ಅಕಾಲಿಕ ಮಳೆಗೆ ಬೆಳೆ ಹಾನಿ-ಆತಂಕ

ತಾಲೂಕಿನಾದ್ಯಂತ ಸಮೀಕ್ಷೆ ನಡೆಸಿದ ದಾಖಲೆಗಳು ನಮ್ಮ ಬಳಿ ಇವೆ.

Team Udayavani, Dec 3, 2021, 6:01 PM IST

ಅಕಾಲಿಕ ಮಳೆಗೆ ಬೆಳೆ ಹಾನಿ -ಆತಂಕ

ಮುಂಡಗೋಡ: ಅಕಾಲಿಕ ಮಳೆಯಿಂದಾಗಿ ತಾಲೂಕಿನಲ್ಲಿ ಬೆಳೆ ಹಾನಿ ಅನುಭವಿಸಿದ್ದು ಎಲ್ಲ ರೈತರಿಗೂ ಬೆಳೆವಿಮೆ ಸಿಗುವಂತಾಗಬೇಕು ಬೆಳೆಹಾನಿ ಸಮೀಕ್ಷೆಯನ್ನು ನ್ಯಾಯಯುತವಾಗಿ ಮಾಡಬೇಕು ಎಂದು ರಾಜ್ಯ ರೈತ ಸಂಘ ಹಸಿರು ಸೇನೆ ಮತ್ತು ಬಾಚಣಕಿ ಗ್ರಾಪಂ ವ್ಯಾಪ್ತಿಯ ರೈತರು ತಹಶೀಲ್ದಾರ್‌ ಶ್ರೀಧರ ಮುಂದಲಮನಿಗೆ ತ್ತಾಯಿಸಿದರು.

ಕಳೆದ ವಾರ ಸುರಿದ ಧಾರಾಕಾರ ಮಳೆಗೆ ರೈತರ ಭತ್ತದ ಬೆಳೆ ಹಾನಿಯಾಗಿದ್ದು ನಂತರ ಬಿಸಿಲಿನ ವಾತಾವರಣ ನಿರ್ಮಾಣವಾಗಿತ್ತು. ಈ ವೇಳೆ ಗದ್ದೆಯಲ್ಲಿದ್ದ ಭತ್ತ ಹಾಗೂ ಗೋವಿನಜೋಳದ ಬೆಳೆಯನ್ನು ರೈತರು ಗದ್ದೆಯಿಂದ ಹೊರಗಡೆ ತಂದು ಹಾಕಿ ಒಕ್ಕಲು ಮಾಡಿಕೊಂಡಿದ್ದಾರೆ. ಬಹುತೇಕ ರೈತರ ಭತ್ತ ಹಾಗೂ ಗೋವಿನಜೋಳ ಮೊಳಕೆಯೊಡೆದು ಹಾಳಾಗಿವೆ. ಆದರೆ ಇದೀಗ ಬೆಳೆವಿಮೆ ಕಂಪನಿ ಪ್ರತಿನಿಧಿಗಳು ಬೆಳೆಹಾನಿ ಪರಿಶೀಲಿಸುತ್ತೆವೆ ಎಂದು ಗದ್ದೆಗೆ ಬರುತ್ತಿದ್ದಾರೆ. ಆದರೆ ಗದ್ದೆಯಲ್ಲಿ ಸದ್ಯ ಯಾವುದೆ ಬೆಳೆಯಿಲ್ಲ. ಗದ್ದೆಯಲ್ಲಿ ಬೆಳೆಯಿಲ್ಲದಿದ್ದರೆ ವಿಮೆ ನೀಡಲು ಬರುವುದಿಲ್ಲ ಎಂದು ವಿಮಾ ಕಂಪನಿ ಪ್ರತಿನಿಧಿಗಳು ಹೇಳುತ್ತಿದ್ದಾರೆ.

ಬೆಳ ವಿಮೆಗೆ ಅರ್ಜಿ ಸಲ್ಲಿಸಿದ ಕೆಲವು ರೈತರ ಹೆಸರುಗಳಿಲ್ಲ. ಅಪಾರ ಪ್ರಮಾಣದ ಹಾನಿ ಅನುಭವಿಸಿರುವ ರೈತರಿಗೆ ಬೆಳೆವಿಮೆ ಸಿಗದಿದ್ದರೆ ಅನ್ಯಾಯವಾಗುತ್ತದೆ. ಆದ್ದರಿಂದ ಸೂಕ್ತ ಬೆಳೆವಿಮೆ ನೀಡುವ ಕ್ರಮವಾಗಬೇಕು ಎಂದು ತಮ್ಮ ಅಳಲನ್ನು ತೋಡಿಕೊಂಡರು.

ತಹಶೀಲ್ದಾರ್‌ ಶ್ರೀಧರ ಮುಂದಲಮನಿ ಮಾತನಾಡಿ, ಮಳೆಯಿಂದ ಯಾವ-ಯಾವ ರೈತರ ಬೆಳೆ ಹಾನಿಯಾದ ಬಗ್ಗೆ ಕಂದಾಯ, ಕೃಷಿ ಮತ್ತು ತೋಟಗಾರಿಕೆ ಇಲಾಖೆಯವರು ಜಂಟಿಯಾಗಿ ತಾಲೂಕಿನಾದ್ಯಂತ ಸಮೀಕ್ಷೆ ನಡೆಸಿದ ದಾಖಲೆಗಳು ನಮ್ಮ ಬಳಿ ಇವೆ. ವಿಮಾ ಕಂಪನಿಯವರು ಪರಿಶೀಲನೆಗೆ ಬಂದಾಗ ರೈತರು ಸಹಕಾರ ನೀಡಬೇಕು. ಬೆಳೆ ಹಾನಿಯಾಗದಿದ್ದರೂ ಕೆಲವು ರೈತರು ಬೆಳೆವಿಮೆಗೆ ಅರ್ಜಿ ಸಲ್ಲಿಸಿದ್ದಾರೆ. ಇದರಿಂದ ನಿಜವಾಗಿ ಬೆಳೆ ಹಾನಿ ಅನುಭವಿಸಿದ ರೈತರಿಗೆ ತೊಂದರೆಯಾಗುತ್ತದೆ.

ಬೆಳೆ ಹಾನಿಯಾದ ರೈತರಿಗೆ ಯಾವುದೆ ರೀತಿಯ ಅನ್ಯಾಯವಾಗದಂತೆ ಬೆಳೆವಿಮೆ ಕೊಡಿಸಲು ಪ್ರಯತ್ನಿಸುತ್ತೇವೆ. ತಾಲೂಕಿನಲ್ಲಿ ಅಂದಾಜು 250-300 ಎಕರೆಯಷ್ಟು ಬೆಳೆ ಹಾನಿಯಾಗಿದೆ. ಆದರೆ ಬೆಳೆ ವಿಮೆ ನೀಡುವುದಾಗಿ ಘೋಷಿಸಿದ ನಂತರ ಸುಮಾರು 3000-4000 ಹೆಕ್ಟೇರ್‌ ಪ್ರದೇಶದಷ್ಟು ಬೆಳೆ ಹಾನಿಯಾದ ಬಗ್ಗೆ ರೈತರು ವಿಮೆಗೆ ಅರ್ಜಿ ಸಲ್ಲಿಸಿದ್ದಾರೆ. ಇದರಿಂದ ನಿಜವಾಗಿ ಹಾನಿಯಾದ ರೈತರಿಗೆ ಅನ್ಯಾಯವಾದಂತಾಗುತ್ತದೆ. ಯಾವ ರೈತರಿಗೂ ಅನ್ಯಾಯವಾಗದಂತೆ ಬೆಳೆ ವಿಮೆ ನೀಡುವುದಾಗಿ ಭರವಸೆ ನೀಡಿದರು.

ಸಹಾಯಕ ಕೃಷಿ ನಿರ್ದೇಶಕ ಎಂ.ಎಸ್‌. ಕುಲಕರ್ಣಿ, ರೈತ ಸಂಘದ ತಾಲೂಕು ಅಧ್ಯಕ್ಷ ಪೀರಪ್ಪ ಸಾಗರ, ನಿಂಗಪ್ಪ ಕುರುಬರ, ಹನುಮಂತಪ್ಪ ಯಲ್ಲಾಪುರ, ನಿಂಗಪ್ಪ ಗೋಣೇನವರ, ಮಲ್ಲಪ್ಪ ಶೆಲ್ವಡಿ, ಶೇಖಪ್ಪ ಹೊತಗಣ್ಣವರ, ಗಣೇಶ ಶೇಟ್‌, ಮಲ್ಲಪ್ಪ ಕುಸೂರ, ಅಬ್ದುಲ್‌ ರಜಾಕ್‌ ಮುಲ್ಲಾನವರ ಮತ್ತು ವಿಮಾ ಕಂಪನಿಯ ಪ್ರತಿನಿಧಿ ಪಿಶಪ್ಪ ಕೊರವರ ಇದ್ದರು.

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.