ಸೋಂಕು ಲಕ್ಷಣ ಗುಟ್ಟು ಮೃತ್ಯುವಿನೆದುರು ರಟ್ಟು

ಮನೆಮದ್ದಿಗೆ ಮೊರೆ | ಕೊನೆ ಹಂತದಲ್ಲಿ ಆಸ್ಪತ್ರೆಗೆ ದೌಡು

Team Udayavani, May 20, 2021, 10:38 PM IST

cats

ವರದಿ : ರಾಘವೇಂದ್ರ ಬೆಟ್ಟಕೊಪ್ಪ  

ಶಿರಸಿ: ಸೋಂಕಿನ ಲಕ್ಷಣಗಳು ಇದ್ದರೂ ಯಾರಿಗೂ ಹೇಳದೇ ಮನೆ ಮದ್ದಿಗೆ ಮುಂದಾಗಿ ಕೊನೇ ಹಂತದಲ್ಲಿ ಆಸ್ಪತ್ರೆಗೆ ದಾಖಲಾದವರೇ ಸಾವಿಗೆ ಬಲಿಯಾಗುತ್ತಿದ್ದಾರೆ. ಆರೋಗ್ಯ ಇಲಾಖೆ ಅಂಕಿ-ಅಂಶಗಳು ಇದನ್ನೇ ಪ್ರತಿಪಾದಿಸುತ್ತಿದ್ದು, ಕೊರೊನಾ ಸೋಂಕಿನಿಂದ ಬಳಲುತ್ತಿದ್ದರೂ ಎಂಟತ್ತು ದಿನಗಳ ಬಳಿಕ ಆಸ್ಪತ್ರೆಗೆ ಉಸಿರಾಟದ ಸಮಸ್ಯೆಯಿಂದ ಬರುತ್ತಿರುವುದೇ ಸಾವಿನ ಪ್ರಮಾಣ ಅಧಿಕವಾಗಲು ಕಾರಣಾಗುತ್ತಿದೆ.

ವಿದ್ಯಾವಂತರೇ ತಪಾಸಣೆಗೆ ಒಳಗಾಗದೆ, ಆಸ್ಪತ್ರೆಗೆ, ವೈದ್ಯರನ್ನು ಸಂಪರ್ಕಿಸಿ ಔಷಧೋಪಚಾರ ಮಾಡಿಕೊಳ್ಳದೆ ಇರುವುದು ಮರಣ ಅಥವಾ ಸೋಂಕಿನ ತೀವ್ರತೆ ಅನುಭವಿಸಲು ಕಾರಣವಾಗುತ್ತಿದೆ. ಎಷ್ಟೋ ಜನರು ಜ್ವರದ, ಥಂಡಿ ಔಷಧ ಪಡೆದು ತಾತ್ಕಾಲಿಕ ಉಪಶಮನಕ್ಕೆ ಪ್ರಯತ್ನಿಸುತ್ತಿದ್ದಾರೆ. ಇದೇ ಕಾರಣದಿಂದ ಸೋಂಕಿತರು ಇನ್ನುಳಿದವರಿಗೂ ಸೋಂಕು ಹಂಚುವಂತೆ ಆಗಿದೆ. ತಾಲೂಕಿನಲ್ಲಿ ಕೊನೇ ಹಂತದಲ್ಲಿ ಚಿಕಿತ್ಸೆ ಪಡೆಯಲು ಬಂದವರು ಚಿಕಿತ್ಸೆ ಫಲಿಸದೇ ಮೃತರಾಗುತ್ತಿದ್ದಾರೆ.

ಯುವ ಜನರಿಗೂ ಉಸಿರಾಟದ ಸಮಸ್ಯೆ ಜೋರಾಗಿದೆ. ಜ್ವರ, ಥಂಡಿ, ಕೆಮ್ಮು, ಮೈ ಕೈ ನೋವು ಇದ್ದರೂ ಮನೆಯಲ್ಲೇ ಚಿಕಿತ್ಸೆ ಮಾಡಿಕೊಂಡು ಆಸ್ಪತ್ರೆಗೆ ಬಾರದೇ ಔಷಧ ಅಂಗಡಿಯಲ್ಲಿ ಪ್ಯಾರಾಸಿಟಮಲ್‌, ಡೋಲೋ 650 ಇತರ ಔಷಧ ಪಡೆಯುತ್ತಿದ್ದಾರೆ. ಗುಣವಾಗದೇ ಕೊನೇ ಘಳಿಗೆಯಲ್ಲಿ ಆಸ್ಪತ್ರೆಗೆ ಬರುವುದು ಸಮಸ್ಯೆಯ ಮೂಲ ಎನ್ನುತ್ತಾರೆ ತಾಲೂಕು ವೈದ್ಯಾಧಿಕಾರಿ ಡಾ| ವಿನಾಯಕ ಕಣ್ಣಿ.

ಇದೊಂದು ಸಮಸ್ಯೆ: ಈ ಮಧ್ಯೆ ಸೋಂಕಿನ ತಪಾಸಣೆಗೆ ಕೊಟ್ಟ ಬಳಿಕ 48 ಗಂಟೆ ಒಳಗೆ ಕಾರವಾರಕ್ಕೆ ಹೋಗಿ ಪಾಸಿಟೀವೋ, ನೆಗಟೀವೋ ವರದಿ ಬರಬೇಕು. ಪಾಸಿಟೀವ್‌ ಬಂದ ಬಳಿಕ ಹೋಮ್‌ ಕ್ವಾರಂಟೈನ್‌ ಆಗಬೇಕು. ಆದರೆ, ವರದಿ ಬರುವ ಮೊದಲೇ ಅಲ್ಲಿ ಇಲ್ಲಿ ಓಡಾಟ ಮಾಡಿ ಸೋಂಕು ಹಂಚುವ ಕಾರ್ಯ ಆಗುತ್ತಿದೆ. ಇದಕ್ಕೆ ಸ್ವಯಂ ಜಾಗೃತಿ ಆಗಬೇಕು ಎನ್ನುತ್ತಾರೆ ಕೊರೊನಾ ವಾರಿಯರ್. ಈ ಮಧ್ಯೆ ಸೋಂಕಿತರು ಎಂದು ಗೊತ್ತಾಗಿ ಔಷಧ ಪಡೆಯುತ್ತಿದ್ದರೂ ಅಲ್ಲಿ ಇಲ್ಲಿ ಹಳ್ಳಿಗಳಲ್ಲಿ, ಪೇಟೆಗಳಲ್ಲಿ ಓಡಾಡುತ್ತಿರು ವವರೂ ಕಾಣುತ್ತಿದ್ದಾರೆ. ಇದರ ನಿಯಂತ್ರಣ ಸ್ಥಳೀಯ ಆಡಳಿತಕ್ಕೆ ತಲೆನೋವಾಗುತ್ತಿದೆ. ಕೋವಿಡ್‌ ಸೋಂಕಿನ ಲಕ್ಷಣ ಕಂಡು ಕೋವಿಡ್‌ ತಪಾಸಣೆ ಮಾಡಿಸಿಕೊಂಡರೆ ಫಲಿತಾಂಶ ಬರುವ ತನಕ ಸ್ವಯಂ ಕ್ವಾರಂಟೈನ್‌ ಆಗಬೇಕು, ಕ್ವಾರಂಟೈನ್‌ಗೆ ಹೆದರಿ ಚಿಕಿತ್ಸೆ ಪಡೆಯದೇ ಇರಬಾರದು. ಸರಕಾರಿ ಆಸ್ಪತ್ರೆ, ಖಾಸಗಿ ಆಸ್ಪತ್ರೆಗಳೂ ಚಿಕಿತ್ಸೆ ಕೊಡುತ್ತಿದೆ.

ಸರಕಾರಿ ವ್ಯವಸ್ಥೆಯಲ್ಲಿ ಶಿರಸಿಯಲ್ಲೇ ಇನ್ನೂ 20 ಬೆಡ್‌ ಇದೆ. ಮನೆಯಲ್ಲಿ ಪ್ರತ್ಯೇಕವಾಗಿ ಉಳಿಯಲು ಆಗದೇ ಇದ್ದವರಿಗೆ ಶಿರಸಿಯ ಜಿಲ್ಲಾ ತರಬೇತಿ ಕೇಂದ್ರದಲ್ಲಿ ಪ್ರತ್ಯೇಕ ವ್ಯವಸ್ಥೆ ಇದೆ. ಬನವಾಸಿ, ದಾಸನಕೊಪ್ಪದಲ್ಲೂ ಸೋಂಕಿತರ ವಾಸ್ತವ್ಯಕ್ಕೆ ತಾಲೂಕು ಆಡಳಿತ ಯೋಜಿಸಿದೆ. ಅನಾರೋಗ್ಯ, ಪಾಸಿಟೀವ್‌ ಎರಡನ್ನೂ ಗಪ್‌ಚುಪ್‌ ಮಾಡುವುದೇ ಕೊರೊನಾ ನಿಯಂತ್ರಣಕ್ಕೆ ಕಷ್ಟವಾಗಬಹುದು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.