ಭಾರೀ ಬಿರುಗಾಳಿ-ಮಳೆಗೆ ಹಾನಿ
Damage to heavy storm-rain
Team Udayavani, Apr 28, 2019, 3:57 PM IST
ಹಳಿಯಾಳ: ಭಾರೀ ಬಿರುಗಾಳಿಗೆ ವಿದ್ಯುತ್ ಕಂಬ ಮುರಿದು ಬಿದ್ದಿದೆ.
ಹಳಿಯಾಳ: ಹಳಿಯಾಳದಲ್ಲಿ ಶನಿವಾರ ಮಧ್ಯಾಹ್ನ ಭಾರೀ ಬಿರುಗಾಳಿ, ಗುಡುಗು, ಮಿಂಚಿನೊಂದಿಗೆ ಧೋ ಎಂದು ವರ್ಷ ಧಾರೆಯಾಗಿದ್ದು ಅಪಾರ ಹಾನಿ ಸಂಭವಿಸಿದೆ.
ಹಳಿಯಾಳ ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗದಲ್ಲಿ ಎರಡು ಗಂಟೆಗೂ ಹೆಚ್ಚು ಕಾಲ ಭಾರೀ ಬಿರುಗಾಳಿಯಿಂದ ಕೂಡಿ ಸುರಿದ ಮಳೆಗೆ ಲಕ್ಷಾಂತರ ರೂ. ಆಸ್ತಿ ಪಾಸ್ತಿ ಹಾನಿ ಸಂಭವಿಸಿದೆ.
ಪಟ್ಟಣದ ಅಂಚಿನ ಹಲವೆಡೆ ಹೆದ್ದಾರಿಗಳಲ್ಲಿ ಹಾಗೂ ಗ್ರಾಮಾಂತರ ಭಾಗದಲ್ಲಿ ಗಿಡ ಮರಗಳು, ವಿದ್ಯುತ್ ಕಂಬಗಳು ಧರಾಶಾಹಿಯಾಗಿದ್ದು ಅಪಾರ ಹಾನಿ ಸಂಭವಿಸಿದೆ.ವಿದ್ಯುತ್ ಕಂಬಗಳು ಮುರಿದು ಬಿದ್ದಿರುವುದರಿಂದ ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.
ಈ ಹಿಂದೆ ಭಾರೀ ಬಿರುಗಾಳಿಗೆ ಸಿಲುಕಿ ಮಾವಿನ ಬೆಳೆ ಹಾನಿಗೊಳಗಾಗಿತ್ತು. ಅದಲ್ಲದೆ ಶನಿವಾರ ಭಾರೀ ಬಿರುಗಾಳಿಯೊಂದಿಗೆ ಸುರಿದ ಮಳೆಗೆ ಕೊಟ್ಯಂತರ ರೂ. ಮಾವಿನ ಬೆಳೆ ಹಾನಿಗೀಡಾಗಿದೆ.
ತಾಲೂಕಿನ ಭಾಗವತಿ ಗ್ರಾಮದಲ್ಲಿ ಮರಗಳು ವಾಹನಗಳ ಮೇಲೆ ಬಿದ್ದು ವಾಹನಗಳು ಜಖಂಗೊಂಡಿವೆ. ಇದಷ್ಟೇ ಅಲ್ಲದೆ ಇನ್ನೂ ಹಲವೆಡೆ ಭಾರೀ ಬಿರುಗಾಳಿಗೆ ಮನೆಯ ಛಾವಣಿಗಳು ಹಂಚುಗಳು ಹಾರಿಹೋಗಿ ಅಪಾರ ಪ್ರಮಾಣದ ಹಾನಿ ಸಂಭವಿಸಿ ಜನಜೀವನ ಅಸ್ತವ್ಯಸ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು