ಹದಗೆಟ್ಟ ಜೋಗೇಶ್ವರ ರಸ್ತೆ: ವಾಹನ ಸವಾರರ ಪರದಾಟ
Team Udayavani, Mar 2, 2020, 4:45 PM IST
ಮುಂಡಗೋಡ: ತಾಲೂಕಿನ ಸಾಲಗಾಂವ ಗ್ರಾಪಂ ವ್ಯಾಪ್ತಿಯ ಜೋಗೇಶ್ವರ ಗೌಳಿದಡ್ಡಿ ಗ್ರಾಮಕ್ಕೆ ತೆರಳುವ ರಸ್ತೆ ಸಂಪೂರ್ಣ ಹಾಳಾಗಿದ್ದು, ಇದರಿಂದ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುವಂತಾಗಿದೆ.
ಇಪ್ಪತ್ತಕ್ಕೂ ಅಧಿಕ ಮನೆಗಳಿರುವ ಈ ಜೋಗೇಶ್ವರಹಳ್ಳ ಎಂಬ ಪುಟ್ಟ ಗ್ರಾಮದಲ್ಲಿ ಗೌಳಿಸಮುದಾಯದ ಜನರು ವಾಸವಾಗಿದ್ದಾರೆ. ನೂರಕ್ಕೂ ಅಧಿಕ ಜನಸಂಖ್ಯೆಯಿರುವ ಈ ಗ್ರಾಮವೂ ತಾಲೂಕು ಕೇಂದ್ರದಿಂದ 6 ಕಿಮೀ ದೂರದಲ್ಲಿದೆ. ಹಳೆಕರಗಿನಕೋಪ್ಪದಿಂದ ಜೋಗೆಶ್ವರಹಳ್ಳ ಗ್ರಾಮ ಮೂರು ಕಿಮೀ ಅಂತರದಲ್ಲಿದ್ದು, ಈ ರಸ್ತೆಯೂ ಸಂಪೂರ್ಣ ಹಾಳಾಗಿದೆ. ರಸ್ತೆಯ ತುಂಬೆಲ್ಲ ಕಲ್ಲುಗಳು ತುಂಬಿದ್ದು, ಇದರಿಂದ ಪಾದಚಾರಿಗಳು ಹಾಗೂ ವಾಹನ ಸವಾರರು ಈ ರಸ್ತೆಯಲ್ಲಿ ಸಂಚರಿಸಲು ಹರಸಾಹಸ ಪಡಬೇಕಾದ ಅನಿವಾರ್ಯತೆ ಎದುರಾಗಿದೆ.
ರಸ್ತೆ ತುಂಬಾ ಕಲ್ಲುಗಳಿರುವುದರಿಂದ ಬೈಕ್ ಸವಾರರು ನಿಯಂತ್ರಣ ತಪ್ಪಿ ಬಿದ್ದು ಗಾಯಗೊಳ್ಳುತ್ತಿದ್ದಾರೆ. ಬೈಕ್ ಚಲಾಯಿಸುವಾಗ ಸ್ವಲ್ಪ ನಿರ್ಲಕ್ಷ್ಯ ವಹಿಸಿದರು ಸಹ ಬಿಳ್ಳುವುದು ಖಚಿತ ಇನ್ನೂ ರಾತ್ರಿ ವೇಳೆ ಸಂಚರಿಸುವ ಬೈಕ್ ಸವಾರರು ಹಲವಾರು ಬಾರಿ ಬಿದ್ದು ಗಾಯ ನೂವು ಪಡಿಸಿಕೊಂಡಿದ್ದಾರೆ. ಹಳೆಕರಗಿನಕೋಪ್ಪ ಗ್ರಾಮದಿಂದ ನಮ್ಮ ಜೋಗೇಶ್ವರಹಳ್ಳ ಗ್ರಾಮದ ವರೆಗೆ ಸಂಪೂರ್ಣ ರಸ್ತೆ ಹಾಳಾಗಿದೆ ಈ ರಸ್ತೆಯಲ್ಲಿ ಸಂಚರಿಸಲು ತೀವ್ರತೊಂದರೆ ಅನುಭವಿಸುತ್ತಿದ್ದೇವೆ. ಆದ್ದರಿಂದ ಕೂಡಲೆ ನಮಗೆ ರಸ್ತೆ ಡಾಂಬರೀಕರಣ ಮಾಡಿ ಕೊಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ರಸ್ತೆ ಹಾಳಾಗಿರುವ ಕುರಿತು ಸಾರ್ವಜನಿಕರು ಸಚಿವ ಶಿವರಾಮ ಹೆಬ್ಟಾರ ಅವರ ಗಮನಕ್ಕೆ ತಂದಿದ್ದು ತಾಲೂಕಿನ ಎಲ್ಲ ಗೌಳಿದಡ್ಡಿ ಗ್ರಾಮಗಳ ರಸ್ತೆಯನ್ನು ನಿರ್ಮಿಸುತ್ತಿದ್ದು ಈ ರಸ್ತೆ ನಿಮಾಣಕ್ಕೂ ಸಹ ಸದ್ಯದಲ್ಲಿಯೆ ಸರಕಾರದಿಂದ ಅನುದಾನ ಬಿಡುಗಡೆ ಮಾಡಿಸಿ ರಸ್ತೆ ನಿರ್ಮಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್
ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ
Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್
Google Map: ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ಪರದಾಡಿದ ವಾಹನ ಸವಾರರು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ