ಜಿಲ್ಲೆ ಪ್ರವಾಸಿ ತಾಣಗಳು ಬಹುತೇಕ ಬಂದ್‌


Team Udayavani, Mar 16, 2020, 5:12 PM IST

uk-tdy-1

ಕಾರವಾರ: ಕೊರೊನಾ ವೈರಸ್‌ನಿಂದ ಎಚ್ಚರಿಕೆಯಿಂದ ಇರಲು ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಜಿಲ್ಲೆಯ ಬಹುತೇಕ ಪ್ರವಾಸಿತಾಣಗಳನ್ನು ಮುಚ್ಚಲಾಗಿದೆ. ಪ್ರವಾಸಿಗರು, ಅದರಲ್ಲೂ ವಿದೇಶಿ ಪ್ರವಾಸಿಗರು ಜಿಲ್ಲೆಗೆ ಬರದಂತೆ ಸೂಚಿಸಲಾಗಿದೆ.

ಈಗಾಗಲೇ ಜಿಲ್ಲೆಯಲ್ಲಿರುವ ಪ್ರವಾಸಿಗರಿಗೆ ಎಚ್ಚರಿಕೆ ನೀಡಿ ತಪಾಸಣೆಗೆ ಗುರಿಪಡಿಸಲಾಗುತ್ತಿದೆ. ಗೋಕರ್ಣದಲ್ಲಿ ಬಸ್‌ ನಿಲ್ದಾಣ ಮತ್ತು ಆಸ್ಪತ್ರೆಗಳಲ್ಲಿ ವಿದೇಶಿ ಪ್ರವಾಸಿಗರಿಗೆ ಕೊರೊನಾ ವೈರಸ್‌ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ರೆಸಾರ್ಟ್‌ ಮತ್ತು ಹೋಂ ಸ್ಟೇಗಳಿಗೆ ಕಟ್ಟಪ್ಪಣೆ ಮಾಡಲಾಗಿದ್ದು, ಪ್ರವಾಸಿಗರಿಗೆ ಉಳಿಯಲು ಅವಕಾಶ ನೀಡದಂತೆ ಜಿಲ್ಲಾಡಳಿತ ಸೂಚಿಸಿದೆ. ಪ್ರತಿ ತಾಲೂಕಿಗೆ ವೈದ್ಯಾಧಿಕಾರಿಗಳನ್ನು ನೇಮಿಸಿ ಜನರಲ್ಲಿ ಜಾಗೃತಿ ಮೂಡಿಸುವ ಜವಾಬ್ದಾರಿ ನೀಡಲಾಗಿದೆ. ಜನರು ಹೆಚ್ಚಾಗಿ ಮನೆಯಿಂದ ಹೊರಗೆ ಬರದಂತೆ ಸೂಚಿಸಲಾಗಿದೆ. 7ರಿಂದ 9ನೇ ತರಗತಿಗೆ ಸೋಮವಾರದಿಂದ ಆರಂಭವಾಗಬೇಕಿದ್ದ ಪರೀಕ್ಷೆಗಳನ್ನು ಮಾ. 31 ವರೆಗೆ ನಡೆಸದಿರಲು ಸಾರ್ವಜನಿಕ ಶಿಕ್ಷಣ ಇಲಾಖೆ ಶಿಕ್ಷಕರಿಗೆ ಸೂಚಿಸಿದೆ.

ಶಾಲೆಯಲ್ಲಿ 1-6ರ ವರೆಗಿನ ಫಲಿತಾಂಶ ಸಿದ್ಧತೆ ಹಾಗೂ ಮುಂದಿನ ಶೈಕ್ಷಣಿಕ ವರ್ಷದ ಪಠ್ಯಕ್ರಮದ ವೇಳಾಪಟ್ಟಿಗಳನ್ನು ಸಿದ್ಧ ಮಾಡಿಕೊಳ್ಳಲು ಶಿಕ್ಷಕರಿಗೆ ಸೂಚಿಸಲಾಗಿದೆ. ಎರಡು ಮೂರು ದಿನಗಳ ನಂತರ ಶಿಕ್ಷಕರಿಗೂ ಮನೆಯಲ್ಲಿ ಉಳಿಯಲು ಸೂಚಿಸುವ ಸಾಧ್ಯತೆಗಳಿವೆ. ಪರೀಕ್ಷೆಗಳು ಮುಂದೂಡಲ್ಪಟ್ಟ ಕಾರಣ ಮಕ್ಕಳು ಮನೆಯ ಹತ್ತಿರದ ಬಯಲುಗಳಲ್ಲಿ ಕ್ರಿಕೆಟ್‌ ಆಡುವಲ್ಲಿ ನಿರತರಾಗಿದ್ದರು. ಮಕ್ಕಳ ಆಟದ ದೃಶ್ಯಗಳು ನಗರದ ವಿವಿಧೆಡೆ ಕಂಡು ಬಂದವು.

ಪ್ರವಾಸಿ ತಾಣಗಳಲ್ಲಿ ಜನರಿಲ್ಲ  : ಸಿಂತೇರಿ ರಾಕ್‌, ಅತ್ತಿವೇರಿ, ಕುಳಗಿ ಪಕ್ಷಿಧಾಮ, ಅಣಶಿ ಸಫಾರಿ ರದ್ದು ಮಾಡಲಾಗಿದೆ. ಹುಲಿ ಸಂರಕ್ಷಿತ ಪ್ರದೇಶದಲ್ಲಿ ಪ್ರವಾಸಿಗರ ಬರುವಿಕೆ ನಿಷೇಧಿಸಲಾಗಿದೆ. ಹಾಗಾಗಿ ಈ ತಾಣಗಳಿಗೆ ಪ್ರವಾಸಿಗರ ಆಗಮನ ನಿಂತಿದೆ. ಕಡಲತೀರಗಳಿಗೆ ಬರುವ ಪ್ರವಾಸಿಗರ ಸಂಖ್ಯೆ ಬಹುತೇಕ ನಿಂತಿದೆ. ಪ್ರವಾಸೋದ್ಯಮಕ್ಕೆ ಭಾರೀ ಹೊಡೆತ ಬಿದ್ದಿದೆ. ಆದರೆ ಇದು ಅನಿವಾರ್ಯ ಎಂಬ ಮಾತು ಕೇಳಿ ಬಂದಿದೆ.

ವಿದೇಶದಿಂದ ಬಂದವರ ಮೇಲೆ ನಿಗಾ : ವಿದೇಶದಿಂದ ಬಂದವರ ಮೇಲೆ ನಿಗಾ ಇರಿಸಲಾಗಿದೆ. ಈ ಬಗ್ಗೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ವಿದೇಶಕ್ಕೆ ಹೋಗಿ ಮರಳಿದವರು 14 ದಿನ ಮನೆಯಲ್ಲೇ ಇರುವಂತೆ ಸೂಚಿಸಲಾಗಿದೆ. ಅಲ್ಲದೇ ಕಫದ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ಭಟ್ಕಳದ ಈರ್ವರು ಯುವಕರ ಮೇಲೆ ನಿಗಾ ಇಡಲಾಗಿತ್ತು. ಅವರ ಕಫದ ಪರೀಕ್ಷೆ ಮಾಡಲಾಗಿದ್ದು, ಕೊರೊನಾ ನೆಗೆಟಿವ್‌ ಬಂದಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಎಲ್ಲೆಡೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ಸಿಬ್ಬಂದಿಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಸ್ವಚ್ಚತೆ ಬಗ್ಗೆ ಜನರಲ್ಲಿ ಹೆಚ್ಚು ಹೆಚ್ಚು ಅರಿವು ಮೂಡಿಸಲಾಗುತ್ತಿದೆ. ನೆಗಡೆ, ತಲೆನೂವು, ಕೆಮ್ಮು ಮತ್ತು ಜ್ವರ ಬಂದಾಗ ತಕ್ಷಣ ಆಸ್ಪತ್ರೆಗೆ ಬಂದು ಪರೀಕ್ಷಿಸಿಕೊಳ್ಳುವಂತೆ ಹಾಗೂ ಶೀನು ಬಂದಾಗ ಕರವಸ್ತ್ರ ಬಳಸುವಂತೆ ಸೂಚಿಸಲಾಗುತ್ತಿದೆ.

ಬಸ್‌ಗಳಲ್ಲಿ ಜನ ಸಂಚಾರ ವಿರಳ : ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಜನ ಸಂಚಾರ ವಿರಳವಾಗಿದೆ. ಅಲ್ಪಸ್ವಲ್ಪ ಜನರು ಮಾತ್ರ ಬಸ್‌ ಗಳಲ್ಲಿ ಸಂಚಾರ ಮಾಡುತ್ತಿದ್ದಾರೆ. ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ ಸಹ ಇದರಿಂದ ಹೊಡೆತ ಬಿದ್ದಿದೆ. ಹೋಟೆಲ್‌, ಲಾಡ್ಜ್ಗಳಿಗೆ ಪ್ರವಾಸಿಗರು ಬರುವುದು ನಿಂತಿರುವ ಕಾರಣ ಜನ ಸಂಚಾರ ನಗರಗಳಲ್ಲಿ ವಿರಳವಾಗಿದೆ. ನಗರದ ನಿವಾಸಿಗಳು ಸಹ ಅಗತ್ಯ ವಸ್ತುಗಳನ್ನು ಖರೀದಿಸಲು ಮಾತ್ರ ಹೊರಗೆ ಬರುತ್ತಿದ್ದಾರೆ. ಬಿಟ್ಟರೆ ಬಹುತೇಕ ಜನರು ಮನೆಯಲ್ಲಿ ಕುಳಿತು ಆರೋಗ್ಯ ಎಮರ್ಜನ್ಸಿ ಎಂದು ಮಾತಾಡಿಕೊಳ್ಳತೊಡಗಿದ್ದಾರೆ.

ಭಾನುವಾರದ ಸಂತೆಯಲ್ಲಿ ಜನರಿಲ್ಲ : ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಜನ ಸಂಚಾರ ವಿರಳವಾಗಿದೆ. ಅಲ್ಪಸ್ವಲ್ಪ ಜನರು ಮಾತ್ರ ಬಸ್‌ ಗಳಲ್ಲಿ ಸಂಚಾರ ಮಾಡುತ್ತಿದ್ದಾರೆ. ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ ಸಹ ಇದರಿಂದ ಹೊಡೆತ ಬಿದ್ದಿದೆ. ಹೋಟೆಲ್‌, ಲಾಡ್ಜ್ಗಳಿಗೆ ಪ್ರವಾಸಿಗರು ಬರುವುದು ನಿಂತಿರುವ ಕಾರಣ ಜನ ಸಂಚಾರ ನಗರಗಳಲ್ಲಿ ವಿರಳವಾಗಿದೆ. ನಗರದ ನಿವಾಸಿಗಳು ಸಹ ಅಗತ್ಯ ವಸ್ತುಗಳನ್ನು ಖರೀದಿಸಲು ಮಾತ್ರ ಹೊರಗೆ ಬರುತ್ತಿದ್ದಾರೆ. ಬಿಟ್ಟರೆ ಬಹುತೇಕ ಜನರು ಮನೆಯಲ್ಲಿ ಕುಳಿತು ಆರೋಗ್ಯ ಎಮರ್ಜನ್ಸಿ ಎಂದು ಮಾತಾಡಿಕೊಳ್ಳತೊಡಗಿದ್ದಾರೆ.

ವಿದೇಶಿ ಪ್ರವಾಸಿಗರು ಮತ್ತು ಪ್ರವಾಸಿಗರು ಜಿಲ್ಲೆಗೆ ಬರದಂತೆ ಕಟ್ಟೆಚ್ಚರ ವಹಿಸಲಾಗಿದೆ. ಕೋವಿಡ್‌ -19 ಕ್ರೆಸಸ್‌ ಸಮಸ್ಯೆಯ ದಿನಗಳಲ್ಲಿ ಔಷಧಿ ಅಂಗಡಿಯವರು ಮಾನವೀಯತೆ ಮತ್ತು ಸಿದ್ಧಾಂತದ ಮೇಲೆ ನಡೆದುಕೊಳ್ಳುವಂತೆ ಸೂಚಿಸಲಾಗಿದೆ.  –ಡಾ| ಹರೀಶ್‌ ಕುಮಾರ್‌, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.