ಹಸನ್ಮಾಳದ ಗೌಳಿವಾಡದಲ್ಲಿ ಸಂಭ್ರಮದಿಂದ ಜರುಗಿದ ದನಗರ ಗೌಳಿಗರ ಶಿಲಾಂಗಣ
Team Udayavani, Nov 7, 2021, 5:41 PM IST
ದಾಂಡೇಲಿ: ಹಿಂದು ಧರ್ಮದ ಹಬ್ಬ ಹರಿದಿನಗಳನ್ನು ತಮ್ಮದೇ ಆದ ಸಂಸ್ಕೃತಿಯಡಿಯಲ್ಲಿ ಆಚರಿಸಿಕೊಂಡು ನಾಡಿನ ಸಾಂಸ್ಕೃತಿಕ ಲೋಕಕ್ಕೆ ತನ್ನದೇ ಆದ ಕೊಡುಗೆ ನೀಡುತ್ತಿರುವ ದನಗರ ಗೌಳಿ ಸಮುದಾಯವು ದೀಪಾವಳಿ ಹಬ್ಬದ ನಿಮಿತ್ತ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುವುದನ್ನು ರೂಢಿ ಮಾಡಿಕೊಂಡಿದೆ.
ಅಂತೆಯೆ ನಗರದ ಸಮೀಪದಲ್ಲಿರುವ ಹಸನ್ಮಾಳದ ಗೌಳಿವಾಡದಲ್ಲಿ ವಾಡದಲ್ಲಿರುವ ಎಲ್ಲ ಗೌಳಿ ಸಮುದಾಯವರು ಸೇರಿ ಸಾಮೂಹಿಕವಾಗಿ ಶಿಲಾಂಗಣ ಕಾರ್ಯಕ್ರಮವನ್ನು ಶುಕ್ರವಾರದಿಂದ ಆರಂಭಿಸಿ ಭಾನುವಾರ ಸಂಪನ್ನಗೊಳಿಸಿದರು. ಈ ಕಾರ್ಯಕ್ರಮದಲ್ಲಿ ದನಗರ ಗೌಳಿ ಸಮುದಾಯದವರ ಬುಡಕಟ್ಟು ಸಂಸ್ಕತಿಯ ನೃತ್ಯಗಳು ಎಲ್ಲರ ಗಮನ ಸೆಳೆದವು. ತಮ್ಮದೇ ವಿಶಿಷ್ಟ ಸಂಸ್ಕೃತಿಯ ಉಡುಗೆಯನ್ನು ತೊಟ್ಟು ನೃತ್ಯ ಹಾಗೂ ವಿವಿಧ ಧಾರ್ಮಿಕ ಮೌಲ್ಯಗಳನ್ನು ಜನಮಾನಸಕ್ಕೆ ಪರಿಚಯಿಸುವ ಕಾರ್ಯಕ್ರಮಗಳು ಜನಾಕರ್ಷಣೆಗೆ ಪಾತ್ರವಾಯಿತು.
ದನಗರ ಗೌಳಿ ಸಮುದಾಯದ ವಿಶಿಷ್ಟ ರೀತಿಯ ಶಿಲಾಂಗಣ ಕಾರ್ಯಕ್ರಮವನ್ನು ನೋಡಲು ಸುತ್ತಮುತ್ತಲಿನ ಜನರು ಆಗಮಿಸಿದ್ದರು. ಈ ಪೂಜಾ ಕಾರ್ಯಕ್ರಮದ ನಿಮಿತ್ತ ಸಾರ್ವಜನಿಕ ಅನ್ನಸಂತರ್ಪಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಯಶಸ್ಸಿಗೆ ದನಗರ ಗೌಳಿ ಸಮುದಾಯದ ಬಾಂಧವರು ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ