗಿದ್ದಾರೆ. ಹಳ್ಳಿಯ ಮನೆಮನೆಗಳಲ್ಲಿ ಜನ ಟಿವಿ ನೋಡುತ್ತಾರೆ. ಆಸ್ಪತ್ರೆಯಲ್ಲಿ ಜಾಗವಿಲ್ಲ, ಆಕ್ಸಿಜನ್‌ ಇಲ್ಲ, ಆಂಬ್ಯುಲೆನ್ಸ್‌ ಇಲ್ಲ, ಕೊನೆಗೆ ಸತ್ತರೆ ಹೆಣ ಸುಡಲೂ ಸ್ಥಳವಿಲ್ಲ. ಗಂಗಾನದಿಯಲ್ಲಿ ಹೆಣ ತೇಲಿಬರುತ್ತಿದೆ. ಈ ಪರಿಸ್ಥಿತಿಯನ್ನು ನೋಡಿಯೂ ಹಳ್ಳಿಯ ಜನ ಜ್ವರ ಬಂದರೆ ಔಷಧ ಅಂಗಡಿಗೆ ಹೋಗಿ ಡೋಲಾ 650, ವಿಕ್ಸ್‌ಎಕ್ಷನ್‌500, ಫೆರಾಸಿಟಮೋಲ್‌ ನುಂಗುತ್ತಾರೆ.

ಮರುದಿನ ಹಳ್ಳಿಯ ವೈದ್ಯರಲ್ಲಿ ಹೋಗುತ್ತಾರೆ. ಕುಟುಂಬ ವೈದ್ಯನ ಪಾಲಿಗೆ ರೋಗಿ ಕಾಮಧೇನು. ಅವರು ಒಂದಿಷ್ಟು ಗುಳಿಗೆ ಕೊಡುತ್ತಾರೆ, ಕೊನೆಗೆ ಉಸಿರು ಬಿಡಲಾಗದ ಸ್ಥಿತಿಯಲ್ಲಿ ಸರ್ಕಾರಿ ಆಸ್ಪತ್ರೆಗೆ ಬರುವಾಗಲೇ ಬೆಡ್‌ ಉಂಟಾ, ಆಕ್ಸಿಜನ್‌ ಉಂಟಾ, ವೆಂಟಿಲೇಟರ್‌ ಉಂಟಾ, ಡಾಕ್ಟರ್‌ ಒಳಗೆ ಬರುತ್ತಾರಾ ಎಂದು ಕೇಳುತ್ತಾ ಬರುತ್ತಾರೆ, ಅವರಿವರಿಂದ ಫೋನ್‌ ಮಾಡಿಸುತ್ತಾರೆ, ಚಡಪಡಿಸುತ್ತಾರೆ. ಇಂಥ ಪರಿಸ್ಥಿತಿಯಲ್ಲಿ ವೈದ್ಯರು ಜೀವ ಉಳಿಸಲು ತುಂಬ ಶ್ರಮಪಡಬೇಕಾಗುತ್ತದೆ. ವೈದ್ಯಕೀಯ ಸಿಬ್ಬಂದಿಯದೂ, ಅವರ ಸಹಾಯಕರದೂ ಒಂದು ಜೀವ. ವರ್ಷದಿಂದ ದಣಿವಿಲ್ಲದೇ ದುಡಿಯುತ್ತಿದ್ದಾರೆ, ಜನ ಇದನ್ನು ಅರ್ಥಮಾಡಿಕೊಳ್ಳಬೇಕು.

ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಟಾರ್‌ ಮತ್ತು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಎಲ್ಲ ಶಾಸಕರು ವ್ಯವಸ್ಥೆಗೆ ಬೆಂಬಲವಾಗಿ ನಿಂತು ಕೊರತೆಯಾಗದಂತೆ ನೋಡಿಕೊಳ್ಳುತ್ತಿದ್ದಾರೆ. ವ್ಯಾಕ್ಸಿನ್‌ ಬರುತ್ತಲೇ ಇದೆ, ಅವಸರ ಮಾಡದೆ ಸುಮ್ಮನೆ ಪರಿಸ್ಥಿತಿಯನ್ನು ಎದುರಿಸಬೇಕಾಗಿದೆ.

 

 

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.