ಮಗುವಿನ ಮೇಲೆ ನಡೆದ ಲೈಂಗಿಕ ದೌರ್ಜನ್ಯಕ್ಕೆ ಜನವಾದಿ ಮಹಿಳಾ ಸಂಘದಿಂದ ಖಂಡನೆ
Team Udayavani, Sep 19, 2021, 7:21 PM IST
ದಾಂಡೇಲಿ : ನಗರದಲ್ಲಿ ಮೂರುವರೆ ವರ್ಷದ ಹೆಣ್ಣು ಮಗುವಿನ ಮೇಲೆ ನಡೆದ ಲೈಂಗಿಕ ದೌರ್ಜನ್ಯವನ್ನು ನಗರದ ಜನವಾದಿ ಮಹಿಳಾ ಸಂಘಟನೆಯ ಅಧ್ಯಕ್ಷೆ ಹಾಗೂ ಯುವ ನ್ಯಾಯವಾದಿ ರತ್ನದೀಪಾ.ಎಂ ಅವರು ಉಗ್ರವಾಗಿ ಖಂಡಿಸಿದ್ದಾರೆ.
ಇದನ್ನೂ ಓದಿ:ಕೇಂದ್ರೀಯ ವಿದ್ಯಾಲಯದ ಸನಿಹ ಪ್ರತ್ಯಕ್ಷವಾದ ಚಿರತೆ
ಅವರು ಈ ಬಗ್ಗೆ ಮಾಧ್ಯಮಕ್ಕೆ ನೀಡಿದ ಪ್ರತಿಕ್ರಿಯೆಯಲ್ಲಿ ಇತ್ತೀಚಿನ ದಿನಗಳಲ್ಲಿ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರಗಳು ಹೆಚುತ್ತಲಿವೆ. ಇದನ್ನು ಯಾವ ಕಾರಣಕ್ಕೂ ಸಹಿಸುವುದಿಲ್ಲ. ಇದನ್ನು ನಿಯಂತ್ರಿಸಲು ನಮ್ಮನ್ನು ಆಳುವವರು ಕೂಡಲೇ ಜಸ್ಟಿಸ್ ವರ್ಮಾ ಸಮಿತಿಯ ವರದಿಯನ್ನು ಜಾರಿಗೆ ತರಬೇಕೆಂದು ಆಗ್ರಹಿಸಿದ್ದಾರೆ.