Dandeli: ಜಿಂಕೆ ಬೇಟೆ; ಇಬ್ಬರು ಆರೋಪಿಗಳ ಬಂಧನ
ಪೊಲೀಸ್ ಅರಣ್ಯ ಸಂಚಾರಿ ದಳದ ಕಾರ್ಯಾಚರಣೆ
Team Udayavani, Mar 15, 2024, 6:55 PM IST
ದಾಂಡೇಲಿ: ಹಳಿಯಾಳದ ರಾಮಾಪುರದ ಮೊದಲಗೇರಾದಲ್ಲಿ ಜಿಂಕೆಯನ್ನು ಬೇಟೆಯಾಡಿ ಮಾಂಸವನ್ನು ಹಂಚಿಕೊಳ್ಳುತ್ತಿರುವ ಸಂಧರ್ಭದಲ್ಲಿ ಅರಣ್ಯ ಸಂಚಾರಿ ಪೊಲೀಸರ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ ಘಟನೆ ನಡೆದಿದೆ.
ಬಂಧಿತ ಆರೋಪಿಗಳಾದ ಮೊದಲಗೇರಾ ನಿವಾಸಿಗಳಾದ ಪರಶುರಾಮ ಶಿವಾಜಿ ಕೊಡಗೇಕರ (37 ) ಹಾಗೂ ಸುನೀಲ ಮಾವಳು ತುಫಾರಿ (31) ಇವರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯಿದೆ 1972 ಹಾಗೂ ಭಾರತಿಯ ಆಯುಧ ಕಾಯ್ದೆ 1959ರ ಅನ್ವಯ ಪ್ರಕರಣ ದಾಖಲಾಗಿದೆ.
ಬಂಧಿತರಿಂದ ಒಂಟಿ ನಳಿಕೆಯ ನಾಡ ಬಂದೂಕು, ಕಟ್ಟಿಗೆಯ ಹಿಡಿಕೆ ಇರುವ ಕಬ್ಬಿಣದ ಸಣ್ಣ ಕೈ ಕೊಡ ಹಾಗೂ ದೊಡ್ಡ ಗಾತ್ರದ ಕಬ್ಬಿಣದ ಕೊಡಲಿ, ಮೂರು ಮಾಂಸಗಳಿರುವ ಪ್ಲಾಸ್ಟಿಕ್ ಬ್ಯಾಗ್ಗಳು 7.940 ಕೆ.ಜಿ.ಮಾಂಸ ಹಾಗೂ ಜಿಂಕೆಯ ತಲೆಬುರುಡೆಯನ್ನು ವಶಪಡಿಸಿಕೊಂಡಿದ್ದಾರೆ.
ಯಾವುದೇ ಪಾಸ್ ಪರವಾನಗಿ ಪಡೆದುಕೊಳ್ಳದೇ ಅಕ್ರಮವಾಗಿ ನಾಡಬಂದೂಕನ್ನು ಶಿಕಾರಿ ಮಾಡುವ ಉದ್ದೇಶದಿಂದ ತಮ್ಮ ತಾಬಾದಲ್ಲಿ ಇಟ್ಟುಕೊಂಡು ವನ್ಯಪ್ರಾಣಿಯಾದ ಜಿಂಕೆಯನ್ನು ಬೇಟೆಯಾಡಿ ತಲೆಯ ಭಾಗವನ್ನುಸುಟ್ಟು ಹಾಗೂ ಇನ್ನುಳಿದ ಮಾಂಸವನ್ನು ಕತ್ತರಿಸಿ ಸಮವಾಗಿ ಹಂಚಿಕೊಳ್ಳಬೇಕೆಂದು ಕತ್ತರಿಸುತ್ತಿರುವಾಗ ಈ ದಾಳಿಯನ್ನು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ದಾಂಡೇಲಿ ನಗರದಲ್ಲಿರುವ ಪೊಲೀಸ್ ಅರಣ್ಯ ಸಂಚಾರಿ ದಳದ ಕಾರ್ಯಾಲಯದಲ್ಲಿ ಪೊಲೀಸ್ ಅರಣ್ಯ ಸಂಚಾರಿ ದಳದ ಪಿಎಸ್ಐ ಕಿರಣ್ ಪಾಟೀಲ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಪೊಲೀಸ್ ಸಿಬ್ಬಂದಿಗಳಾದ ಮುಲ್ಲಾ, ಚಂದ್ರಶೇಖರ, ಪ್ರಶಾಂತ, ಭಾನು ಕಾಂತ,ಗಜಾನನ , ಮಂಜುನಾಥ ಇವರುಗಳು ಕಾರ್ಯಾಚರಣೆಯಲ್ಲಿ ಸಹಕರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ