ಮೂರು ವರ್ಷಗಳಿಂದ ನೀಡಿಲ್ಲ ಬೆಳೆ ಸಾಲ


Team Udayavani, Jul 23, 2019, 11:02 AM IST

uk-tdy-3

ಕುಮಟಾ: ಬರಗದ್ದೆ ಗ್ರಾಮೀಣ ಸೇವಾ ಸಹಕಾರಿ ಸಂಘದ ಕಾರ್ಯವೈಖರಿ ಬಗ್ಗೆ ರೈತರು ಆಕ್ರೋಶ ವ್ಯಕ್ತಪಡಿಸಿದರು.

ಕುಮಟಾ: ಹಿಂದಿನ ಸಿಎಂ ಸಿದ್ದರಾಮಯ್ಯ ಸರ್ಕಾರದ ಸಾಲಮನ್ನಾ ಪ್ರಯೋಜನ ಇನ್ನೂ ಬಂದಿಲ್ಲ. ಕಳೆದ ಮೂರು ವರ್ಷದಿಂದ ರೈತರಿಗೆ ಬೆಳೆ ಸಾಲ ಸಿಗಲಿಲ್ಲ. ಸೇವಾ ಸಹಕಾರಿ ಸಂಘ ರೈತರಿಗೆ ಸೌಲಭ್ಯದಿಂದ ವಂಚಿಸುತ್ತಿದೆ. ಅದಲ್ಲದೇ, ಸೇವಾ ಸಹಕಾರಿ ಸಂಘದ ಕಾರ್ಯದರ್ಶಿ ಕೆಲವು ಸಂಶಯಾಸ್ಪದ ನಡೆತೆ ಕುರಿತು ಆರೋಪಿಸಿ ಬರಗದ್ದೆ ಸೇವಾ ಸಹಕಾರಿ ಸಂಘದಲ್ಲಿ ನಡೆದ ಸಭೆಯಲ್ಲಿ ರೈತರು, ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

ಬರಗದ್ದೆ ಗ್ರಾಮೀಣ ಸೇವಾ ಸಹಕಾರಿ ಸಂಘ ಕಳೆದ 3 ವರ್ಷಗಳಿಂದ ಬೆಳೆಸಾಲ ನೀಡದೆ ರೈತರಿಗೆ ವಂಚಿಸಿದೆ. 2017ರಲ್ಲಿ ಸಿದ್ದರಾಮಯ್ಯ ಸರ್ಕಾರ ಘೋಷಿಸಿದ್ದ 50,000 ರೂ. ಸಾಲಮನ್ನಾವನ್ನು ಸರ್ಕಾರ ಸಂಪೂರ್ಣವಾಗಿ ನೀಡಿದೆ. ಆದರೆ ಈ ಸಂಘ ಈವರೆಗೂ ಸದಸ್ಯರ ಖಾತೆಗೆ ಹಾಕಿಲ್ಲ. ಅಲ್ಲದೆ ರೈತರಿಗೆ ಸಾಲ ಚುಕ್ತಾ ಪ್ರಮಾಣ ಪತ್ರ ನೀಡಿಲ್ಲ ಎಂದು ಸಹಕಾರಿ ಸಂಘದ ಕಾರ್ಯದರ್ಶಿ ವಿರುದ್ಧ ಜನ ತೀವ್ರ ವಾಗ್ಧಾಳಿ ನಡೆಸಿದರು.

ಕೆಡಿಸಿಸಿ ಬ್ಯಾಂಕ್‌ ಕುಮಟಾ ಶಾಖೆ ಸಿಬ್ಬಂದಿ ಹಾಗೂ ಬರಗದ್ದೆ ಸೇವಾ ಸಹಕಾರಿ ಸಂಘದ ಕಾರ್ಯದರ್ಶಿ ಇಲ್ಲಿನ 200ಕ್ಕೂ ಅಧಿಕ ರೈತರಿಗೆ ವಿತ್‌ಡ್ರಾವಲ್ ಚೆಕ್ಕಿಗೆ ಮೊತ್ತ ನಮೂದಿಸಿದೇ ಸಹಿ ಪಡೆದುಕೊಂಡಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಅದರಲ್ಲೂ ಕೆಲವರ ಮನೆಮನೆಗೆ ತೆರಳಿ ಸಹಿ ಪಡೆದುಕೊಂಡಿದ್ದಾರೆ ಎಂಬ ಮಾತೂ ಕೇಳಿಬಂದಿದೆ. ನಿಯಮ ಉಲ್ಲಂಘಿಸಿ ಬ್ಯಾಂಕ್‌ ಸಹಕಾರಿ ಸಂಘದ ಕಾರ್ಯದರ್ಶಿ ಮೂಲಕ ಸಹಿ ಪಡೆದಿರುವುದು ಭಾರೀ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಹೀಗಾಗಿ ಸೇವಾ ಸಹಕಾರಿ ಸಂಘದ ಕಾರ್ಯವೈಖರಿ ಬಗ್ಗೆ ರೈತರು ಸಂಶಯ ವ್ಯಕ್ತಪಡಿಸಿದರಲ್ಲದೇ, ಭಾರಿ ಅವ್ಯವಹಾರ ನಡೆದಿರುವ ಬಗ್ಗೆ ಶಂಕೆಯನ್ನೂ ವ್ಯಕ್ತಪಡಿಸಿದ್ದಾರೆ.

ಸಿಎಂ ಕುಮಾರಸ್ವಾಮಿ ರೈತರ 1 ಲಕ್ಷದ ವರೆಗಿನ ಸಾಲಮನ್ನಾ ಮಾಡಿದ್ದರು. ಆದರೆ 35 ರಿಂದ 41 ಸಾವಿರ ರೂ. ಸಾಲ ಪಡೆದ ರೈತರ ಖಾತೆಗೂ 1 ಲಕ್ಷ ರೂ. ಸಾಲಮನ್ನಾ ಮಾಡಿಸಿ ಕಾರ್ಯದರ್ಶಿ ಅಕ್ರಮ ಎಸಗಿದ್ದಾರೆ. ಅದಲ್ಲದೇ, ಕೆಲವರ ವಿತ್‌ಡ್ರಾವಲ್ ಚೆಕ್ಕಿನ ಮೊತ್ತವನ್ನು ಡ್ರಾ ಮಾಡಲಾಗಿದೆ. ಆದರೆ ರೈತರಿಗೆ ಯಾವ ಮೊತ್ತವನ್ನೂ ನಿಡಿಲ್ಲ ಎಂದು ಹಲವು ರೈತರು ದೂರಿದ್ದಾರೆ.

ಸೇವಾ ಸಹಕಾರಿ ಸಂಘದಲ್ಲಿ ವ್ಯವಹಾರ ನಡೆಸುತ್ತಿರುವ ಗೀತಾ ಶಾಸ್ತ್ರಿ, ಗಣಪತಿ, ಎನ್‌.ಎಸ್‌ ಹೆಗಡೆ ಮೊದಲಾದವರು ಮಾತನಾಡಿ, ರೈತರು ಪಡೆದ ಸಾಲಕ್ಕಿಂತ ಹೆಚ್ಚಿನ ಮೊತ್ತ ಅವರ ಖಾತೆಗೆ ಜಮಾ ಆಗಿದೆ. ಆದರೆ ಆ ಹಣ ಯಾರಿಗೆ ಸೇರಿತು. ಅದರ ಪ್ರಯೋಜನ ಯಾರು ಪಡೆದರು ಎಂದು ಪ್ರಶ್ನಿಸಿದರು. ಬ್ಯಾಂಕಿಗೆ ಅಥವಾ ಸೇವಾ ಸಹಕಾರಿ ಸಂಘಗಳಿಗೆ ಪ್ರತಿಯೊಬ್ಬ ರೈತನ ಮನೆ ಮನೆಗೆ ತೆರಳಿ ವಿತ್‌ಡ್ರಾವಲ್ ಚೆಕ್‌ ಒಯ್ಯಲು ನಿಯಮದಲ್ಲಿ ಅವಕಾಶ ಇರುವ ಬಗ್ಗೆ ಪ್ರಶ್ನಿಸಿದರು.

ಕುಮಟಾ ಕೆಡಿಸಿಸಿ ಬ್ಯಾಂಕ್‌ ಮ್ಯಾನೇಜರ್‌ ಮತ್ತು ಸುಪರ್ವೈಸರ್‌ ಸಮರ್ಪಕವಾಗಿ ಉತ್ತರಿಸಿಲ್ಲ. ಅಲ್ಲದೆ ಬ್ಯಾಂಕ್‌ ಸಿಬ್ಬಂದಿ ಸಹ ಈ ಕೆಲಸಕ್ಕೆ ಅಣಿಯಾಗಿರುವ ಬಗ್ಗೆ ಸಹ ಅವರು ಸ್ಪಷ್ಟನೆ ನೀಡಿಲ್ಲ. ಹೀಗಾಗಿ ಕೆಡಿಸಿಸಿ ಬ್ಯಾಂಕ್‌ ಅಧೀನದಲ್ಲಿ ನಡೆಯುವ ಸೇವಾ ಸಹಕಾರಿ ಸಂಘಗಳ ಸಂಪೂರ್ಣ ವ್ಯವಹಾರ ಮೇಲುಸ್ತುವಾರಿಯಲ್ಲಿ ನಡೆಯುತ್ತದೆ. ಹೀಗಿರುವಾಗ ಸೇವಾ ಸಹಕಾರಿ ಸಂಘದಲ್ಲಿ ಇಷ್ಟೊಂದು ಪ್ರಮಾದಗಳು ನಡೆಯುತ್ತಿದ್ದರೂ ಕೆಡಿಸಿಸಿ ಬ್ಯಾಂಕ್‌ ಮೌನ ತಾಳಿರುವುದು ಸಂಶಯಕ್ಕೆ ಕಾರಣವಾಗಿದೆ.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.