ವಿಕಲಚೇತನರಿಗೆ ಕೋವಿಡ್‌ ಲಸಿಕೆ ನೀಡುವ ಮಹಾ ಅಭಿಯಾನ ಯಶಸ್ವಿ


Team Udayavani, May 29, 2021, 8:17 PM IST

28kwr4 (1)

ಕಾರವಾರ: ಜಿಲ್ಲೆಯಲ್ಲಿ ನಡೆದ ವಿಕಲಚೇತನರಿಗೆ ಕೋವಿಡ್‌ ಲಸಿಕಾ ಅಭಿಯಾನ ಯಶಸ್ವಿಯಾಗಿದೆ. 18 ರಿಂದ 44 ವರ್ಷದವರೆಗಿನ ಹಾಗೂ 45 ವರ್ಷ ಮೇಲ್ಪಟ್ಟ 4871 ವಿಕಲಚೇತನರು ಕೋವಿಡ್‌ ಲಸಿಕೆ ಪಡೆದುಕೊಂಡರು ಎಂದು ಜಿಪಂ ಸಿಇಒ ಪ್ರಿಯಂಕಾ ಎಂ. ಹೇಳಿದ್ದಾರೆ.

ಶುಕ್ರವಾರ ನಡೆದ ಲಸಿಕೆ ಅಭಿಯಾನದ ವಿವರ ನೀಡಿದ ಅವರು ವಿಕಲ ಚೇತನರಿಗೆ ಕೋವಿಡ್‌ ಲಸಿಕೆ ಹಾಕಲು ಮುಂದಾದ ಉತ್ತರ ಕನ್ನಡ ಜಿಲ್ಲಾ ಪಂಚಾಯತ್‌ ಪ್ರಯೋಗಕ್ಕೆ ಯಶಸ್ಸು ಸಿಕ್ಕಿದೆ ಎಂದರು.

ಉತ್ತರಕನ್ನಡ ಜಿಲ್ಲೆಯಲ್ಲಿ ಕೋವಿಡ್‌ಗೆ ತುತ್ತಾಗುವುದನ್ನು ತಪ್ಪಿಸಲು ಜಿಲ್ಲಾಡಳಿತ ಹಾಗೂ ಜಿಪಂ ಹಲವಾರು ಮಾರ್ಗೋಪಾಯ ಕೈಗೊಂಡಿದೆ. ಈಗಾಗಲೇ ಒಂದರ ಹಿಂದೊಂದು ಪ್ರಯೋಗ ಮಾಡಿ ಯಶಸ್ವಿಯಾಗಿರುವ ಆಡಳಿತ ಇಂದು ವಿಕಲಚೇತನರಿಗೂ ಕೋವಿಡ್‌ ಲಸಿಕೆ ಹಾಕುವ ಮಹಾ ಅಭಿಯಾನ ಮಾಡಿದೆ. ವಿಕಲಚೇತನರಿಗೆ ಲಸಿಕೆ ಹಾಕಿಕೊಳ್ಳಲು ತೊಂದರೆ ಉಂಟಾಗದಂತೆ ಜಿಲ್ಲೆಯಲ್ಲಿ ಬಾರಿ ವ್ಯವಸ್ಥೆ ಮಾಡಲಾಗಿತ್ತು. ಪ್ರತಿಯೊಂದು ಗ್ರಾಪಂ ಮಟ್ಟದಲ್ಲಿ ವಿಕಲಚೇತನರಿಗೆ ಎರಡು ವಾಹನದ ವ್ಯವಸ್ಥೆ ಮಾಡಿತ್ತು. ಅಂಗವಿಕಲರು ಲಸಿಕೆ ಪಡೆಯಲು ಸಹಾಯ ಬಯಸಿದಲ್ಲಿ ಮನೆಯಿಂದ ವಾಹನದ ಮೇಲೆ ತಂದು ಲಸಿಕೆ ನೀಡಲಾಯಿತು.

ಇನ್ನು ಹಲವರು ಸ್ವಯಂಪ್ರೇರಿತರಾಗಿ ಬಂದು ಲಸಿಕೆ ಪಡೆದುಕೊಂಡರು. ಶುಕ್ರವಾರ ನಡೆದ ಮಹಾ ಲಸಿಕೆ ಅಭಿಯಾನದಲ್ಲಿ 18 ರಿಂದ 44 ವರ್ಷ ಒಳಗಿನ 3452 ವಿಕಲಚೇತನರು ಲಸಿಕೆ ಪಡೆದರು.

ಇನ್ನು 44 ವರ್ಷ ಮೇಲ್ಪಟ್ಟ 2789 ವಿಕಲಚೇತನರರು ಕೋವಿಡ್‌ ಲಸಿಕೆ ಪಡೆದುಕೊಂಡರು. ಕುಮಟಾ ತಾಲೂಕಿನ ತೊರ್ಕೆ ಗ್ರಾಮದಲ್ಲಿ ಶೇ.95 ಅಂಗವಿಕಲರು ಲಸಿಕೆ ಪಡೆದರು. ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟು 13354 ವಿಕಲಚೇತನರಲ್ಲಿ 6241ವಿಕಲಚೇತನರು ಕೋವಿಡ್‌ ಲಸಿಕೆ ಪಡೆದುಕೊಂಡಿದ್ದಾರೆ.

ಜಿಲ್ಲೆಯಲ್ಲಿ ವಿಕಲಚೇತನರಿಗೆ ಕೋವಿಡ್‌ ಲಸಿಕೆ ನೀಡುವ ಮಹಾ ಅಭಿಯಾನ ಅಭೂತಪೂರ್ವ ಯಶಸ್ಸು ಸಿಕ್ಕಿದೆ. ಮಹಾ ಅಭಿಯಾನದಲ್ಲಿ ಲಸಿಕೆ ಪಡೆಯದೇ ಇರುವ ವಿಕಲಚೇತನರಿಗೆ ಮನೆ ಮನೆಗೆ ತೆರಳಿ ಲಸಿಕೆ ನೀಡಲಾಗುವುದು ಎಂದು ಜಿಪಂ ಸಿಇಒ ಪ್ರಿಯಂಕಾ ಹೇಳಿದರು.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.